ಯಲಬುರ್ಗಾ: ಇಂದಿರಾ ಕ್ಯಾಂಟೀನ್‌ಗೆ ಸಿಗಲಿದೆಯೇ ಮರುಜೀವ?


Team Udayavani, May 29, 2023, 3:49 PM IST

ಯಲಬುರ್ಗಾ: ಇಂದಿರಾ ಕ್ಯಾಂಟೀನ್‌ಗೆ ಸಿಗಲಿದೆಯೇ ಮರುಜೀವ?

ಯಲಬುರ್ಗಾ: ಸ್ಥಳೀಯ ಪಟ್ಟಣದ ಜಿಪಂ ಎಂಜನಿಯರಿಂಗ್‌ ಉಪವಿಭಾಗ ಆವರಣದಲ್ಲಿರುವ ಇಂದಿರಾ ಕ್ಯಾಂಟೀನ್‌ ಅವ್ಯವಸ್ಥೆ ಆಗರವಾಗಿದೆ. ಮತ್ತೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರ ಇಂದಿರಾ ಕ್ಯಾಂಟೀನ್‌ಗೆ ಮರು ಜೀವ ನೀಡಲು
ಮುಂದಾಗಬೇಕು ಎನ್ನುವುದು ಸಾರ್ವಜನಿಕರ ಆಶಯವಾಗಿದೆ.

ಸಿಎಂ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಇಂದಿರಾ ಕ್ಯಾಂಟೀನ್‌ ಕೂಡ ಒಂದಾಗಿದೆ. ರಾಜ್ಯದಲ್ಲಿ ಬಿಜೆಪಿ ಆಡಳಿತ ನಡೆಸುವ ಸಮಯದಲ್ಲಿ ನಿರ್ಲಕ್ಷ್ಯ, ನಿರ್ವಹಣೆ ಕೊರತೆಯಿಂದ ಇಂದಿರಾ ಕ್ಯಾಂಟೀನ್‌ ಕುಂಟುತ್ತಾ ಸಾಗಿದ್ದವು. ಬಡವರ ಹಸಿವು ನೀಗಿಸುವ ಸಲುವಾಗಿ ಸರಕಾರ ಇಂದಿರಾ ಕ್ಯಾಂಟೀನ್‌ ಆರಂಭಿಸಿದೆ. ಪಟ್ಟಣದ ಕ್ಯಾಂಟೀನ್‌ನಲ್ಲಿ ಶುಚಿತ್ವ ಸೇರಿದಂತೆ ಅವ್ಯವಸ್ಥೆ ಎದ್ದು ಕಾಣುತ್ತಿದೆ.

ಬೇಕಾಬಿಟ್ಟಿ ಊಟ ತಯಾರಿಕೆ: ಕಡಿಮೆ ಬೆಲೆಗೆ ಊಟ ಸಿಕ್ಕರೆ ಸಾಕೆಂದು ಕ್ಯಾಂಟೀನ್‌ನತ್ತ ಧಾವಿಸುವವರ ಪೈಕಿ ಬಹುತೇಕ ಜನ ಬಡವರು. ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡಿರುವ ಅಲ್ಲಿನ ಉಸ್ತುವಾರಿಗಳು, ಬೇಕಾಬಿಟ್ಟಿ ಆಹಾರ ತಯಾರಿಸಿ ಹಂಚಿಕೆ ಮಾಡುತ್ತಿದ್ದಾರೆ. ಯಾವುದೇ ನಿಯಮ ಇಲ್ಲಿ ಪಾಲನೆಯಾಗುತ್ತಿಲ್ಲ. ತರಕಾರಿ ಬೆಲೆ ಹೆಚ್ಚಾಗಿದೆ ಎಂಬ ಕಾರಣಕ್ಕೆ ನಿತ್ಯ ಸೊಪ್ಪಿನ ಸಾಂಬರ್‌ ಸಿದ್ಧವಾಗುತ್ತಿದ್ದು, ರಾತ್ರಿಯ ಊಟವೂ ಅಷ್ಟಕ್ಕಷ್ಟೇ ಎಂಬ ಆರೋಪ ಕೇಳಿಬಂದಿದೆ. ಶುಚಿತ್ವ ಮರಿಚೀಕೆಯಾಗಿದೆ.

