ಅಂಜನಾದ್ರಿಯಲ್ಲಿ ವಚನಾನಂದಸ್ವಾಮೀಜಿ ನೇತೃತ್ವದಲ್ಲಿ ಯೋಗಾಸನ ಪ್ರದರ್ಶನ
Team Udayavani, Apr 16, 2022, 12:00 PM IST
ಗಂಗಾವತಿ: ಹನುಮಜಯಂತಿ ನಿಮಿತ್ತ ಅಂಜನಾದ್ರಿಯಲ್ಲಿ ಹರಿಹರದ ಪಂಚಮಸಾಲಿ ಜಗದ್ಗುರು ವಚನಾನಂದ ಸ್ವಾಮೀಜಿಯವರ ನೇತೃತ್ವದಲ್ಲಿ 500 ಕ್ಕೂ ಹೆಚ್ಚು ಯೋಗಪಟುಗಳು ಯೋಗಾಸನದ ವಿವಿಧ ಭಂಗಿಗಳನ್ನು ಪ್ರದರ್ಶನ ಮಾಡಿದರು.
ಈ ಸಂದರ್ಭದಲ್ಲಿ ಪೂಜ್ಯ ವಚನಾನಂದ ಸ್ವಾಮೀಜಿ ಮಾತನಾಡಿ, ಹೆಚ್ಚಾಗಿ ಹನುಮಮಾಲೆಯನ್ನು ಯುವಕರು ಧರಿಸಿ ಒಂದು ಪಯಾಂತರ ನೇಮ ನಿತ್ಯಗಳನ್ನು ಆಚರಣೆ ಮಾಡಿ ದುಶ್ಚಟಗಳನ್ನು ತ್ಯಜಿಸುತ್ತಾರೆ. ಜತೆಗೆ ನಿತ್ಯವೂ ಯೋಗಾಭ್ಯಾಸ ಮಾಡುವುದರಿಂದ ಸದೃಢ ದೇಹ ಮನಸ್ಸು ಹೊಂದಲು ಸಾಧ್ಯವಾಗುತ್ತದೆ. ಹರಿಹರ ಮಠದಿಂದ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಯೋಗಾಸನ ಪ್ರದರ್ಶನ ಮಾಡುವ ಮೂಲಕ ಯೋಗವನ್ನು ಇನ್ನಷ್ಟು ಜನಪ್ರಿಯ ಮಾಡುವ ಯೋಜನೆ ಇದೆ. ಅಂಜನಾದ್ರಿ ಹಿಂದೂಗಳ ಶಕ್ತಿಕೇಂದ್ರವಾಗಿದ್ದು ಹನುಮ ಜಯಂತಿಯಂದು ಇಲ್ಲಿ ಯೋಗಾಸನ ಮಾಡುತ್ತಿರುವುದು ಪ್ರತಿಯೊಬ್ಬರಿಗೂ ಖುಷಿ ಕೊಡುವ ವಿಷಯವಾಗಿದೆ. ಹನುಮ ಭಕ್ತರು ಪ್ರತಿ ನಿತ್ಯವೂ ಯೋಗಾಸನ ಮಾಡಿ ವಜ್ರದೇಹಿಗಳಾಗಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಪತಂಜಲಿ ಯೋಗ ಧ್ಯಾನ ಕೇಂದ್ರದ ರಾಷ್ಟ್ರೀಯ ಮುಖಂಡ ಭವರಲಾಲ್ ಆರ್ಯ, ಕೇಂದ್ರ ಸಚಿವ ಭಗವಂತ ಖೂಭಾ ಸೇರಿ ಗಂಗಾವತಿಯ ಯೋಗ ಮತ್ತು ಧ್ಯಾನ ಸಂಸ್ಥೆಗಳ ಕಾರ್ಯಕರ್ತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