ಸ್ವಾತಂತ್ರ್ಯೋತ್ಸವ ಅದ್ಧೂರಿ ಆಚರಣೆಗೆ ಸಕಲ ಸಿದ್ಧತೆ

ತಹಶೀಲ್ದಾರ್‌ ಜಿ.ಅನಿಲ್‌ ಕುಮಾರ ಮಾಹಿತಿ

Team Udayavani, Jul 26, 2019, 3:45 PM IST

26-July-34

ಕೊಟ್ಟೂರು: ಸ್ವಾತಂತ್ರ್ಯೋತ್ಸವ ಪೂರ್ವ ಸಿದ್ಧತಾ ಸಭೆಯಲ್ಲಿ ತಹಶೀಲ್ದಾರ್‌ ಮಾತನಾಡಿದರು

ಕೊಟ್ಟೂರು: ತಾಲೂಕು ಆಡಳಿತದಿಂದ ಆ. 15 ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ಧೂರಿ ಮತ್ತು ವೈಭವದಿಂದ ಆಚರಿಸಲು ಸಿದ್ಧತೆ ನಡೆದಿದೆ ಎಂದು ತಹಶೀಲ್ದಾರ ಜಿ.ಅನಿಲ್ ಕುಮಾರ ತಿಳಿಸಿದರು.

ಕೊಟ್ಟೂರಿನ ಪ್ರವಾಸಿ ಮಂದಿರದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕು ಆಡಳಿತದಿಂದ ಇಲ್ಲಿನ ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದಲ್ಲಿ ಆ. 15ರ ಬೆಳಗ್ಗೆ 8:30ಕ್ಕೆ ಧ್ವಜಾರೋಹಣ ನಡೆಯಲಿದೆ. ಶಾಸಕ ಎಸ್‌. ಭೀಮಾನಾಯ್ಕ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಪ್ರತಿಯೊಂದು ಶಾಲಾ ಮಕ್ಕಳಿಗೆ ಶಾಸಕ ಎಸ್‌. ಭೀಮಾನಾಯ್ಕರು ಸಿಹಿಯನ್ನು ಕಳುಹಿಸಲಿದ್ದು ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ಎಲ್ಲಾ ಮಕ್ಕಳಿಗೂ ಮತ್ತು ಶಿಕ್ಷಕರಿಗೆ ಬೆಳಗಿನ ಉಪಾಹಾರ ವ್ಯವಸ್ಥೆ ಆಯೋಜಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಕಾರ್ಯಕ್ರಮ ಯಶಸ್ವಿಗೊಳಿಸಲು ವಿವಿಧ ಬಗೆ ಉಪಸಮಿತಿಗಳನ್ನು ರಚಿಸಲಾಗುವುದು. ಫೆರೆಡ್‌ ಮತ್ತು ಕವಾಯಿತು ಪ್ರದರ್ಶನವನ್ನು ಪೊಲೀಸ್‌ ಮತ್ತು ಶಿಕ್ಷಣ ಇಲಾಖೆಯವರು ಸಹಯೋಗದೊಂದಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶಿಕ್ಷಣ ಇಲಾಖೆಯವರು ನಿರ್ವಹಿಸುತ್ತಾರೆ.

ಸ್ವಾತಂತ್ರ ಹೋರಾಟಗಾರರ ಕುಟುಂಬದವರು ಮತ್ತು ಇತರ ಸಾಧಕರನ್ನು ಸನ್ಮಾನಿಸಿ ಅಭಿನಂದಿಸಲು ಉಪಸಮಿತಿ ಶಿಫಾರಸ್ಸು ಪಡೆಯಲಾಗುವುದು. ರಸಪ್ರಶ್ನೆ, ಪರಿಸರ ಮತ್ತು ಭಾಷಣ ಸ್ಪರ್ಧೆಗಳನ್ನು ಪ್ರಾಥಮಿಕ ಪ್ರೌಢಶಾಲಾ ಮತ್ತು ಕಾಲೇಜು ಹಂತಗಳಲ್ಲಿ ನಡೆಸಿ ಅದರಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ನೀಡಲಾಗುವುದು. ಸಮಾರಂಭದ ವೇದಿಕೆ ನಿರ್ಮಾಣ ಮತ್ತು ಸ್ವಚ್ಛತಾ ಕಾರ್ಯವನ್ನು ಪಟ್ಟಣ ಪಂಚಾಯಿತಿ ಆಡಳಿತ ನಿರ್ವಹಿಸಲಿದೆ ಎಂದು ಹೇಳಿದರು.

