ಹೆಸರು ಬೆಳೆಗೆ ಹಳದಿ ರೋಗ

•ತಾಲೂಕಿನ 13814 ಹೆಕ್ಟೇರ್‌ ಪ್ರದೇಶದಲ್ಲಿ ಹೆಸರು ಬಿತ್ತನೆ •ಕಮರುತ್ತಿದೆ ರೈತರ ಕನಸು

Team Udayavani, Jul 22, 2019, 11:34 AM IST

kopala-tdy-3

ಯಲಬುರ್ಗಾ: ಹೆಸರು ಬೆಳೆಗೆ ಹಳದಿ ರೋಗ ಕಾಣಿಸಿಕೊಂಡಿದೆ.

ಯಲಬುರ್ಗಾ: ಕಳೆದ ನಾಲ್ಕು ವರ್ಷ ನಿರಂತರ ಬರಗಾಲದ ಸಂಕಷ್ಟ ಅನುಭವಿಸಿದ ತಾಲೂಕಿನ ರೈತರು, ಈ ಬಾರಿಯಾದರೂ ಮುಂಗಾರು ಪೂರ್ವ ಅಲ್ಪ, ಸ್ವಲ್ಪ ಮಳೆ ಸುರಿದಿದ್ದರಿಂದ ತಾಲೂಕಿನ ರೈತರು ಹೆಸರನ್ನು ಬಿತ್ತನೆ ಮಾಡಿದ್ದರು. ಲಭ್ಯವಿರುವ ಪ್ರಮಾಣದ ತೇವಾಂಶದಿಂದ ಹೆಸರು ಬೆಳೆ ಚೆನ್ನಾಗಿಯೇ ಬೆಳೆದಿದೆ. ಆದರೆ ಇತ್ತೀಚೆಗೆ ಹಳದಿ ರೋಗ ಕಾಣಿಸಿಕೊಂಡಿದ್ದು, ರೈತರನ್ನು ಚಿಂತೆಗೀಡು ಮಾಡಿದೆ.

ಹವಾಮಾನ ವೈಪರೀತ್ಯದಿಂದ ಹೆಸರು ಬೆಳೆ ಹಳದಿ ಎಲೆ ನಂಜು ರೋಗಕ್ಕೆ ಹಾಗೂ ಕೀಟಬಾಧೆಗೆ ತುತ್ತಾಗಿದ್ದು, ರೈತ ವಲಯದಲ್ಲಿ ಆತಂಕ ಶುರುವಾಗಿದೆ. ಹೆಸರು ಕಡಿಮೆ ವೆಚ್ಚ, ಅಲ್ಪಾವಧಿಯಲ್ಲಿಯೇ ಹೆಚ್ಚು ಲಾಭ ತಂದುಕೊಡುವ ಬೆಳೆಯಾಗಿದ್ದರಿಂದ ಕೃಷಿಕರು ಹೆಚ್ಚಿನ ಪ್ರಮಾಣದಲ್ಲಿ ಮುಂಗಾರಿನ ಸಮಯದಲ್ಲಿ ಈ ಬೆಳೆಯನ್ನೇ ಬಿತ್ತನೆ ಮಾಡಿದ್ದಾರೆ. ಕೀಟ ಬಾಧೆ ಒಕ್ಕರಿಸಿ ಎಲೆಗಳು ಮುದುರಿಕೊಂಡಿವೆ. ಹೆಸರಿಗೆ ಜಿಗಿ ಹುಳು, ಹೇನು, ನಂಜು ರೋಗ ಹಾಗೂ ಬೂದಿ ರೋಗ ತಗುಲಿ ಬೆಳೆ ನೆಲಕಚ್ಚುತ್ತಿದೆ. ಬಂಪರ್‌ ಬೆಳೆಯ ನಿರೀಕ್ಷೆಯಲ್ಲಿದ್ದ ಅನ್ನದಾತನ ಕನಸು ಕಮರುತ್ತಿದೆ.

13814 ಹೆಕ್ಟೇರ್‌ ಬಿತ್ತನೆ: ಕೆಂಪು ಮಿಶ್ರಿತ ಭೂಮಿ, ಎರಿ ಭಾಗ ತಾಲೂಕಿನಲ್ಲಿ ಹೆಚ್ಚಿದೆ. ಯಲಬುರ್ಗಾ, ಮಂಗಳೂರು, ಕುಕನೂರು, ಹಿರೇವಂಕಲಕುಂಟಾ ಭಾಗದಲ್ಲಿ ಹೆಸರು ಬೆಳೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಬಿತ್ತನೆ ಮಾಡಲಾಗಿದೆ.

ಕೃಷಿ ಇಲಾಖೆಯ ಅಂದಾಜಿನ ಪ್ರಕಾರ ಯಲಬುರ್ಗಾ ಹೋಬಳಿ 2850 ಹೆಕ್ಟೇರ್‌, ಕುಕನೂರು ಹೋಬಳಿ 6300 ಹೆಕ್ಟೇರ್‌, ಮಂಗಳೂರು 4574 ಹೆಕ್ಟೇರ್‌, ಹಿರೇವಂಕಲಕುಂಟಾ 90 ಹೆಕ್ಟೇರ್‌, ಈ ರೀತಿಯಾಗಿ ಹೋಬಳಿವಾರು ಬಿತ್ತನೆ ಆಗಿದೆ. ಈ ಪೈಕಿ ಎರಿ ಭಾಗ ಕುಕನೂರು ಹೋಬಳಿಯಲ್ಲಿ ಹೆಚ್ಚು ಹೆಸರು ಬಿತ್ತನೆ ಮಾಡಲಾಗಿದೆ.

