DJ Sound: ಜಿಲ್ಲಾ ಪೊಲೀಸ್ ಇಲಾಖೆಯ ದ್ವಂದ್ವ ನಿಲುವು; ಡಿಜೆ ಸೌಂಡ್ ಗೆ ಮೃತಪಟ್ಟ ಯುವಕ

ಸಾರ್ವಜನಿಕರಿಂದ ಆಕ್ರೋಶ

Team Udayavani, Oct 10, 2023, 1:19 PM IST

6-gangavathi

ಗಂಗಾವತಿ: ಗಣೇಶ ವಿಸರ್ಜನೆ ಮೆರವಣಿಗೆಯ ಡಿಜೆ ಸೌಂಡ್ ಪರವಾನಿಗೆ ನೀಡುವ ವಿಷಯದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯ ದ್ವಂದ್ವ ನಿಲುವಿನಿಂದಾಗಿ ಗಂಗಾವತಿ ನಗರದಲ್ಲಿ ಯುವಕನೋರ್ವ ಮೆರವಣಿಗೆಯಲ್ಲಿ ಡಿಜೆ ಸೌಂಡ್ ಪರಿಣಾಮ ಮೃತಪಟ್ಟ ಘಟನೆ ಹಾಗೂ ನಗರದಲ್ಲಿ ಕೋಮು ಗಲಭೆಗೆ ಕಾರಣವಾಗಿದ್ದು ಜಿಲ್ಲಾಡಳಿತದ ವಿರುದ್ಧ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಪ್ರಶಾಂತ ನಗರದ ಯುವಕ ಸುದೀಪ್  ರುದ್ರಪ್ಪ ಸಜ್ಜನ (26) ಕುಸಿದು ಬಿದ್ದು ಮೃತಪಟ್ಟವರು.

ಧ್ವನಿವರ್ಧಕ (ಡಿಜೆ) ಬಳಸುವ ಪರವಾನಿಗೆ ನೀಡುವ ಸಂದರ್ಭ ಇಂತಿಷ್ಟು ಪ್ರಮಾಣದಲ್ಲಿ ಧ್ವನಿವರ್ಧಕ ಬಳಸಬೇಕು. ಉದಾಹರಣೆಗಳು ಕಾನೂನಾತ್ಮಕವಾಗಿ ಇದ್ದರೂ ಕೂಡ ಇಲ್ಲಿನ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ.

ಮಸೀದಿ ಮುಂದೆ ಘರ್ಷಣೆ ನಡೆದು ಎರಡು ಕೋಮಿನ ಯುವಕರ ಕೇಸ್  ದಾಖಲಾಗಿದೆ. ಅದರೊಂದಿಗೆ ಕರ್ತವ್ಯ ನಿರ್ಲಕ್ಷ್ಯ ಹಿನ್ನೆಲೆ ಪಿಐ, ಸಿಪಿಐ ಹಾಗೂ ಪೇದೆಯೊರ್ವನ ಅಮಾನತು ಮಾಡಲಾಗಿದೆ.

ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಡಿಜೆ ಪರವಾನಿಗೆ ‌ನಿಯಮಾನುಸಾರ ನೀಡಲು ಅವಕಾಶವಿಲ್ಲ ಎಂದು ಹೇಳಿದ ನಂತರವೂ 5ನೇ ದಿನದ ಗಣೇಶ ವಿಸರ್ಜನೆ ವೇಳೆ ಗಣೇಶನ ಸಮಿತಿಯವರು ಹೆಚ್ಚಿನ ಪ್ರಮಾಣದಲ್ಲಿ ಸೌಂಡ್ ಡಿಜೆ ಬಳಸಿದರೂ ನಾಮಕಾವಸ್ತೆ ಎನ್ನುವಂತೆ ಎರಡು ಡಿಜೆಗಳನ್ನು ಟ್ರ್ಯಾಕ್ಟರ್ ಸಮೇತ  ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಲಾಯಿತು.

13,15 ಮತ್ತು 21 ದಿನಗಳಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಡಿಜೆ ಸೌಂಡ್ ಬಳಸಿದರೂ ಸ್ಥಳದಲ್ಲಿದ್ದ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಆಕ್ಷೇಪಣೆ ಮಾಡಿಲ್ಲ. ಗಂಗಾವತಿ ಪ್ರಶಾಂತನಗರದ ಈಶ್ವರ ಗಜಾನನ ಯುವಕ ಮಂಡಳಿಯು ಗಣೇಶ ವಿಸರ್ಜನೆ ಸಂದರ್ಭದಲ್ಲಿ ಡಿಜೆ ಬಳಕೆ ಮಾಡಿತ್ತು.

ಡಿಜೆ ಸೌಂಡ್‌ಗೆ ಡ್ಯಾನ್ಸ್‌ ಮಾಡುತ್ತಿದ್ದ ಸುದೀಪ್  ರುದ್ರಪ್ಪ ಸಜ್ಜನ ಕುಸಿದು ಬಿದ್ದು ಅಸ್ವಸ್ಥನಾಗಿದ್ದು, ಆಸ್ಪತ್ರೆಗೆ ಸಾಗಿಸುವ ಮಧ್ಯೆ ಸಾವನ್ನಪಿದ್ದಾನೆ. ಸುದ್ದಿ ತಿಳಿಯುತ್ತಿದ್ದಂತೆ ಸಮಿತಿಯವರು ಮೆರವಣಿಗೆ ನಿಲ್ಲಿಸಿ ಗಣೇಶನನ್ನು ವಿಸರ್ಜನೆ ಮಾಡಿದ್ದಾರೆ.

ಪೊಲೀಸ್‌ ವರಿಷ್ಠಾಧಿಕಾರಿ ಯಶೋಧ ವಂಟಗೋಡಿ ನೇತೃತ್ವದಲ್ಲಿ ಸಭೆ ನಡೆಸಿ ಡಿಜೆ ಸೌಂಡ್ ಇಂತಿಷ್ಟು ಇರಬೇಕೆನ್ನುವ ಆದೇಶ ಮಾಡಲಾಗಿತ್ತು.

ಧ್ವನಿವರ್ಧಕ ಪರವಾನಿಗೆ ನೀಡುವ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಅಧಿಕಾರಿಗಳು ನಿರ್ದೇಶನ ಉಲ್ಲಂಘಿಸಿ ಗಣೇಶನ ಸಮಿತಿಯವರು ಹೆಚ್ಚಿನ ಡಿಜೆ ಸೌಂಡ್ ಬಳಸುತ್ತಿರುವುದನ್ನು ತಡೆಗಟ್ಟದೇ  ಮುಂಜಾಗ್ರತೆ ವಹಿಸದ ಹಿನ್ನೆಲೆಯಲ್ಲಿ ಈ ಘಟನೆಗಳು ಜರಗಿವೆ ಎಂದು  ಸಾರ್ವಜನಿಕರ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಟಾಪ್ ನ್ಯೂಸ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.