ಕಾಂಗ್ರೆಸ್‌ ಪ್ರಣಾಳಿಕೆ ಜೀವಕೇಂದ್ರಿತ:ಡಾ| ಬಿ.ಎಲ್‌.ಶಂಕರ್‌


Team Udayavani, Apr 6, 2019, 4:52 PM IST

Udayavani Kannada Newspaper

ಚಿಕ್ಕಮಗಳೂರು: ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆ ಜನರ ಬದುಕಿಗೆ ಸಂಬಂಧಿ ಸಿದ ಜೀವಕೇಂದ್ರಿತವಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಡಾ| ಬಿ.ಎಲ್‌. ಶಂಕರ್‌ ಬಣ್ಣಿಸಿದರು.

ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಅವರು ಮಾತನಾಡಿ, ಯಾವುದೇ ಚುನಾವಣೆಯಲ್ಲಿ ಆಡಳಿತ ಪಕ್ಷ ತಾವು ಮಾಡಿರುವ ಸಾಧನೆ,
ಮುಂದೆ ಮಾಡಬೇಕಾದ ಕೆಲಸಗಳ ಬಗ್ಗೆ ಜನರಿಗೆ ತಿಳಿಸುತ್ತವೆ. ವಿರೋಧ ಪಕ್ಷ ಆಡಳಿತ ಪಕ್ಷದ ವೈಫಲ್ಯಗಳನ್ನು ಜನರ ಮುಂದಿಡುವ ಕೆಲಸ ಮಾಡುತ್ತವೆ. ಆದರೆ ಈ ಚುನಾವಣೆಯಲ್ಲಿ
ಸಾಧನೆಗಳನ್ನು ಜನರ ಮುಂದಿಡದೆ ಬೇರೆಯ ವಿಷಯಗಳಾದ ದೇಶದ ಸಮಗ್ರತೆ ಮತ್ತು ಬಲಿಷ್ಠ ನಾಯಕತ್ವ ವಿಷಯ ಪ್ರಸ್ತಾಪಿಸಿ ಜನರನ್ನು ಭಾವನಾತ್ಮಕವಾಗಿ ಪರಿವರ್ತಿಸಲಾಗುತ್ತಿದೆ ಎಂದು ಹೇಳಿದರು.

ಭಾವನಾತ್ಮಕ ಮಾತುಗಳು ಕ್ಷಣಿಕ. ಕಾಂಗ್ರೆಸ್‌ ಜನರ ಬದುಕಿಗೆ ಸಂಬಂ ಸಿದ ವಿಷಯಗಳನ್ನು ಪ್ರಸ್ತಾಪಿಸುವ ಮೂಲಕ ವಿಷಯಾಧಾರಿತ ಚುನಾವಣೆಗೆ ನಾಂದಿ ಹಾಡಿದೆ ಎಂದು
ನುಡಿದರು.

ಚುನಾವಣಾ ಪ್ರಣಾಳಿಕೆಯಲ್ಲಿನ ನ್ಯಾಯ್‌ ಯೋಜನೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಶೇ.33 ರಷ್ಟು ಮಹಿಳಾ ಮೀಸಲಾತಿಗೆ ಸಮ್ಮತಿಸಲಾಗಿದೆ. ದೇಶದಲ್ಲಿ ಖಾಲಿ ಇರುವ
24 ಲಕ್ಷ ಹುದ್ದೆಗಳನ್ನು ಭರ್ತಿಗೊಳಿಸುವುದಾಗಿ ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ. ಪ್ರತ್ಯೇಕ ಕೃಷಿ ಬಜೆಟ್‌ ಮಂಡಿಸುವ ಮೂಲಕ
ರೈತರನ್ನು ಋಣ ಮುಕ್ತರನ್ನಾಗಿಸುವ ವಿಷಯವನ್ನು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ  ಪ್ರಸ್ತಾಪಿಸಿದ್ದು, ಹೊಸ ಕೃಷಿ ಆಯೋಗ ರಚನೆಗೆ ನಿರ್ಧರಿಸಲಾಗಿದೆ.

