ಕಾಲುವೆ ಕಾರ್ಯಾಚರಣೆ ಶೇ. 80ರಷ್ಟು ಯಶಸ್ವಿ

•12 ಟನ್‌ ಮರಳಿನ ಮೂಟೆ ಇಳಿಬಿಟ್ಟ ಅಧಿಕಾರಿಗಳು •ನಾಲ್ಕು ದಿನಗಳಿಂದ ನಿರಂತರ ನಡೆದ ದುರಸ್ತಿ ಕಾರ್ಯ

Team Udayavani, Aug 17, 2019, 1:21 PM IST

Udayavani Kannada Newspaper

ಕೊಪ್ಪಳ: ತುಂಗಭದ್ರಾ ಜಲಾಶಯದ ಎಡದಂಡೆ ಮೇಲ್ಮಟ್ಟದ ಕಾಲುವೆ ಕಿತ್ತು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ನಾಲ್ಕು ದಿನಗಳಿಂದ ಕಾರ್ಯಾಚರಣೆ ನಡೆಸಿದ್ದು, ಶುಕ್ರವಾರ ಸಂಜೆ ವೇಳೆ ಶೇ. 80ರಷ್ಟು ಕಾರ್ಯಾಚರಣೆ ಯಶಸ್ವಿಯಾಗಿದ್ದು, ಅಧಿಕಾರಿ ವರ್ಗ ಹಾಗೂ ಜನ ನಾಯಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ತುಂಗಭದ್ರಾ ಡ್ಯಾಂಗೆ ಈ ವರ್ಷ ಭಾರಿ ಪ್ರಮಾಣದಲ್ಲಿ ಒಳ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಡ್ಯಾಂನಲ್ಲಿ ಆ. 13ರೊಳಗೆ 90 ಟಿಎಂಸಿಯಷ್ಟು ನೀರು ಸಂಗ್ರಹವಾಗಿತ್ತು. ನದಿಪಾತ್ರದಡಿ ಮಳೆ ಸುರಿದ ಹಿನ್ನೆಲೆಯಲ್ಲಿ ಒಳ ಹರಿವಿನ ಪ್ರಮಾಣವೂ 2 ಲಕ್ಷ ಕ್ಯೂಸೆಕ್‌ಗೂ ಹೆಚ್ಚಾಗಿತ್ತು. ಹಾಗಾಗಿ ನೀರಾವರಿ ಇಲಾಖೆ ಅಧಿಕಾರಿಗಳು ನೀರನ್ನು ನದಿಪಾತ್ರಗಳಿಗೆ ಹರಿ ಬಿಟ್ಟಿದ್ದರು. ಆದರೂ ಡ್ಯಾಂ ಎಡದಂಡೆ ಮೇಲ್ಮಟ್ಟದ ಕಾಲುವೆ ಗೇಟ್ ಸರಿಯಾದ ನಿರ್ವಹಣೆ ಇಲ್ಲದೇ ಮುರಿದು ಹೋದ ಹಿನ್ನೆಲೆಯಲ್ಲಿ ಡ್ಯಾಂನಿಂದ ಆ. 13ರಂದು ಬೆಳಗ್ಗೆ 8:30ಕ್ಕೆ ಅತ್ಯಧಿಕ ಪ್ರಮಾಣದಲ್ಲಿ ನೀರು ಹರಿಯುತ್ತಿತ್ತು. ಇದರಿಂದ ಆತಂಕಗೊಂಡ ಅಧಿಕಾರಿ ವರ್ಗ ಮೊದಲ ದಿನವೇ ನೀರು ನಿಲ್ಲಿಸುವ ಪ್ರಯತ್ನ ನಡೆಸಿ ವಿಫಲವಾಗಿತ್ತು. ಇದು ಸುತ್ತಲಿನ ಅಚ್ಚುಕಟ್ಟು ಪ್ರದೇಶದ ರೈತರಲ್ಲೂ ಆತಂಕ ಮೂಡಿಸಿದ್ದಲ್ಲದೇ, ಈ ಬಾರಿ ಕಾಲುವೆಗೆ ನೀರು ಹರಿದು ಬರುತ್ತದೆಯೋ ಇಲ್ಲವೋ ಎನ್ನುವ ಆತಂಕ ವ್ಯಕ್ತಪಡಿಸಿದ್ದರು.

ಕಾರ್ಯಾಚರಣೆಯಲ್ಲಿದ್ದ ತಂಡ: ಗೇಟ್ ಮುರಿದು ಹೋದ ವಿಷಯ ತಿಳಿಯುತ್ತಿದ್ದಂತೆ ನೀರಾವರಿ ನಿಗಮದ ಎಂಡಿ ಮಲ್ಲಿಕಾರ್ಜುನ ಗುಂಗೆ, ಸಿಇ ಮಂಜಪ್ಪ ಸ್ಥಳದಲ್ಲೇ ಠಿಕಾಣಿ ಹೂಡಿ ಹಲವು ಕಾರ್ಯತಂತ್ರಗಳ ಕುರಿತು ಯೋಜನೆ ರೂಪಿಸುತ್ತಿದ್ದರು. ಗೇಟ್‌ನ ಭಾಗದಲ್ಲಿ ಕೈಗೊಳ್ಳುವ ಕಾರ್ಯದ ಕುರಿತು ಚರ್ಚೆ ನಡೆಸಿದ್ದರು. ಇವರೊಂಡಿಗೆ ಬೆಳಗಾವಿ ಮುಳುಗು ತಜ್ಞರ ತಂಡ, ಜಿಂದಾಲ್ ತಜ್ಞರ ತಂಡ ಸೇರಿದಂತೆ ತುಂಗಭದ್ರಾ ಸ್ಟೀಲ್ ಪ್ರೊಡೆಕ್ಟ್ ತಂಡವು ನಿರಂತರ ಕಾರ್ಯಾಚರಣೆ ನಡೆಸಿ ಒಂದು ಹಂತಕ್ಕೆ ಯಶಸ್ವಿ ಕಂಡಿದೆ.

ನಾಲ್ಕು ದಿನಗಳಿಂದ ನಡೆದ ಕಾರ್ಯಾಚರಣೆಯಲ್ಲಿ ಶುಕ್ರವಾರ 100 ಟನ್‌ ಸಾಮರ್ಥ್ಯದ ಕ್ರೇನ್‌ ಮೂಲಕ 12 ಟನ್‌ ಮರಳಿನ ಮೂಟೆಯನ್ನು ನೀರು ಹರಿಯುವ ಸ್ಥಳದಲ್ಲಿ ಇಳಿ ಬಿಟ್ಟಿದ್ದೆವು. ಇದರಲ್ಲಿ ಶೇ. 70ರಿಂದ 80ರಷ್ಟು ನಾವು ಯಶಸ್ವಿಯಾಗಿದ್ದೇವೆ. ಡ್ಯಾಂನಲ್ಲಿ ಅಧಿಕ ನೀರಿರುವುದರಿಂದ ಶೇ. 100ರಷ್ಟು ಯಶಸ್ವಿ ಸಾಧ್ಯವಿಲ್ಲ. ಈಗ ನೀರು ಹರಿಯುವ ಪ್ರಮಾಣ ಕಡಿಮೆಯಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ಮಾಡಿಸಲಿದ್ದೇನೆ.
ಮಲ್ಲಿಕಾರ್ಜುನ ಗುಂಗೆ
 ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.