ಸರಿಯಾದ ವೇತನ ಇಲ್ಲ: ಅಡುಗೆ ತಯಾರಕರಿಗೆ ಹಾಗೂ ಸಿಬ್ಬಂದಿಗೆ ಸರಿಯಾಗಿ ವೇತನ ಪಾವತಿಯಾಗುತ್ತಿಲ್ಲ. ಜತೆಗೆ, ಇತರೆ ಸೌಲಭ್ಯ ಒದಗಿಸಿಲ್ಲ ಎಂಬ ದೂರು ಕೇಳಿಬಂದಿದೆ. ಪ್ರತಿ ತಿಂಗಳು ಪಾವತಿಸುತ್ತಿಲ್ಲ. ಜತೆಗೆ, ಎರಡ್ಮೂರು ತಿಂಗಳಿಗೊಮ್ಮೆ ನೀಡಲಾಗುತ್ತದೆ ಎಂಬ ಅಸಮಾಧಾನ ಕೇಳಿಬಂದಿದೆ.

ಸರಕಾರ ನಿಗದಿಪಡಿಸಿರುವ ಮೆನುವಿನ ಪ್ರಕಾರ ಇಂದಿರಾ ಕ್ಯಾಂಟೀನ್‌ನಲ್ಲಿ ಊಟ ನೀಡುತ್ತಿಲ್ಲ. ಇನ್ನು ಇಲ್ಲಿನ ಶೌಚಾಲಯದ ಉಪಯೋಗ ದೂರದ ಮಾತು. ಸಿಬ್ಬಂದಿಗೆ ವೇತನ ಪಾವತಿಸುತ್ತಿಲ್ಲ. ಅಧಿಕಾರಿಗಳು ಈ ಕುರಿತು ಗಮನ ಹರಿಸಬೇಕು. ಸಾರ್ವಜನಿಕರಿಗೆ ಹಾಗೂ ಸಿಬ್ಬಂದಿಗೆ ಆಗುತ್ತಿರುವ ಅನ್ಯಾಯಕ್ಕೆ ಪರಿಹಾರ ಒದಗಿಸಬೇಕು ಎಂದು ಜನರು ಒತ್ತಾಯಿಸಿದ್ದಾರೆ.
ಕಟ್ಟಡ ಸೋರುತ್ತಿದ್ದು, ಕಿಟಕಿ, ಬಾಗಿಲು, ಚಿಲಕಗಳು ಮುರಿದಿವೆ. ಶುದ್ಧ ಕುಡಿಯುವ ನೀರಿನ ಫಿಲ್ಟರ್‌ ವ್ಯವಸ್ಥೆ ಹಾಳಾಗಿ ಎಂಟು ತಿಂಗಳು ಕಳೆದಿದ್ದರೂ ಅದನ್ನು ಸರಿಪಡಿಸುವ ಗೋಜಿಗೆ ಹೋಗಿಲ್ಲ. ಸಮಸ್ಯೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವಾರು
ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲಎಂದು ಸಾರ್ವಜನಿಕರು ದೂರುತ್ತಾರೆ. ಅವ್ಯವಸ್ಥೆ ನಡುವೆಯೂ ನಡೆಯುತ್ತಿರುವ ಕ್ಯಾಂಟೀನ್‌ ನಲ್ಲಿ ಕಡಿಮೆ ದರದಲ್ಲಿ ಸಿಗುವ ಊಟ, ತಿಂಡಿ ತಿನ್ನಲು ಗ್ರಾಮೀಣ ಪ್ರದೇಶದ ನೂರಾರು ಕಾಲೇಜು ವಿದ್ಯಾರ್ಥಿಗಳು ಇಂದಿರಾ ಕ್ಯಾಂಟೀನ್‌ ಅವಲಂಭಿಸಿದ್ದಾರೆ. ಇನ್ನಷ್ಟು ವ್ಯವಸ್ಥಿತವಾಗಿ ನಡೆದರೆ ಹೆಚ್ಚು ಅನುಕೂಲವಾಗುತ್ತದೆ ಎನ್ನುತ್ತಾರೆ ವಿದ್ಯಾರ್ಥಿಗಳಾದ ರವಿ, ಮಂಜು, ಬಸವರಾಜ.

