ನಿರಾಶ್ರಿತರ ಕೇಂದ್ರಕ್ಕೆ ನ್ಯಾಯಾಧೀಶರ ಭೇಟಿ
Team Udayavani, Apr 9, 2020, 5:11 PM IST
ಯಲಬುರ್ಗಾ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಸ್ಥಾಪಿಸಲಾದ ನಿರಾಶ್ರಿತರ ಕೇಂದ್ರಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಭೇಟಿ ನೀಡಿ ಪರಿಶೀಲಿಸಿದರು.
ಯಲಬುರ್ಗಾ: ಪಟ್ಟಣದ ಕೊಪ್ಪಳ ರಸ್ತೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೊರೊನಾ ಮುಂಜಾಗ್ರತೆ ಕ್ರಮವಾಗಿ ಸ್ಥಾಪಿಸಲಾದ ವಲಸಿಗರ ನಿರಾಶ್ರಿತರ ಕೇಂದ್ರಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ ಅವರು ಬುಧವಾರ ಭೇಟಿ ನೀಡಿ ನಿರಾಶ್ರಿತರ ಆರೋಗ್ಯ ವಿಚಾರಣೆ ನಡೆಸಿ ಕೇಂದ್ರ ಪರಿಶೀಲನೆ ನಡೆಸಿದರು.
ಬಳಿಕ ಹಿರಿಯ ಸಿವಿಲ್ ನ್ಯಾಯಾಧೀಶೆ ಶುಭ ಮಾತನಾಡಿ, ಕೇಂದ್ರದಲ್ಲಿ ಮೈಸೂರನಿಂದ ಬಂದ 18 ಜನರನ್ನು ಈ ಕೇಂದ್ರದಲ್ಲಿ ಇರಿಸಲಾಗಿದೆ. ಕೇಂದ್ರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಕೇಂದ್ರದಲ್ಲಿರುವ ಪ್ರತಿಯೊಬ್ಬರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಕೊರೊನಾ ಮಹಾಮಾರಿ ರೋಗವನ್ನು ಸಂಪೂರ್ಣ ನಿರ್ಮೂಲನೆಗೊಳಿಸಲು ಪ್ರತಿಯೊಬ್ಬರು ಆರೋಗ್ಯ ಇಲಾಖೆಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪ್ರತಿಯೊಬ್ಬರು ವಿಶೇಷವಾಗಿ ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಲಾಕ್ಡೌನ್ನ್ನು ಪ್ರತಿಯೊಬ್ಬ ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸಬೇಕು. ಮನೆಯಲ್ಲಿಯೇ ಇರಬೇಕು. ವಿನಾಕಾರಣ ರಸ್ತೆಗೆ ಇಳಿಯಬಾರದು. ಈಗಾಗಲೇ ಪಕ್ಕದ ಗದಗ ಜಿಲ್ಲೆಯಲ್ಲಿ ಕೊರೊನಾ ಪತ್ತೆಯಾಗಿದ್ದು, ಮಾಹಿತಿ ಇದೆ ಇನ್ನಾದರೂ ತಾಲೂಕಿನ ಜನತೆ ಅತೀ ಜಾಗೃತಿಯಿಂದ ಇರಬೇಕು ಎಂದರು.
ಕಿರಿಯ ಶ್ರೇಣಿ ನ್ಯಾಯಾ ಧೀಶರಾದ ಶ್ರೀಶೈಲ ಬಾಗಡೆ, ಸಮಾಜ ಕಲ್ಯಾಣ ಅಧಿ ಕಾರಿ ವಿ.ಕೆ. ಬಡಿಗೇರ, ಬಿಸಿಎಂ ಅಧಿ ಕಾರಿ ಎಸ್.ವಿ. ಭಜಂತ್ರಿ, ವಸತಿ ಶಾಲೆಯ ಪ್ರಾಚಾರ್ಯ ಅಮೀದಸಾಬ್ ಅತ್ತರ, ಕೋರ್ಟ್ ಸಿಬ್ಬಂದಿ ರಾಘವೇಂದ್ರ ಕೋಳಿಹಾಳ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ
MUST WATCH
ಹೊಸ ಸೇರ್ಪಡೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ
Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ
Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