ಮೆಕ್ಕೆಜೋಳಕ್ಕೆ ಸೈನಿಕ ಹುಳು ಕಾಟ
ಕೀಟಬಾಧೆಗೆ ಬೇಸತ್ತು ಬೆಳೆ ನಾಶ•ಬಾರದ ಮಳೆ-ಒಣಗುತ್ತಿವೆ ಬೆಳೆ
Team Udayavani, Sep 20, 2019, 3:24 PM IST
ಕೊಟ್ಟೂರು: ಬೆಳವಣಿಗೆ ಕುಂಠಿತವಾಗಿರುವ ಬೆಳೆಯನ್ನು ನಾಶಗೊಳಿಸಿರುವ ರೈತ ಮಹಿಳೆ.
•ರವಿಕುಮಾರ.ಎಂ.
ಕೊಟ್ಟೂರು: ತಾಲೂಕಿನೆಲ್ಲೆಡೆ ಬಿತ್ತನೆ ಯಾಗಿರುವ ಮೆಕ್ಕೆಜೋಳದ ಬೆಳೆಗೆ ಸೈನಿಕ ಹುಳುಗಳ ಹಾವಳಿ ಹೆಚ್ಚಾಗಿದ್ದು ಬೇಸತ್ತ ಅನ್ನದಾತ ಬೆಳೆ ನಾಶಕ್ಕೆ ಮುಂದಾಗಿದ್ದಾರೆ.
ಲಕ್ಷ್ಮೀದೇವಿ ಅವರು ಕೀಟ ಭಾದೆಯಿಂದ ತಮ್ಮ 4 ಎಕರೆ ಜಮೀನಿನಲ್ಲಿ ಬೆಳೆದ ಬೆಳೆಯನ್ನು ನಾಶ ಮಾಡಿದ್ದಾರೆ. ಕಳೆದ 2 ವರ್ಷದಿಂದ ಸಮರ್ಪಕ ಮಳೆಯಾಗದೇ ಬಹುತೇಕ ಕೊಳವೆ ಬಾವಿಗಳು ಬತ್ತಿ ಹೋಗಿದ್ದು, ಬಿತ್ತಿದ ಬೀಜ ಮೊಳಕೆಯೊಡೆಯದೇ ಕೈಚಲ್ಲಿ ಕುಳಿತುಕೊಳ್ಳುವ ಹಾಗಾಗಿದೆ. ಇದರ ಮಧ್ಯೆ ಸೈನಿಕ ಹುಳುವಿನ ಕಾಟ ರೈತರನ್ನು ಹೈರಾಣಾಗಿಸಿದೆ.
ಕಳೆದ ವರ್ಷ ಇದೇ ಅವಧಿಯಲ್ಲಿ ಶೇ. 75ರಷ್ಟು ಬಿತ್ತನೆಯಾಗಿತ್ತು. ಆದರೂ ರೈತರು ಉತ್ತಮ ಮಳೆಯಾಗಬಹುದೆಂಬ ನಿರೀಕ್ಷೆ ಇಟ್ಟುಕೊಂಡು ಬಿತ್ತನೆ ಬೀಜಗಳನ್ನು ಬಿತ್ತಿದ್ದರೂ ಅವುಗಳೆಲ್ಲಾ ಮಳೆ ಇಲ್ಲದೆ ಒಣಗಲಾರಂಭಿಸಿವೆ. ತಾಲೂಕಿಗೆ ಯಾವುದಾದರೂ ಮೂಲದಿಂದ ನೀರಾವರಿ ಯೋಜನೆ ಜಾರಿಗೊಳಿಸಿ ಕೂಡಲೇ ಕೆರೆಕಟ್ಟೆಗಳಿಗೆ ನೀರೊದಗಿಸಿ ಅನ್ನದಾತನ ಬೆಳೆಗಳಿಗೆ ಜೀವ ಭರಿಸಿ ಈ ಭಾಗದ ಬಡ ರೈತರಿಗೆ ಅನುಕೂಲ ಮಾಡಬೇಕಾಗಿದೆ. ಈಗಾಗಲೇ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಜಾರಿಗೆಯಾದರೂ ಸಹ ಇನ್ನೂ ಯಾವುದೇ ಕೆಲಸಗಳು ನಡೆದಿಲ್ಲ. ಅಧಿಕಾರಿಗಳಾಗಲಿ ಜನಪ್ರತಿನಿಧಿಗಳಾಗಲಿ ಇದರತ್ತ ಗಮನಹರಿಸುತ್ತಿಲ್ಲ. ಇದರಿಂದ ಮಳೆಯನ್ನೇ ನಂಬಿ ಕುಳಿತುಕೊಳ್ಳುವಂತ ಸ್ಥಿತಿ ಎದುರಾಗಿದೆ.
ಸೈನಿಕ ಹುಳು ಬಾಧೆದೆಗೆ ಬೇಸತ್ತು ಏಕಾಏಕಿ ಬೆಳೆ ನಾಶಕ್ಕೆ ಮುಂದಾಗಬೇಡಿ. ಹತ್ತಿರದ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ಪಡೆದು ಬೆಳೆ ರಕ್ಷಣೆಗೆ ಮುಂದಾಗಿ. ಬೆಳೆವಿಮೆ ಕುರಿತು ಮೇಲಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು.
•ಜಿ. ಅನಿಲ್ಕುಮಾರ್,
ತಹಶೀಲ್ದಾರ್, ಕೊಟ್ಟೂರು
ಕಳೆದ 3 ವರ್ಷದಿಂದ ಸಮರ್ಪಕವಾಗಿ ಮಳೆಯಾಗಿಲ್ಲ. ಜಾನುವಾರುಗಳಿಗೆ ಮೇವು ಇಲ್ಲ. ಈ ವರ್ಷವೂ ಹದ ಮಳೆ ಬಂದಿಲ್ಲ. ಮುಂದೇನು ಎಂಬ ಚಿಂತೆ ಕಾಡುತ್ತಿದೆ. ಸರ್ಕಾರ ಕೆರೆ ತುಂಬಿಸುವ ಯೋಜನೆಗೆ ಚಾಲನೆ ನೀಡಿ ರೈತರ ಆತಂಕ ದೂರಮಾಡಲಿ.
•ವೀರಯ್ಯ ಮೂಲಿಮನಿ, ರೈತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
Puttur ಎಲೆಕ್ಷನ್ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