ಅಕ್ರಮ ಮರಳು ದಂಧೆಗೆ ಕಡಿವಾಣ ಎಂದು?

ಎಲ್ಲೆಂದರಲ್ಲಿ ಕಂದಕದಂತೆ ತೆಗೆದರೂ ಸುಮ್ಮನಿದ್ದಾರೆ ಅಧಿಕಾರಿಗಳು•ಮರಳುಗಾರಿಕೆಯಿಂದ ಕೃಷಿಗೆ ಹೊಡೆತ

Team Udayavani, Jun 5, 2019, 1:18 PM IST

5-June-29

ಕೊಪ್ಪಳ: ತಾಲೂಕಿನ ಗೊಂಡಬಾಳ ಸಮೀಪದ ಬೂದಿಹಾಳ ಬಳಿ ಅಕ್ರಮ ಮರಳು ದಂಧೆ ನಡೆದಿರುವುದು.

ಕೊಪ್ಪಳ: ಜಿಲ್ಲೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಅಕ್ರಮ ಮರಳು ಮಾಫಿಯಾಗೆ ಕಡಿವಾಣ ಇಲ್ಲವೆಂಬಂತಾಗಿದೆ. ಹಗಲಲ್ಲೇ ನಿರ್ಭಯವಾಗಿಯೇ ಮರಳು ಎತ್ತಿ ಸಾಗಿಸುತ್ತಿದ್ದರೂ ಪೊಲೀಸ್‌ ಇಲಾಖೆ ಮೌನವಾಗಿದೆ.

ತಾಲೂಕಿನ ಗೊಂಡಬಾಳ ಸೀಮಾದ ಬೂದಿಹಾಳ ಸೇತುವೆ ಬಳಿ ಅಕ್ರಮ ಮರಳು ದಂಧೆ ಜೋರಾಗಿ ನಡೆದಿದ್ದು, ಸೇತುವೆ ಪಕ್ಕದಲ್ಲೇ ಕಂದಕದ ರೀತಿಯಲ್ಲಿ ಬೃಹದಾಕಾರದ ತಗ್ಗು ತೆಗೆದು ಮರಳನ್ನು ಎತ್ತುವಳಿ ಮಾಡಲಾಗುತ್ತಿದೆ. ಹಳ್ಳದ ಎಡ, ಬಲ ಭಾಗದಲ್ಲಿ ಇಂದಿಗೂ ಅಲ್ಲಲ್ಲಿ ಸರ್ಕಾರಿ ಜಮೀನಿನಲ್ಲಿ ಮರಳು ದಂಧೆ ನಡೆಯುತ್ತಿದ್ದರೂ ಯಾವುದೇ ಕ್ರಮವಾಗುತ್ತಿಲ್ಲ. ಸರ್ಕಾರದ ಬೊಕ್ಕಸಕ್ಕೆ ಬರಬೇಕಾದ ಕೋಟಿಗಟ್ಟಲೆ ಹಣ ದಂಧೆಕೋರರ ಪಾಲಾಗುತ್ತಿದೆ.

ಜನಜೀವನ ಅಸ್ತವ್ಯಸ್ತ: ಮಿತಿ ಮೀರಿದ ಮರಳು ದಂಧೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮೊದಲೇ ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಬರದ ಛಾಯೆ ಹೆಚ್ಚಾಗುತ್ತಿದ್ದು, ಕೃಷಿ ಬದುಕು ದುಸ್ತರವಾಗುತ್ತಿದೆ. ಇದರ ಅರಿವಿದ್ದರೂ ಮರಳು ದಂಧೆಕೋರರು ಇದ್ಯಾವುದನ್ನು ಲೆಕ್ಕಿಸದೇ ತಮ್ಮ ಲಾಭಕ್ಕಾಗಿ ಸರ್ಕಾರಿ ಜಮೀನಿನಲ್ಲೇ ಹಗಲು-ರಾತ್ರಿ ಎನ್ನದೇ ಮರಳು ತುಂಬಿ ಮಾರಾಟ ಮಾಡುತ್ತಿದ್ದಾರೆ.

ಮಿತಿ ಮೀರಿದ ದಂಧೆಗೆ ಹಳ್ಳದ ನೀರನ್ನೇ ನೆಚ್ಚಿ ಕೃಷಿ ಮಾಡುತ್ತಿದ್ದ ಜನರ ಜೀವನಕ್ಕೆ ದಂಧೆಕೋರರು ಕೊಳ್ಳಿ ಇಡುತ್ತಿದ್ದಾರೆ. ಹಳ್ಳದ ನೀರು ಬತ್ತಿ ಹೋಗಿ ಬೆಳೆ ಒಣಗುತ್ತಿವೆ. ಹಳ್ಳದ ದಂಡೆಗಳಲ್ಲಿ ಕುಡಿಯಲು ನೀರೂ ಲಭಿಸುತ್ತಿಲ್ಲ. ಬೋರವೆಲ್ ವಿಫಲವಾಗುತ್ತಿವೆ.

