ಗ್ರಾಪಂ ಅಭಿವೃದ್ಧಿಗೆ ಆದ್ಯತೆ ನೀಡಲಿ


Team Udayavani, Jan 25, 2019, 11:22 AM IST

25-january-20.jpg

ಯಲಬುರ್ಗಾ: ಗ್ರಾಮಗಳ ಅಭಿವೃದ್ಧಿಗೆ ಪ್ರಥಮ ಆದ್ಯತೆ ನೀಡುವ ಉದ್ದೇಶದಿಂದ ಗ್ರಾಪಂಗಳಿಗೆ ಸಂವಿಧಾನ ಬದ್ಧವಾದ ಅಧಿಕಾರವನ್ನು ನೀಡಲಾಗಿದೆ ಎಂದು ಅಕ್ಷರ ದಾಸೋಹ ತಾಲೂಕು ಅಧಿಕಾರಿ ಎಫ್‌.ಎಂ. ಕಳ್ಳಿ ಹೇಳಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಗುರುವಾರ ತಾಲೂಕಿನ ಗ್ರಾಪಂ ಸದಸ್ಯರಿಗೆ ಹಾಗೂ ಪಿಡಿಒಗಳಿಗೆ ಹಮ್ಮಿಕೊಂಡ ಹೈಕ ಅಭಿವೃದ್ಧಿ ಯೋಜನೆಯ ಕುರಿತು ಮಾಹಿತಿ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಗಾಂಧೀಜಿ ಅವರ ಕನಸಿನಂತೆ ರೂಪುಗೊಂಡಿರುವ ಗ್ರಾಪಂಗಳು ಗ್ರಾಮಗಳ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರವಹಿಸುತ್ತಿವೆ. ಇದಕ್ಕಾಗಿ ಬಲವಂತರಾಯ ಮೆಹ್ತಾ ಸಮಿತಿ ನೀಡಿರುವ ಹಲವಾರು ವಿಷಯಗಳನ್ನು ಜಾರಿಗೆ ತರಲಾಗಿದೆ ಎಂದರು.

ಗ್ರಾಮೀಣ ಭಾಗದಲ್ಲಿ ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದವರಿಗೂ ಗ್ರಾಮಗಳ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸಲು 73ನೇ ತಿದ್ದುಪಡಿ ಮೂಲಕ ಅವಕಾಶ ನೀಡಲಾಗಿದೆ. ಇದಕ್ಕಾಗಿ ಮೀಸಲಾತಿ ಸೌಲಭ್ಯ ಕಲ್ಪಿಸಲಾಗಿದೆ. ಇದರಿಂದಾಗಿ ಗ್ರಾಪಂಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಸಾಮಾಜಿಕವಾಗಿ ಹಿಂದುಳಿದವರು ಸಹ ಅಧಿಕಾರ ಚಲಾಯಿಸಲು ಅವಕಾಶ ದೊರೆತಿದೆ. 14ನೇ ಹಣಕಾಸು ಯೋಜನೆಯಲ್ಲಿ ಗ್ರಾಪಂಗಳಿಗೆ ಹೆಚ್ಚಿನ ಆರ್ಥಿಕ ಸೌಲಭ್ಯ ದೊರೆತಿದೆ. ನೂತನ ಅಧ್ಯಕ್ಷರು, ಉಪಾಧ್ಯಕ್ಷರು ಸರಕಾರದ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಲು ತರಬೇತಿಯಲ್ಲಿ ಕಾನೂನುಗಳನ್ನು ತಿಳಿದುಕೊಳ್ಳಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿ ತಾಪಂ ವ್ಯವಸ್ಥಾಪಕ ಮಹೇಶಗೌಡ ಮಲ್ಲನಗೌಡ್ರ ಮಾತನಾಡಿ, ತರಬೇತಿಯಲ್ಲಿ ಗ್ರಾಪಂಗಳಿಗೆ ಸಂವಿಧಾನ ಬದ್ಧವಾಗಿ ದೊರೆತಿರುವ ಅಧಿಕಾರ, ಸಾಮಾನ್ಯ ಸಭೆಯ ನಡವಳಿಕೆ, ಸ್ಥಾಯಿ ಸಮಿತಿಗಳ ಕರ್ತವ್ಯ, ಸ್ವಂತ ಸಂಪನ್ಮೂಲಗಳ ಕ್ರೋಢೀಕರಣ, ರಾಜ್ಯ ಮತ್ತು ಕೇಂದ್ರ ಸರಕಾರದ 21 ಅಂಶಗಳು ಸೇರಿದಂತೆ ನಾನಾ ವಿಷಯಗಳನ್ನು ವಿವರವಾಗಿ ತಿಳಿಸಲಾಗುವುದು. ಹೈಕ ಪ್ರದೇಶಾಭಿವೃದ್ಧಿ ಯೋಜನೆಗಳನ್ನು ಗ್ರಾಮೀಣ ಪ್ರದೇಶದಲ್ಲಿ ಯಾವ ರೀತಿ ಪಡೆಯಬೇಕು ಎಂಬುದನ್ನು ಸಮಗ್ರವಾಗಿ ತಿಳಿದುಕೊಳ್ಳಬೇಕು ಎಂದರು.

