ಪಿಜಿ ಕೇಂದ್ರದ ಸಮಸ್ಯೆಯನ್ನೊಮ್ಮೆ ನೋಡಿ


Team Udayavani, Oct 19, 2019, 12:05 PM IST

19-October-8

„ದತ್ತು ಕಮ್ಮಾರ
ಕೊಪ್ಪಳ
: ಜಿಲ್ಲಾ ಕೇಂದ್ರಕ್ಕೆ ಸ್ನಾತಕೋತ್ತರ ಕೇಂದ್ರ ಮಂಜೂರಾತಿ ಮಾಡಿ ಎನ್ನುವ ಬಹುವರ್ಷಗಳ ಬೇಡಿಕೆಗೆ ಸರ್ಕಾರ ಸ್ಪಂದಿಸಿ ವಿಜಯನಗರ ಶ್ರೀಕೃಷ್ಣ ದೇವರಾಯ ಸ್ನಾತಕೋತ್ತರ ಅಧ್ಯಯನ ಕೇಂದ್ರ ಆರಂಭಿಸಿದೆ. ಆದರೆ ನಾಲ್ಕು ವರ್ಷಗಳಿಂದ ಕೇಂದ್ರಕ್ಕೆ ಸ್ವಂತ ನೆಲೆಯಿಲ್ಲ. ಈ ನಡುವೆ 13 ಎಕರೆ ಜಮೀನು ಸಿಕ್ಕಿದ್ದು, ಅನುದಾನದ ಕೊರತೆ ಎದುರಿಸುತ್ತಿದೆ.

ಇಲ್ಲಿನ ಜನಪ್ರತಿನಿಧಿಗಳು ಸರ್ಕಾರದ ಗಮನ ಸೆಳೆಯಬೇಕಿದೆ. ಕೊಪ್ಪಳದ ವಿಜಯನಗರ ಶ್ರೀಕೃಷ್ಣ ದೇವರಾಯ ಸ್ನಾತಕೋತ್ತರ ಕೇಂದ್ರದಲ್ಲಿ ಮೊದಲು 7 ವಿಭಾಗಗಳನ್ನು ಆರಂಭಿಸಲಾಗಿತ್ತು. ಆದರೆ ಬೇಡಿಕೆಗೆ ತಕ್ಕಂತೆ ಪ್ರಸ್ತುತ 10 ವಿವಿಧ ವಿಭಾಗಗಳನ್ನು ಆರಂಭ ಮಾಡಲಾಗಿದೆ.

ಅದರಲ್ಲಿ ಅರ್ಥಶಾಸ್ತ್ರ, ವಿಜ್ಞಾನ, ಕನ್ನಡ, ಇಂಗ್ಲಿಷ್‌, ಸಮಾಜ ವಿಜ್ಞಾನ, ಇತಿಹಾಸ, ಪ್ರತಿಕೋದ್ಯಮ, ಎಂಎಸ್‌ಡಬ್ಲ್ಯೂ , ಎಂಕಾಂ ಹಾಗೂ ರಾಜ್ಯಶಾಸ್ತ್ರ ವಿಭಾಗ ಆರಂಭಿಸಲಾಗಿದೆ.

500 ವಿದ್ಯಾರ್ಥಿಗಳು: ಪ್ರಸ್ತುತ ಸ್ನಾತಕೋತ್ತರ ಕೇಂದ್ರದಲ್ಲಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದು, ಪ್ರತಿ ವಿಭಾಗದಲ್ಲಿ 40 ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ಬೇಡಿಕೆಗೆ ತಕ್ಕಂತೆ ವಿದ್ಯಾರ್ಥಿಗಳಿಗೆ ಇಲ್ಲಿ ಪ್ರವೇಶಾತಿ ನೀಡಲು ಸಾಧ್ಯವಾಗುತ್ತಿಲ್ಲ ಎನ್ನುವ ಮಾತು ಕೇಳಿ ಬಂದಿದೆ. ಪ್ರತಿವರ್ಷ ನೂರಾರು ವಿದ್ಯಾರ್ಥಿಗಳು ಪ್ರವೇಶಾತಿಗೆ ಆಗಮಿಸುತ್ತಾರೆ. ಆದರೆ ಎಲ್ಲರಿಗೂ ಸೀಟ್‌ ಲಭ್ಯವಾಗದ ಹಿನ್ನೆಲೆಯಲ್ಲಿ ಅನ್ಯ ಜಿಲ್ಲೆಗಳಲ್ಲಿ ಇರುವ ಸ್ನಾತಕೋತ್ತರ ಕೇಂದ್ರಗಳತ್ತ ಮುಖ ಮಾಡಬೇಕಿದೆ.

ವಿದ್ಯಾರ್ಥಿನಿಯರಿಗೆ ಸದಾವಕಾಶ: ಈ ಭಾಗದ ವಿದ್ಯಾರ್ಥಿನಿಯರು ಈಗಷ್ಟೇ ಸ್ನಾತಕೋತ್ತರ ಕೇಂದ್ರ ಜಿಲ್ಲಾ ಕೇಂದ್ರದಲ್ಲೇ ಇದೆ ಎನ್ನುವ ಧೈರ್ಯದಿಂದ ಸ್ನಾತಕ ಪದವಿ ಪಡೆಯಲು ಮುಂದಾಗುತ್ತಿದ್ದಾರೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿಯರು ಧೈರ್ಯದಿಂದಲೇ ನಗರದಲ್ಲೇ ಸ್ನಾತಕೋತ್ತರ ಪದವಿ ಶಿಕ್ಷಣ ಪಡೆಯುತ್ತಿದ್ದಾರೆ.

