ಇಂದು ಉಜ್ಜಯಿನಿ ಮರುಳ ಸಿದ್ದೇಶ್ವರ ಸ್ವಾಮಿ ರಥೋತ್ಸವ

ಶಿಖರಕ್ಕೆ ತೈಲಾಭಿಷೇಕ ಇಲ್ಲಿನ ವಿಶಿಷ್ಠ ಆಚರಣೆ

Team Udayavani, May 9, 2019, 10:12 AM IST

9-May-3

ಕೊಟ್ಟೂರು: ಉಜ್ಜಯಿನಿ ಸದ್ಧರ್ಮ ಪೀಠದ ಶಿಖರ ಒಳಾಂಗಣ ದೃಶ್ಯ.

ಕೊಟ್ಟೂರು: ಪಂಚಪೀಠ ಖ್ಯಾತಿಯ ಉಜ್ಜಯಿನಿ ಮರುಳು ಸಿದ್ದೇಶ್ವರ ಸ್ವಾಮಿಯ ಮಹಾ ರಥೋತ್ಸವ ಮೇ 9ರಂದು ಗುರುವಾರ ನಡೆಯಲಿದೆ. ಉಜ್ಜಯಿನಿ ಮರುಳ ಸಿದ್ದೇಶ್ವರಸ್ವಾಮಿ ದೇವಾಲಯ ಕೇವಲ ವೀರಶೈವ ಪಂಚಪೀಠವಾಗಿರದೆ ಪೌರಾಣಿಕ, ಐತಿಹಾಸಿಕ, ಧಾರ್ಮಿಕ, ಉತ್ಕೃಷ್ಟ ಮಾದರಿ ಶಿಲ್ಪ ಕಲೆಯ ತವರೂರಾಗಿದೆ. ಹಂಪೆಯ ಶಿಲ್ಪಕಲಾ ವೈಭವ ಮತ್ತು ಉಜ್ಜಯಿನಿಯ ದೇವಾಲಯದ ಶಿಲ್ಪಕಲೆಯ ಸೂಕ್ಷ್ಮ ಅವಲೋಕಿಸಿದ ಪೂರ್ವಜರು ಹಂಪಿಯನ್ನು ಹೊರಗೆ ನೋಡು, ಉಜ್ಜಯಿನಿಯನ್ನು ಒಳಗೆ ನೋಡು ಎಂದಿರುವುದು ಅತಿಶೋಕ್ತಿಯ ಮಾತಲ್ಲ. ಉತ್ತರ ದಿಕ್ಕಿನಿಂದ ಪ್ರವೇಶಿದರೆ ಗಾರೆ ಇಟ್ಟಿಗೆಯಿಂದ ನಿರ್ಮಿಸಿರುವ ವಿಜಯನಗರ ಶೈಲಿಯ ನಾಲ್ಕು ಅಂತಸ್ತಿನ ಗೋಪುರವಿರುವುದು ಕಾಣುತ್ತದೆ. ಇದನ್ನು ಮೊದಲು ತಂಗಾಳಿ ಗೋಪುರವೆಂದು ಕರೆಯುತ್ತಿದ್ದರು. ಇಲ್ಲಿಯೇ ಪೀಠದ ಜಗದ್ಗುರುಗಳು ಅಂತಸ್ತಿನ ಪ್ರಶಾಂತವಾದ ಸ್ಥಳದಲ್ಲಿ ಸಂಸ್ಕೃತ ಪಠಿಸಿ, ಗ್ರಂಥ ರಚಿಸುತ್ತಿದ್ದರು ಎಂದು ಇತಿಹಾಸ ಹೇಳುತ್ತದೆ.