ಇನ್ನಷ್ಟು ಕ್ಯಾಂಟೀನ್‌ಗೆ ಬೇಡಿಕೆ
ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರಿಗೆ ಅನುಕೂಲವಾಗಲು ತಾಲೂಕಿನಲ್ಲಿ ಇನ್ನೆರಡು ಹೊಸ ಕ್ಯಾಂಟೀನ್‌ಗಳ  ಆರಂಭ ಕೂಗು ತಾಲೂಕಿನಾದ್ಯಂತ ಕೇಳಿ ಬಂದಿದೆ. ಜೊತೆಗೆ ತಾಲೂಕಿನ ಬೇವೂರು, ಹಿರೇವಂಕಲಕುಂಟಾದಲ್ಲಿ ಆರಂಭ ಮಾಡುವಂತೆ ಸಾರ್ವಜನಿಕರು ನೂತನ ಶಾಸಕ ಬಸವರಾಜ ರಾಯರಡ್ಡಿ ಬಳಿ ಮನವಿ ಮಾಡಲು ಸಿದ್ಧರಾಗಿದ್ದಾರೆ.

ಎಂಟು ತಿಂಗಳಿನಿಂದ ಸರಕಾರ ಬಿಲ್‌ ಪಾವತಿ ಮಾಡಿಲ್ಲ. ಹೀಗಾಗಿ ಕ್ಯಾಂಟೀನ್‌ ನಡೆಸುವುದು ಕಷ್ಟಕರವಾಗಿದೆ. ನೂತನ ರಾಜ್ಯ
ಸರಕಾರ ಇಂದಿರಾ ಕ್ಯಾಂಟೀನ್‌ ಕುರಿತು ಯಾವುದೇ ಆದೇಶ ಬಂದಿಲ್ಲ. ಸರಕಾರ ವರದಿ ಕೇಳಿದೆ. ನೂತನ ರಾಜ್ಯ ಸರಕಾರ ಬಿಲ್‌ ಪಾವತಿ ಮಾಡಬೇಕು.
ಶಶಿಕುಮಾರ, ಇಂದಿರಾ ಕ್ಯಾಂಟೀನ್‌ ಉಸ್ತುವಾರಿ

ಇಂದಿರಾ ಕ್ಯಾಂಟೀನ್‌ನಲ್ಲಿ ಶುದ್ಧ ಕುಡಿವ ನೀರಿನ ಘಟಕ ಕೆಟ್ಟಿದ್ದರ ಬಗ್ಗೆ ಗಮನಕ್ಕೆ ಇದೆ. ಶೀಘ್ರದಲ್ಲೇ ದುರಸ್ತಿ ಮಾಡಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡುವಂತೆ ಸೂಚಿಸಿದ್ದೇನೆ. ಶೀಘ್ರದಲ್ಲೇ ಕ್ಯಾಂಟೀನ್‌ಗೆ ಭೇಟಿ ಕೊಟ್ಟು ಸಮಸ್ಯೆ ಪರಿಹಾರಕ್ಕೆ ಮುಂದಾಗುತ್ತೇನೆ.
ಪ್ರಕಾಶ ಮಠದ, ಮುಖ್ಯಾಧಿಕಾರಿ ಪಪಂ

ಮಲ್ಲಪ್ಪ ಮಾಟರಂಗಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ

BJP-SSS

Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.