13 ಎಕರೆ ಜಮೀನು ಮಂಜೂರು: ಈ ಹಿಂದೆ ಕಾಂಗ್ರೆಸ್‌ ಸರ್ಕಾರದಲ್ಲಿ ಉನ್ನತ ಶಿಕ್ಷಣ ಸಚಿವರಾಗಿದ್ದ ಬಸವರಾಜ ರಾಯರಡ್ಡಿ ಅವರ ಶ್ರಮದ ಫಲವಾಗಿ ಜಿಲ್ಲಾ ಕೇಂದ್ರದಲ್ಲಿ ಸ್ನಾತಕೋತ್ತರ ಕೇಂದ್ರ ಆರಂಭವಾಗಿದೆ. ಇದು 2 ವರ್ಷಗಳಿಂದ ತಾತ್ಕಾಲಿಕ ಕಟ್ಟಡದಲ್ಲೇ ನಡೆಯುತ್ತಿದೆ. ಹಳೇ ಜಿಲ್ಲಾಸ್ಪತ್ರೆಯಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಸೂಕ್ತ ವಾತಾವರಣ ಇಲ್ಲ.

ಎಲ್ಲೆಂದರಲ್ಲಿ ತ್ಯಾಜ್ಯವೇ ಕಾಣಿಸುತ್ತಿದೆ. ಅಧ್ಯಯನಕ್ಕೂ ತೊಂದರೆಯಾಗುತ್ತಿದೆ. ಇದೆಲ್ಲವನ್ನು ಅರಿತು ಈ ಹಿಂದೆ ರಾಯರಡ್ಡಿ ಅವರೇ ಮಳೆ ಮಲ್ಲೇಶ್ವರ ದೇವಸ್ಥಾನ ಸಮೀಪದಲ್ಲಿ 13 ಎಕರೆ ಜಮೀನನ್ನು ಸ್ನಾತಕೋತ್ತರ ಕೇಂದ್ರಕ್ಕೆ ಹಸ್ತಾಂತರ ಪ್ರಕ್ರಿಯೆಗೂ ಮುಂದಾಗಿದ್ದರು. ಜಮೀನು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಹೆಸರಿಗೆ ಹಸ್ತಾಂತರಗೊಂಡಿದೆ.

ಬೇಕಿದೆ 55.83 ಕೋಟಿ: ಮಳೆ ಮಲ್ಲೇಶ್ವರದ ಬಳಿ ಮಂಜೂರಾದ ಜಮೀನಲ್ಲೆ ಕಟ್ಟಡ ನಿರ್ಮಾಣಕ್ಕೆ 55.85 ಕೋಟಿ ರೂ. ಬೇಡಿಕೆಯ ಪ್ರಸ್ತಾವನೆಯನ್ನು ವಿವಿಯಿಂದ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಆದರೆ ರಾಜ್ಯದಲ್ಲಿ ತಿಂಗಳಿಗೊಂದು ರಾಜಕೀಯ ವಿದ್ಯಮಾನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ನಾತಕೋತ್ತರ ಕೇಂದ್ರಕ್ಕೆ ಸರ್ಕಾರ ಯಾವುದೇ ಅನುದಾನ ಮಂಜೂರು ಮಾಡುತ್ತಿಲ್ಲ. ಈ ಹಿಂದಿನ ಕಾಂಗ್ರೆಸ್‌ ಸರ್ಕಾರವೂ ಅನುದಾನ ನೀಡಿಲ್ಲ. ಮೈತ್ರಿ ಸರ್ಕಾರವೂ ಅನುದಾನ ನೀಡಲಿಲ್ಲ. ಈಗಿನ ಬಿಜೆಪಿ ಸರ್ಕಾರವೂ ಅನುದಾನ ನೀಡುವ ಬಗ್ಗೆ ಚಕಾರವೆತ್ತಿಲ್ಲ. ಸರ್ಕಾರ ಅಗತ್ಯಕ್ಕೆ ತಕ್ಕಂತೆ ಅನುದಾನ ನೀಡಿದರೆ ಮಾತ್ರ ಸ್ನಾತಕೋತ್ತರ ಕೇಂದ್ರದ ಕಟ್ಟಡ ಎದ್ದು ನಿಲ್ಲಲಿದೆ.

ಆತಂಕ: ಈ ಹಿಂದೆ ಜಿಲ್ಲೆಯಲ್ಲಿ ಎರಡು ಸ್ನಾತಕೋತ್ತರ ಕೇಂದ್ರ ಮಂಜೂರಾಗಿವೆ. ಕೊಪ್ಪಳ ಹಾಗೂ ಯಲಬುರ್ಗಾದಲ್ಲಿ ಕೇಂದ್ರ ಆರಂಭವಾಗಿವೆ. ಆದರೆ ಯಲಬುರ್ಗಾ ಕೇಂದ್ರಕ್ಕೆ ಕಟ್ಟಡ ನಿರ್ಮಾಣ ಮಾಡಲು ಅನುದಾನವೂ ಮಂಜೂರಾಗಿದೆ. ಆದರೆ ಕೊಪ್ಪಳ ಕೇಂದ್ರಕ್ಕೆ ಇಲ್ಲಿವರೆಗೂ ಹಣದ ನೆರವು ಸಿಗದ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಕೊಪ್ಪಳದಲ್ಲಿನ ಕೇಂದ್ರವನ್ನೇ ಬಂದ್‌ ಮಾಡಿ ಯಲಬುರ್ಗಾದಲ್ಲಿ ಕೇಂದ್ರ ಉಳಿಸಿಕೊಂಡರೇ ಇಲ್ಲಿನ ವಿದ್ಯಾರ್ಥಿಗಳಿಗೆ ತೊಂದರೆ ಆಗಲಿದೆ ಎಂದು ಶಿಕ್ಷಣ ಪ್ರೇಮಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.