ಅಸ್ತಮಾ ಪೀಡಿತರಿಗೆ ಉಚಿತ ಔಷಧಿ

•ಮೃಗಶಿರ ಮಳೆ ಕೂಡುವ ವೇಳೆ ಔಷಧಿ ವಿತರಣೆ•ಕುಲಕರ್ಣಿ ಕುಟುಂಬದಿಂದ ಉಚಿತ ಸೇವೆ

Team Udayavani, Jun 10, 2019, 10:34 AM IST

10-Juen-6

ಕೊಪ್ಪಳ: ಅಸ್ತಮಾ ರೋಗಕ್ಕೆ ಔಷಧಿ  ಪಡೆಯಲು ಆಗಮಿಸಿದ ಜನತೆ

ಕೊಪ್ಪಳ: ಮೃಗಶಿರ ಮಳೆ ಕೂಡುವ ಸಮಯದಲ್ಲಿ ತಾಲೂಕಿನ ಕುಟಗನಹಳ್ಳಿಯ ಕುಲಕರ್ಣಿ ಕುಟುಂಬವೊಂದು ಹಲವು ವರ್ಷಗಳಿಂದ ಅಸ್ತಮಾ ರೋಗಿಗಳಿಗೆ ಗಿಡಮೂಲಿಕೆಗಳಿಂದ ಕೂಡಿದ ಔಷಧಿ ಉಚಿತ ವಿತರಣೆ ಮಾಡುತ್ತಿದ್ದು, ಶನಿವಾರ ಮಧ್ಯರಾತ್ರಿ ಸಾವಿರಾರು ಜನರಿಗೆ ಔಷಧಿ ವಿತರಿಸಲಾಯಿತು.

ಕುಟಗನಹಳ್ಳಿಯಲ್ಲಿ ಅಶೋಕರಾವ್‌ ಕುಲಕರ್ಣಿ ಕುಟುಂಬವು ಹಲವು ವರ್ಷಗಳಿಂದ ಮೃಗಶಿರ ಮಳೆ ಕೂಡುವ ಸಮಯದಲ್ಲಿ ಈ ಔಷಧಿ ವಿತರಣೆ ಮಾಡುತ್ತಾ ಬಂದಿದೆ. ಇಲ್ಲಿನ ಔಷಧಿ ಸೇವನೆ ಮಾಡಿದರೆ ಅಸ್ತಮಾ ರೋಗ ನಿವಾರಣೆಯಾಗಲಿದೆ ಎನ್ನುವ ನಂಬಿಕೆ ಜನತೆಯಲ್ಲಿದೆ. ಹಾಗಾಗಿ ರಾಜ್ಯ ಸೇರಿದಂತೆ ಅನ್ಯ ರಾಜ್ಯದಿಂದಲೂ ಜನತೆ ಪ್ರತಿ ವರ್ಷವೂ ಆಗಮಿಸುತ್ತಾರೆ.

ಈ ಬಾರಿ ಮೃಗಶಿರಾ ಮಳೆಯು ಶನಿವಾರ ರಾತ್ರಿ 11:30ಕ್ಕೆ ಕೂಡಿದ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆಯೇ ವಿವಿಧ ಕಡೆಯಿಂದ ಆಗಮಿಸಿದ್ದ ಜನತೆ ಗ್ರಾಮದ ಹೊರ ವಲಯದ ಬಯಲು ಪ್ರದೇಶದಲ್ಲಿ ವಾಸ್ತವ್ಯ ಮಾಡಿದ್ದರು. ಸಂಜೆ ಗ್ರಾಮದ ತುಂಬೆಲ್ಲ ಜನಜಾತ್ರೆ ಎನ್ನುವಂತೆ ಭಾಸವಾಗಿತ್ತು.

ಅಶೋಕರಾವ್‌ ಕುಲಕರ್ಣಿ ಕುಟುಂಬ ಗ್ರಾಮ ವ್ಯಾಪ್ತಿಯಲ್ಲಿನ ಗುಡ್ಡಗಾಡು ಪ್ರದೇಶದಲ್ಲಿ ಸುತ್ತಾಡಿ ಗಿಡಮೂಲಿಕೆಗಳ ಎಲೆಗಳನ್ನು ತಂದು ಅವುಗಳನ್ನು ಮಿಶ್ರಣ ಮಾಡಿ ಸಣ್ಣ ಮಾತ್ರೆ ರೂಪದಲ್ಲಿ ಸಿದ್ಧಪಡಿಸಿಟ್ಟುಕೊಂಡಿರುತ್ತದೆ. ಪ್ರತಿ ವರ್ಷ ಮೃಗಶಿರ ಮಳೆ ಕೂಡುವ ವೇಳೆ ಈ ಔಷಧಿ ವಿತರಣೆ ಮಾಡಲಾಗುತ್ತಿದೆ. ಸುತ್ತಲಿನ ಸಾವಿರಾರು ಜನರು ಈ ಔಷಧಿ ಸೇವನೆ ಮಾಡಿದರೆ ಅಸ್ತಮಾ ರೋಗ ವಾಸಿಯಾಗಲಿದೆ ಎನ್ನುವ ನಂಬಿಕೆಯಿದೆ. ಜೊತೆಗೆ ಅಸ್ತಮಾ ರೋಗ ಇಲ್ಲದೇ ಇರುವವರೂ ಸಹಿತ ಇದನ್ನು ಸೇವನೆ ಮಾಡುತ್ತಿದ್ದಾರೆ. ಶನಿವಾರ ಮಧ್ಯ ರಾತ್ರಿ ಕುಲಕರ್ಣಿ ಕುಟುಂಬ ಪೂಜೆ ಸಲ್ಲಿಸಿ ಜನಸ್ತೋಮಕ್ಕೆ ಔಷಧಿ ವಿತರಣೆ ಮಾಡಿತು.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.