ಕುಕನೂರು ಹೋಬಳಿಯ ಚಿಕೇನಕೊಪ್ಪ, ಬಿನ್ನಾಳ, ಸಿದ್ನೇಕೊಪ್ಪ, ಸೋಂಪುರ, ಯರೇಹಂಚಿನಾಳ ಗ್ರಾಮಗಳಲ್ಲಿ ಹೆಸರು ಬೆಳೆ ಚೆನ್ನಾಗಿ ಬೆಳೆದಿದೆ. ಬೆಳೆದು ನಿಂತು ಹೆಸರು ಬೆಳೆ ಕಂಡು ರೈತರು ಸದ್ಯ ಫಸಲಿನ ನಿರೀಕ್ಷೆ ಹೊಂದಿದ್ದಾರೆ. ಆದರೆ ಹಳದಿ ನಂಜು ರೋಗ ರೈತರ ಪಾಲಿಗೆ ಮತ್ತೆ ಶಾಪವಾಗಿದೆ.

ಹೊಲದಲ್ಲಿ ಹೆಸರು ಬೆಳೆ ಹಳದಿ ಬಣಕ್ಕೆ ತಿರುಗಿರುವುದು ಹಾಗೂ ಕೀಟಬಾಧೆಗೆ ತುತ್ತಾಗಿದ್ದರಿಂದ ಹಾಕಿದ ಬಂಡವಾಳ ವಾಪಸ್‌ ಬರತ್ತೋ ಇಲ್ಲವೋ ಎನ್ನೋ ಚಿಂತಿ ಆಗೈತಿ ಎನ್ನುವುದು ರೈತರ ಅಳಲು.

ರೋಗ ನಿಯಂತ್ರಣಕ್ಕೆ ಹರಸಾಹಸ ಪಡುತ್ತಿದ್ದಾರೆ. ತಾಲೂಕಿನ ನಾನಾ ಕಡೆಗಳಲ್ಲಿ ಖಾಸಗಿ ಅಂಗಡಿಯಲ್ಲಿ ಔಷಧ ಪಡೆದು ಸಿಂಪರಣೆ ಮಾಡುವ ಪ್ರಯತ್ನದಲ್ಲಿದ್ದಾರೆ. ಆದರೆ ಬಹುತೇಕ ರೈತರು ಯಾವ ಕ್ರಿಮಿನಾಶಕ ಸಿಂಪರಣೆ ಮಾಡಬೇಕು ಎನ್ನುವ ಮಾಹಿತಿ ಇಲ್ಲದೇ ಆತಂಕದಲ್ಲಿ ಜೀವನ ಕಳೆಯುತ್ತಿದ್ದಾರೆ. ಕೃಷಿ ಇಲಾಖೆ ಅಧಿಕಾರಿಗಳು ಕೂಡ ಜಮೀನುಗಳಿಗೆ ಭೇಟಿ ನೀಡಿ ಮಾಹಿತಿ ನೀಡದ ಕಾರಣ ರೈತರಿಗೆ ದಾರಿ ತೋಚದಾಗಿದೆ. ಸತತ ಬರದಿಂದ ತತ್ತರಿಸಿದ್ದ ರೈತರಿಗೆ ರೋಗ ಬಾಧೆಯಿಂದಾಗಿ ಪುನಃ ನಷ್ಟಕ್ಕೆ ಒಳಗಾಗುವ ಆತಂಕ ಶುರುವಾಗಿದೆ. ಕೃಷಿ ಇಲಾಖೆಯೇ ರೈತರ ನೆರವಿಗೆ ನಿಂತು ರೋಗ ನಿವಾರಣೆಗೆ ಶ್ರಮಿಸಬೇಕಿದೆ.

 

•ಮಲ್ಲಪ್ಪ ಮಾಟರಂಗಿ

ಟಾಪ್ ನ್ಯೂಸ್

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

Gangavati: ಮತದಾನ ಆರಂಭವಾಗಿ 2 ಗಂಟೆ ಕಳೆದರೂ ಮತಗಟ್ಟೆಯತ್ತ ಬಾರದ ಗ್ರಾಮಸ್ಥರು

ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ

ಕುಷ್ಟಗಿ: ಪ್ರಜಾಪ್ರಭುತ್ವ ಉಳಿವಿಗೆ ಮತ, ಪರಿಸರಕ್ಕಾಗಿ ಮರ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

DCM ಡಿಕೆಶಿ, ಶಿವರಾಮೇಗೌಡ ವಿರುದ್ಧ ಜೆಡಿಎಸ್‌ ಆಕ್ರೋಶ: ಹಲವೆಡೆ ಪ್ರತಿಭಟನೆ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

ಹಂತ-2: ಶೇ. 71.4 ಮತ: ಉತ್ತರ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.