ಜಿಪಂ ಸದಸ್ಯ ಎಂ.ಎಂ. ಜೆ ಹರ್ಷವರ್ಧನ ಮಾತನಾಡಿ, ಕಾರ್ಯಕ್ರಮದ ಯಶಸ್ವಿಗೆ ಹಣಕಾಸಿನ ನೆರವು ಅಗತ್ಯವಿದ್ದು ಅದಕ್ಕಾಗಿ ಸ್ವಂತವಾಗಿ 10 ಸಾವಿರರೂಗಳನ್ನು ತಾಲೂಕು ಆಡಳಿತಕ್ಕೆ ನೀಡಲಾಗುವುದು ಎಂದರು. ಹಗರಿಬೊಮ್ಮನಹಳ್ಳಿ ತಾಪಂ ಉಪಾಧ್ಯಕ್ಷ ಕೊಚಾಲಿ ಸುಶೀಲಮ್ಮ ಮಂಜುನಾಥ ಮಾತನಾಡಿ, ಸಮಾರಂಭದಲ್ಲಿ ಮಾಜಿ ಯೋಧರು ಮತ್ತು ಸ್ವಾತಂತ್ರ್ಯ ಹೋರಾಟಗಾರರ ಕುಟುಂಬದವರನ್ನು ಮತ್ತು ಇತರ ಗಣ್ಯರನ್ನು ಸನ್ಮಾನಿಸುವ ವೆಚ್ಚವನ್ನು ತಾವು ಭರಿಸುವುದಾಗಿ ಹೇಳಿದರು.

ತಾಪಂ ಸದಸ್ಯರಾದ ಬೋರವೆಲ್ ತಿಪ್ಪೇಸ್ವಾಮಿ, ಭರಮಣ್ಣ, ಸಿದ್ದಯ್ಯ, ವಿನಯ್‌, ವೀಣಾ ವಿವೇಕಾನಂದಗೌಡ, ತೋಟದ ರಾಮಣ್ಣ, ಕೆಂಗರಾಜ್‌, ರಾಜೇಶ ಮಾತನಾಡಿ, ಸಮಾರಂಭದಲ್ಲಿ ಪೌರ ಕಾರ್ಮಿಕರನ್ನು ಸನ್ಮಾನಿಸುವ ವೆಚ್ಚವನ್ನು ಭರಿಸುವುದಾಗಿ ಪ್ರಕಟಿಸಿದರು.

ಪಪಂ ಮುಖ್ಯಾಧಿಕಾರಿ ಎಚ್.ಎಫ್‌. ಬಿದರಿ, ಖಜಾನೆ ಅಧಿಕಾರಿ ಶಕುಂತಲಮ್ಮ, ಎಸ್‌ಎಸ್‌ಐ ಗುರುಸ್ವಾಮಿ ಶಿಕ್ಷಣ ಇಲಾಖೆ ಅಧಿಕಾರಿಗಳಾದ ಸಿ.ಅಜ್ಜಪ್ಪ, ಕೊಟ್ರೇಶ, ತಾಪಂ ಸದಸ್ಯ ಗುರುಮೂರ್ತಿ ಶ್ಯಾನುಬೋಗರ್‌, ಎಪಿಎಂಸಿ ಅಧ್ಯಕ್ಷ ಬೂದಿ ಶಿವಕುಮಾರ, ಪಿ. ಸುಧಾಕರಗೌಡ ಇದ್ದರು. ಕಂದಾಯ ಇಲಾಖೆಯ ಎಸ್‌.ವಿ. ಬಸವರಾಜ ವಂದಿಸಿದರು.

ಟಾಪ್ ನ್ಯೂಸ್

Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ? Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

Nagamangala Case: ಎನ್‌ಐಎ ತನಿಖೆಗೆ ಬಿಜೆಪಿ ಆಗ್ರಹ

goa

Goa Beachನಲ್ಲಿ ಮದುವೆ: ದಿನಕ್ಕೆ 1 ಲಕ್ಷ ರೂ. ಶುಲ್ಕ

1-ddsadsa

Amit Shah; ತಡೆಯದಿದ್ದರೆ ಅಕ್ರಮ ವಲಸಿಗರೇ ಬಹುಸಂಖ್ಯಾಕರಾಗುತ್ತಾರೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Madikeri ಭಾಗದ ಅಪರಾಧ ಸುದ್ದಿಗಳು

Madikeri ಭಾಗದ ಅಪರಾಧ ಸುದ್ದಿಗಳು

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ? Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

Kasturi Rangan ವರದಿಗೆ ಮತ್ತೆ ರಾಜ್ಯ ತಿರಸ್ಕಾರ?

Electric scooter

Battery production ಅಮೆರಿಕ ಹೂಡಿಕೆ; ಚೀನಕ್ಕೆ ಸಡ್ಡು

CHandrababu Naidu

Tirupati Laddus row;ತಪ್ಪಿತಸ್ಥರನ್ನು ಸುಮ್ಮನೆ ಬಿಡಲು ಸಾಧ್ಯವೇ?: ಸಿಎಂ ನಾಯ್ಡು ಪ್ರಶ್ನೆ

1-ambani

Ambani;1,000 ಕೋಟಿಯ ವಿಮಾನ ಖರೀದಿಸಿದ ಮುಕೇಶ್‌ ಅಂಬಾನಿ

ISREL

Israel- ಹೆಜ್ಬುಲ್ಲಾ ನಡುವೆ ಬಾಂಬ್‌ಗಳ ಸುರಿಮಳೆ! ; 100 ರಾಕೆಟ್‌ ಲಾಂಚರ್‌ ಧ್ವಂಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.