ನ್ಯಾಯಾಧೀಶರಿಂದ ಕೋವಿಡ್ ಜಾಗೃತಿ
Team Udayavani, Apr 15, 2020, 6:23 PM IST
ಯಲಬುರ್ಗಾ: ತಾಲೂಕಿನ ಬೇವೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿವಿಲ್ ನ್ಯಾಯಾಧೀಶರಾದ ಶುಭ ಭೇಟಿ ನೀಡಿ ಪರಿಶೀಲನೆ ನಡೆಸಿದರು
ಯಲಬುರ್ಗಾ: ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆಗಾಗಿ ದಾಖಲಾಗುವ ರೋಗಿಗಳಿಗೆ ವೈದ್ಯರು ಸರಿಯಾಗಿ ಸ್ಪಂದಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಹೇಳಿದರು.
ತಾಲೂಕಿನ ಬೇವೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಕೋವಿಡ್ ವೈರಸ್ ಹಿನ್ನೆಲೆಯಲ್ಲಿ ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿರುವ ಆರೋಗ್ಯ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕಾರ್ಯಕ್ಕೆ ಆರೋಗ್ಯ ಇಲಾಖೆ ಮುಂದಾಗಬೇಕು. ವೈದ್ಯರು ಮಾಸ್ಕ್ ಸೇರಿದಂತೆ ವಿಶೇಷವಾಗಿ ತಮ್ಮ ಆರೋಗ್ಯದ ಹಿತದೃಷ್ಟಿಯಿಂದ ಜಾಗೃತಿ ವಹಿಸಿ ಕಾರ್ಯ ನಿರ್ವಹಿಸಬೇಕು. ಪ್ರತಿಯೊಬ್ಬರು ಕಡ್ಡಾಯವಾಗಿ ಲಾಕ್ಡೌನ್ ಅನ್ನು ಪಾಲಿಸಬೇಕು ಮನೆಯಿಂದ ಯಾರೂ ಹೊರಗಡೆ ಬರಬಾರದು. ಮಹಾಮಾರಿ ಕೊರೊನಾ ನಿರ್ಮೂಲನೆಗೆ ತಾಲೂಕಾಡಳಿತಕ್ಕೆ ಸಹಕಾರ ನೀಡಬೇಕಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಸರಕಾರದ ನಿಯಮಗಳನ್ನು ಪಾಲಿಸಬೇಕು ಎಂದರು. ಸಿವಿಲ್ ನ್ಯಾಯಾಧೀಶರಾದ ಶ್ರೀಶೈಲ ಬಾಗಡೆ, ತಾಲೂಕು ಆರೋಗ್ಯ ಅಧಿಕಾರಿ ಡಾ| ಮಂಜುನಾಥ ಬ್ಯಾಳಹುಣಸಿ, ಡಾ| ವಿವೇಕ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