ಬಿಇಒ ಶರಣಪ್ಪ ವಟಗಲ್ಲ ಮಾತನಾಡಿ, ಹೈಕ ಅನುದಾನದಲ್ಲಿ ತಾಲೂಕಿನ ಶಾಲಾ ಕಟ್ಟಡಗಳು ನಿರ್ಮಾಣವಾಗುತ್ತಿವೆ. ತಾಲೂಕಿನ ಗ್ರಾಪಂಗಳ ಅಧ್ಯಕ್ಷರು ಹಾಗೂ ಪಿಡಿಒಗಳು ಗುಣಮಟ್ಟದ ಕಾಮಗಾರಿ ನಡೆಸಬೇಕು ಹಾಗೂ ಸರ್ಕಾರದಿಂದ ಶೈಕ್ಷಣಿಕ ಅಭಿವೃದ್ಧ್ದಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೊಳಿಸಿದೆ. ಅವುಗಳನ್ನು ತಾಲೂಕಿನಲ್ಲಿ ಸಕಾಲದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

ತಾಲೂಕು ಆರೋಗ್ಯ ಅಧಿಕಾರಿ ಡಾ| ಮಂಜುನಾಥ ಬ್ಯಾಳಹುಣಸಿ, ಪಿ.ವೈ. ಮ್ಯಾಗೇರಿ, ಅಂಗನವಾಡಿ ಮೇಲ್ವಿಚಾರಕಿ ಮಂಜುಳಾ, ಸಂಪನ್ಮೂಲ ವ್ಯಕ್ತಿಗಳಾದ ಉಮೇಶ ನಾಯಕ, ಭೀಮಪ್ಪ ಹವಳಿ, ಗ್ರಾಪಂ ಅಧ್ಯಕ್ಷರು, ಪಿಡಿಒಗಳು ಇದ್ದರು.

ತರಬೇತಿ ಕಾರ್ಯಾಗಾರದ ಸಂದರ್ಭದಲ್ಲಿ ತಾಲೂಕಿನ ಕೆಲ ಗ್ರಾಪಂ ಪಿಡಿಒಗಳು ನಿದ್ರೆಗೆ ಜಾರಿದ್ದರು. ಕೆಲವರು ಫೋನ್‌ ಚಾಟಿಂಗ್‌ನಲ್ಲಿ ತಲ್ಲೀನರಾಗಿವುರು ಕಂಡು ಬಂತು. ತಾಪಂ ವ್ಯವಸ್ಥಾಪಕ ಮಹೇಶಗೌಡ ಮಲ್ಲನಗೌಡ್ರ ಪ್ರತಿಕ್ರಿಯಿಸಿ ತರಬೇತಿ ಸಭಾಂಗಣದಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ನಿದ್ರೆಗೆ ಜಾರಿದ್ದ ಹಾಗೂ ಮೊಬೈಲ್‌ ಚಾಟಿಂಗ್‌ನಲ್ಲಿ ಬ್ಯೂಸಿಯಾಗಿದ್ದ ಪಿಡಿಒಗಳ ವಿರುದ್ಧ ಕ್ರಮಕ್ಕೆ ಸಿಸಿ ಕ್ಯಾಮೆರಾ ವಿಡಿಯೋ ಸಮೇತ ಮೇಲಾಧಿಕಾರಿಗೆ ವರದಿ ನೀಡಲಾಗುವುದು ಎಂದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.