ಸೇವಾಲಾಲ್ ಆದರ್ಶ ಅಳವಡಿಸಿಕೊಳ್ಳಿ
ಸಮಾಜದ ಏಳ್ಗೆಗೆ ಪ್ರತಿಯೊಬ್ಬರು ಶ್ರಮಿಸಿಸಂತರು ಯಾವುದೇ ಸಮಾಜಕ್ಕೆ ಸೀಮಿತವಲ್ಲ
Team Udayavani, Feb 16, 2020, 3:30 PM IST
ಯಲಬುರ್ಗಾ: ಸಂತ ಶ್ರೀ ಸೇವಾಲಾಲ್ ಮಹಾರಾಜರ ತತ್ವಾದರ್ಶಗಳು ನಮ್ಮ ನಿತ್ಯದ ಬದುಕಿಗೆ ಮಾರ್ಗದರ್ಶಕಗಳಾಗಿವೆ. ಅವುಗಳನ್ನು ಅಳವಡಿಸಿಕೊಂಡು ನಮ್ಮ ಬದುಕನ್ನು ಬಂಗಾರ ಮಾಡಿಕೊಳ್ಳಬೇಕಾಗಿದೆ ಎಂದು ಬಂಜಾರ ಸಮಾಜದ ತಾಲೂಕು ಅಧ್ಯಕ್ಷ ವೆಂಕಟೇಶ ನಾಯಕ ಚಿಕ್ಕಬನ್ನಿಗೋಳ ಹೇಳಿದರು.
ಪಟ್ಟಣದಲ್ಲಿ ಸೇವಾಲಾಲ್ ಜಯಂತಿ ನಿಮಿತ್ತ ಶನಿವಾರ ಮಾರನಾಳ ರಸ್ತೆಯಲ್ಲಿರುವ ಸೇವಾಲಾಲ್ ವೃತ್ತಕ್ಕೆ ವಿಶೇಷ ಪೂಜೆ ಸಲ್ಲಿಸಿ ಅವರು ಮಾತನಾಡಿದರು. ಎಷ್ಟೇ ಕಷ್ಟ ಬಂದರೂ ಮಕ್ಕಳನ್ನು ವಿದ್ಯೆಯಿಂದ ವಂಚನೆ ಮಾಡದೇ ಅವರಿಗೆ ಶಿಕ್ಷಣ ನೀಡುವ ಮೂಲಕ ಅವರನ್ನೇ ಆಸ್ತಿಯನ್ನಾಗಿಸಿಕೊಳ್ಳಬೇಕು. ಸರಕಾರ ನಾನಾ ಸೌಲಭ್ಯ, ಸವಲತ್ತು ಪಡೆದು ಸದ್ಬಳಕೆ ಮಾಡಿಕೊಳ್ಳುವಂತೆ ಕರೆ ನೀಡಿದರು. ಸರಕಾರ ವತಿಯಿಂದ ಸೇವಾಲಾಲ್ ಜಯಂತಿ ಆಚರಿಸಲಾಗುತ್ತಿದೆ. ಕಲಿಯಬೇಕು, ಕಲಿತದ್ದನ್ನು ಇತರರಿಗೂ ಕಲಿಸಿ ಎಲ್ಲರನ್ನೂ ಒಗ್ಗೂಡಿಸಿ ಮುನ್ನಡೆಸಿ ಉದ್ಧರಿಸಬೇಕು ಎಂಬ ಸಂತ ಶ್ರೀ ಸೇವಾಲಾಲ್ ಅವರ ತತ್ವವನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಬಂಜಾರ ರಕ್ಷಣಾ ವೇದಿಕೆ ಅಧ್ಯಕ್ಷ ಪರಶುರಾಮ ನಾಯಕ ಮಾತನಾಡಿ, ಲಂಬಾಣಿ ಸಮಾಜದ ಪ್ರತಿಯೊಬ್ಬರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಯುವ ಜನತೆ ಸಂಘಟಿತರಾಗಬೇಕು ಎಂದರು. ಸಂತ ಸೇವಾಲಾಲ್ ಆದರ್ಶಗಳು ಸಮಾಜಕ್ಕೆ ದಾರಿದೀಪವಾಗಿವೆ. ಅವರ ವಿಚಾರಧಾರೆಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಸಂತ ಸೇವಾಲಾಲ್ ಕುದುರೆ ಸವಾರಿ ಮಾಡುತ್ತಿದ್ದರು. ಸಂತ ಸೇವಾಲಾಲ್ ಧಾರ್ಮಿಕ ಸಂದೇಶ ಸಮಾಜ ಸುಧಾರಣೆಯ ತಿರುಳಾಗಿತ್ತು. ಇದರಿಂದಾಗಿಯೇ ಅವರನ್ನು ಲಂಬಾಣಿ ಸಮುದಾಯಕ್ಕೆ ಸೀಮಿತಗೊಳಿಸಬಾರದು ಸರ್ವರು ಸೇವಾಲಾಲ ಅವರನ್ನು ಆದರ್ಶವಾಗಿಟ್ಟುಕೊಳ್ಳಬೇಕಿದೆ ಎಂದರು. ಯಲ್ಲಪ್ಪ ನಾಯಕ, ಅಚ್ಚಪ್ಪ ನಾಯಕ, ಶಂಕರ ನಾಯಕ, ಹನುಮಂತ ರಾಠೊಡ, ತುಕರಾಂ, ಇತರರು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
Koppala; ಶಿವರಾಜ ತಂಗಡಗಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ: ಕೃಷ್ಣಾ ಇಟ್ಟಂಗಿ
Koppal Lok Sabha constituency; ಲಿಂಗಾಯತ, ಅಹಿಂದ ಮತಗಳೇ ಇಲ್ಲಿ ನಿರ್ಣಾಯಕ
Koppala: ಮೋದಿ ಮೋದಿ ಎಂದರೆ ಕಪಾಳಕ್ಕೆ ಹೊಡಿಯಿರಿ ಎಂದ ಸಚಿವ ತಂಗಡಗಿ ವಿರುದ್ಧ ಪ್ರಕರಣ ದಾಖಲು
“Modi ಜಪಿಸುವ ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಿರಿ’: ಶಿವರಾಜ ತಂಗಡಗಿ