ದೇವಸ್ಥಾನದ ಹೊರ ಮೇಲ್ಬಾಗದಲ್ಲಿರುವ ಗರ್ಭಗುಡಿ ಶಿಖರವು ಮೂಲತಃ ಸುಂದರ ಕೆತ್ತನೆಯಿಂದಿರಬಹುದಾಗಿದೆ. ಶಿಖರಕ್ಕೆ ಪ್ರತಿ ವರ್ಷವೂ ತೈಲಾಭಿಷೇಕ ನಡೆಯುವುದರಿಂದ ಎಣ್ಣೆಯ ಜಿಡ್ಡಿನಿಂದ ಕೆತ್ತನೆ ಕಾಣದಂತಾಗಿದೆ. ಶಿಖರದ ತೈಲಾಭಿಷೇಕ ದಕ್ಷಿಣ ಭಾರತದಲ್ಲಿಯೇ ವಿಶಿಷ್ಟ ಆಚರಣೆಯಾಗಿದೆ. ಇಡೀ ಶಿಖರಕ್ಕೆ ತೈಲವನ್ನು ಸುರಿಯುವುದು ಇಲ್ಲಿನ ವಿಶಿಷ್ಟ ಸಂಪ್ರದಾಯವೆನಿಸಿದೆ. ಪ್ರಸ್ತುತ ಪೀಠದ ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಮಾರ್ಗದರ್ಶನದಲ್ಲಿ ಪೀಠವು ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಮಹತ್ತರವಾದ ಸಾಧನೆ ಮಾಡುವತ್ತ ತನ್ನನ್ನು ತಾನು ತೊಡಗಿಸಿಕೊಂಡಿದೆ ಉಜ್ಜಯಿನಿ ಪೀಠ.

ಸದ್ಧರ್ಮ ಪೀಠದ ವಾರ್ಷಿಕ ಧಾರ್ಮಿಕ ಮಹೋತ್ಸವ ಮರುಳಸಿದ್ದೇಶ್ವರ ಸ್ವಾಮಿ ರಥೋತ್ಸವಕ್ಕೆಂದೆ ಈಗಾಗಲೇ ಎಲ್ಲ ಬಗೆಯ ಸಿದ್ಧತೆ ಕೈಗೊಳ್ಳಲಾಗಿದೆ. ಈ ಬಾರಿಯ ರಥೋತ್ಸವ ಪ್ರಯುಕ್ತ ಸಾಮೂಹಿಕ ವಿವಾಹ, ಶಿವದೀಕ್ಷೆ ಕಾರ್ಯಕ್ರಮಗಳು ಇನ್ನೂ ಅನೇಕ ಧಾರ್ಮಿಕ ಕೈಂಕರ್ಯ ಹಮ್ಮಿಕೊಳ್ಳಲಾಗಿದೆ.
•ಸಿದ್ದಲಿಂಗ ರಾಜದೇಶಿ ಕೇಂದ್ರ ಶಿವಾಚಾರ್ಯರು,
ಉಜ್ಜಯಿನಿ ಸದ್ಧರ್ಮ ಪೀಠ.

ಮಹಾರಥೋತ್ಸವ ಹಿನ್ನೆಲೆಯಲ್ಲಿ ಸಿದ್ಧಪಡಿಸಿದ ರಥವನ್ನು ಪರೀಕ್ಷಿಸಿ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್‌ ಸುರಕ್ಷತಾ ಪ್ರಮಾಣ ಪತ್ರ ನೀಡಿದ್ದಾರೆ. ಯಾವುದೇ ಅವಘಡ ಆಗದಂತೆ ಎಲ್ಲ ಬಗೆಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಜನರ ನಿಯಂತ್ರಣಕ್ಕೆಂದೆ ಭಾರೀ ಪ್ರಮಾಣದಲ್ಲಿ ಪೊಲೀಸ್‌ ಬಂದೋಬಸ್ತ್ ನಿಯೋಜಿಸಲು ಸೂಚಿಸಲಾಗಿದೆ.
•ರವೀಂದ್ರ ಕುರಬಗಟ್ಟಿ, ಸಿಪಿಐ.

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.