ಲಾಕ್ಡೌನ್ನಲ್ಲಿ ಮಕ್ಕಳಿಗೆ ಅಕ್ಷರ ಅಭ್ಯಾಸ| ಯುವಕರ ನಿಸ್ವಾರ್ಥ ಸೇವೆಗೆ ಸಲಾಂ
Team Udayavani, Jul 31, 2021, 1:18 PM IST
ಕೊಪ್ಪಳ : ಜಗತ್ತಿಗೆ ಕಂಟಕವಾಗಿ ಕಾಡುತ್ತಿರುವ ಕೋವಿಡ್ ಮಹಾಮಾರಿಯಿಂದ ಶಾಲಾ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ ಸ್ಥಿತಿಯಲ್ಲಿತ್ತು. ಶಾಲೆಯ ಬಾಗಿಲು ಬಂದ್ ಆದವು. ಆನ್ ಲೈನ್ ಶಿಕ್ಷಣ ಶುರುವಾದರೂ ಕೂಡ ಅದು ಎಲ್ಲ ವಿದ್ಯಾರ್ಥಿಗಳಿಗೆ ತಲುಪುದು ಕಷ್ಟವಾಯಿತು. ಅದರಲ್ಲೂ ಆನ್ ಲೈನ್ ತರಗತಿಗಳಿಗೆ ಬೇಕಾದ ಮೊಬೈಲ್ ಕೊಂಡುಕೊಳ್ಳಲು ಆಗದಂತಹ ಅದೆಷ್ಟೋ ಪೋಷಕರು ತಮ್ಮ ಮಕ್ಕಳ ಮುಂದಿನ ಭವಿಷ್ಯದ ಕುರಿತು ಚಿಂತಾಕ್ರಾಂತರಾದರು. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಇಬ್ಬರ ಇವರು ಬಡ ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸುತ್ತಿದ್ದಾರೆ.
ಹೌದು, ಇಲ್ಲಿವರೆಗೂ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಆರಂಭವಾಗಿಲ್ಲ. ಇದರಿಂದ ಮಕ್ಕಳ ಭವಿಷ್ಯದ ಮೇಲೆ ಪೆಟ್ಟು ಬೀಳಲಾರಂಭಿಸಿದೆ. ಇದನ್ನು ಮನಗಂಡ ಕೊಪ್ಪಳ ಜಿಲ್ಲೆಯ ಹಿರೇಸಿಂದೋಗಿ ಗ್ರಾಮದ ಇಬ್ಬರು ಯುವಕರು ತಮ್ಮ ಶಿಕ್ಷಣದ ಜೊತೆಗೆ ತಮ್ಮ ಸುತ್ತಲಿನ ಮಕ್ಕಳಿಗೆ ಎರಡು ವರುಷದಿಂದ ಉಚಿತವಾಗಿ ಅಭ್ಯಾಸ ಮಾಡಿಸುತ್ತಿದ್ದಾರೆ.
ಈ ಯುವಕರು ಹಲವು ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸುವ ಮೂಲಕ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಹಿರೇಸಿಂದೋಗಿ ಗ್ರಾಮದ ಇಬ್ಬರು ಯುವಕರು ತಮ್ಮ ಶಿಕ್ಷಣದ ಜೊತೆಗೆ ತಮ್ಮ ಸುತ್ತಲಿನ ಮಕ್ಕಳಿಗೆ ಎರಡು ವರುಷದಿಂದ ಉಚಿತವಾಗಿ ಅಭ್ಯಾಸ ಮಾಡಿಸುತ್ತಿದ್ದಾರೆ.
ಇದು ತಮ್ಮ ತಮ್ಮ ಕೆಲಸಗಳಲ್ಲಿ ಅವಿರತವಾಗಿ ಶ್ರಮಿಸುವ ಕಾಲ.ಇಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುವವರು ಇದ್ದಾರೆ, ತಮಗಾಗಿ ಬದುಕು ಸವೆಸುವರು ಇದ್ದಾರೆ. ಎರಡು ವರುಷದಿಂದ ನಮ್ಮ ಜೀವನ ಶೈಲಿಯ ಮೇಲೆ ಪ್ರಭಾವ ಬೀರಿರುವ ಕಾಣದ ವೈರಸ್ ಎಲ್ಲ ಕ್ಷೇತ್ರದಲ್ಲಿ ಕೆಟ್ಟ ಪ್ರಭಾವ ಬೀರಿದೆ. ಅದಕ್ಕಿಂತ ಹೆಚ್ಚಿನದಾಗಿ ಭಾರತದ ಮುಂದಿನ ಭವಿಷ್ಯ,ನಮ್ಮೆಲ್ಲರ ಮುಂದಿನ ಕನಸುಗಳಾದ ಮಕ್ಕಳ ಜೀವನದ ಮೇಲೆ ತುಂಬ ಪರಿಣಾಮ ಬೀರಿದೆ. ಆನಲೈನ್ ಕ್ಲಾಸ್,ವಿದ್ಯಾಗಮ, ಸವೇಂದ ಹೀಗೆ ಹಲವು ಯೋಜನೆಗಳ ಮೂಲಕ ಮಕ್ಕಳಿಗೆ ಶಿಕ್ಷಣ ನೀಡಲು ಪ್ರಯತ್ನ ಮಾಡಿದರೂ ಅದು ಸಂಪೂರ್ಣವಾಗಿ ಎಲ್ಲ ಮಕ್ಕಳನ್ನು ತಲುಪಲು ಕಷ್ಟ ಸಾದ್ಯವಾಗಿತ್ತು..ಇಂತಹ ಪರಿಸ್ಥಿತಿಯಲ್ಲಿ ಮುತ್ತುರಾಜ ಮಠದ ಮತ್ತು ಶಿದ್ಲಿಂಗಪ್ಪ ಮಡಿವಾಳರ ಇಬ್ಬರು ಯುವಕರು ತಮ್ಮ ಶಿಕ್ಷಣದ ಜೊತೆಗೆ ತಮ್ಮ ಸುತ್ತಲಿನ ಮಕ್ಕಳಿಗೆ ಎರಡು ವರುಷದಿಂದ ಉಚಿತವಾಗಿ ಅಭ್ಯಾಸ ಮಾಡಿಸುತ್ತಿದ್ದಾರೆ.
ಯಾವುದೇ ಅಪೇಕ್ಷೆ ಇಲ್ಲದೆ ತಮ್ಮದೆ ಖರ್ಚಿನಲ್ಲಿ ಸುಮಾರು 60 ರಿಂದ 100 ಮಕ್ಕಳಿಗೆ ಶಿಕ್ಷಣ ಕೊಡುತ್ತಿದ್ದಾರೆ. ವಿದ್ಯಾರ್ಥಿಗಳ ಈ ನಿಸ್ವಾರ್ಥ ಸಮಾಜಸೇವೆ ಊರಿನ ಹಿರಿಯರು, ವಿದ್ಯಾರ್ಥಿಗಳ ಪೋಷಕರು ಧನ್ಯವಾದ ತಿಳಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