ಪೊಲೀಸರ-ಅಧಿಕಾರಿಗಳ ಭಯವಿಲ್ಲ: ಈ ಹಿಂದೆ ಬೂದಿಹಾಳ ಸೇತುವೆ ಬಳಿ ತಹಶೀಲ್ದಾರ್‌ ನೇತೃತ್ವದಲ್ಲಿ ದಾಳಿ ನಡೆಸಿ 10ಲಕ್ಷ ರೂ. ನಷ್ಟು ಅಕ್ರಮ ಮರಳು ಸೀಜ್‌ ಮಾಡಲಾಗಿತ್ತು. ಆದರೆ, ಆ ಸ್ಥಳದಲ್ಲಿ ಸೀಜ್‌ ಮಾಡಿದ ಮರಳು ಇಲ್ಲವೇ ಇಲ್ಲ. ಮತ್ತೆ ಅದೇ ಸ್ಥಳದಲ್ಲೇ ಇನ್ನಷ್ಟು ಕಂದಕದಂತೆ ದಂಧೆಕೋರರು ಮರಳು ಎತ್ತಿ ಸಾಗಿಸುತ್ತಿದ್ದಾರೆ. ದಂಧೆಕೋರರಿಗೆ ಅಧಿಕಾರಿಗಳ, ಪೊಲೀಸರ ಭಯವೇ ಇಲ್ಲವಾಗಿದೆ.

ಮರಳು ಲಾರಿ ಸಿಕ್ಕಾಗ ಕೇಸ್‌ ಮಾಡ್ತಾರೆ. ದಂಡ ಹಾಕ್ತಾರೆ. ಮತ್ತೆ ವಾಹನ ಬಿಟ್ಟು ಬಿಡ್ತಾರೆ ಎನ್ನುವ ಉತ್ತರಗಳು ಸಾಮಾನ್ಯವಾಗುತ್ತಿವೆ. ಹೀಗಾಗಿ ಕುಳಗಳಿಗೆ ಯಾರ ಭಯವೂ ಇಲ್ಲವೆನೋ ಎನ್ನುವ ಪ್ರಶ್ನೆ ಕಾಡುತ್ತಿದೆ.

ಇದು ಕೇವಲ ಬೂದಿಹಾಳ ಸೇತುವೆ ಬಳಿ ಅಷ್ಟೇ ಅಲ್ಲ ಜಿಲ್ಲೆಯಾದ್ಯಂತ ಹಳ್ಳದ ತಾಣದಲ್ಲಿ ಯತೇಚ್ಛವಾಗಿ ಈ ದಂಧೆ ನಡೆಯುತ್ತದೆ. ಜಿಲ್ಲೆಯಲ್ಲಿ ಸರ್ಕಾರಿ ಮರಳು ಸಂಗ್ರಹಣಾ ಘಟಕಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಇದರಿಂದಾಗಿ ಉದ್ದೇಶಪೂರ್ವಕವೇ ಮರಳು ಅಭಾವ ಸೃಷ್ಟಿ ಮಾಡಿ ದಂಧೆಕೋರರು ಮಾಫಿಯಾದಲ್ಲಿ ಮುಳುಗಿದ್ದಾರೆ.

ಒಟ್ಟಿನಲ್ಲಿ ಅಕ್ರಮ ಮರಳು ದಂಧೆಯಿಂದ ಜಿಲ್ಲೆಯ ಜನಜೀವನ ತಲ್ಲಣಗೊಂಡಿದೆ. ಕೃಷಿ ಬದುಕು ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿದೆ. ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ನೋಡಿಯೂ ನೋಡದಂತಿದ್ದರೆ ಇಂತಹ ದಂಧೆಗೆ ಕಡಿವಾಣ ಇಲ್ಲದಂತಾಗುತ್ತದೆ.

ಜಿಲ್ಲೆಯ ವಿವಿಧೆಡೆ ಮರಳು ಅಕ್ರಮದ ಕುರಿತು ದೂರುಗಳು ಕೇಳಿ ಬರುತ್ತಿವೆ. ನಾವೂ ಸಹಿತ ಹಲವೆಡೆ ದಾಳಿ ನಡೆಸಿ ದಂಡ ವಿಧಿಸಿ ಪ್ರಕರಣ ದಾಖಲಿಸುತ್ತಿದ್ದೇವೆ. ಬೂದಿಹಾಳ ಬಳಿ ಮರಳು ದಂಧೆ ಈ ಹಿಂದೆ ನಡೆದಿದ್ದು, ಅಲ್ಲಿನ ಮರಳು ಸೀಜ್‌ ಮಾಡಿ ನಿರ್ಮಿತಿ ಕೇಂದ್ರಕ್ಕೆ ಹಂಚಿಕೆ ಮಾಡಿದೆ. ಮತ್ತೆ ಮರಳು ದಂಧೆ ನಡೆದ ಬಗ್ಗೆ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಇನ್ಮುಂದೆ ಮರಳು ದಂಧೆಯಲ್ಲಿ ತೊಡಗಿದ ವಾಹನಗಳು ಪತ್ತೆಯಾದಲ್ಲಿ ಸೀಜ್‌ ಮಾಡುವ ಯೋಚನೆ ಮಾಡುತ್ತಿದ್ದೇವೆ.
ಪಿ.ಸುನೀಲ್ ಕುಮಾರ,
ಜಿಲ್ಲಾಧಿಕಾರಿ, ಕೊಪ್ಪಳ

ಟಾಪ್ ನ್ಯೂಸ್

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.