ಸಾರ್ವಜನಿಕ ಆರೋಗ್ಯವನ್ನು ಒಂದು ಹಕ್ಕಾಗಿ ಪರಿವರ್ತಿಸಲಾಗುವುದೆಂದು ತಿಳಿಸಿದ್ದು, ಒಂದನೇ ತರಗತಿಯಿಂದ 12 ನೇ ತರಗತಿವರೆಗೆ ಸರ್ಕಾರಿ ಶಾಲೆಯಲ್ಲಿ ಉಚಿತ ಕಡ್ಡಾಯ ಶಿಕ್ಷಣವನ್ನು ಕಾಂಗ್ರೆಸ್‌ ಪಕ್ಷ ಅಧಿ ಕಾರಕ್ಕೆ ಬಂದರೆ ನೀಡಲಿದೆ.
ಜಿಎಸ್‌ಟಿಯ ಎರಡನೆಯ ಆವೃತ್ತಿಯನ್ನು ಏಕರೂಪ ತೆರಿಗೆ ಪದ್ಧತಿ ಜಾರಿಗೊಳಿಸುವುದಾಗಿ ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ತಿಳಿಸಿದೆ ಎಂದು
ನುಡಿದರು. ವನವಾಸಿಗಳನ್ನು ಒಕ್ಕಲೆಬ್ಬಿಸಿದಂತೆ ನೋಡಿಕೊಳ್ಳಲು ಈ ಹಿಂದಿರುವ ಕಾಯ್ದೆಯ ಯಥಾವತ್‌ ಜಾರಿಗೆ ನಿರ್ಧರಿಸಿದ್ದು, ವಸತಿ ರಹಿತರಿಗೆ ಮನೆ ಕಟ್ಟಿಕೊಡಲು ಜಾಗ ನೀಡುವುದು, ವಾಯುಮಾಲಿನ್ಯ ತಡೆಗಟ್ಟಲು ಹಾಗೂ ಪರಿಸರ ವನ್ಯಜೀವಿ ಸಂರಕ್ಷಣೆಗೆ ಒತ್ತು ನೀಡುವ ವಿಷಯ ಪ್ರಸ್ತಾಪಿಸಲಾಗಿದೆ ಎಂದರು.

ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆಯನ್ನು ಜಿಎಸ್‌ಟಿ ಕೆಳಗೆ ತರುವುದು, ಉದ್ಯೋಗ ಖಾತ್ರಿ ಯೋಜನೆಯ 100 ದಿನದ ಕೆಲಸವನ್ನು 150ಕ್ಕೆ ಹೆಚ್ಚಿಸುವುದಲ್ಲದೇ ಈಗ ಕೇಂದ್ರ
ಸರ್ಕಾರವನ್ನು ಟೀಕಿಸಿದವರಿಗೆ, ಅದರ ವಿರುದ್ಧ ಮಾತನಾಡುವವರಿಗೆ ದೇಶದ್ರೋಹದ ಹಣೆಪಟ್ಟಿ ಕಟ್ಟುತ್ತಿದ್ದು, ಆ ಕಾನೂನನ್ನು ಕಿತ್ತು ಹಾಕುವುದಾಗಿ ತಿಳಿಸಲಾಗಿದೆ. ಸಿಬಿಐ, ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಸೇರಿದಂತೆ ಸ್ವಾಯತ್ತ ಸಂಸ್ಥೆಗಳಿಗೆ
ಗೌರವ ಮತ್ತು ಕಾನೂನು ರಕ್ಷಣೆ ನೀಡುವ ಕುರಿತು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ ಎಂದು ನುಡಿದರು.

ರಾಜ್ಯದಲ್ಲಿ ಯುಪಿಎ ಸರ್ಕಾರದ ಕಾರ್ಯಕ್ರಮ, ಸಿದ್ದರಾಮಯ್ಯ
ಮುಖ್ಯಮಂತ್ರಿಯಾಗಿದ್ದಾಗ ಜಾರಿಗೊಳಿಸಿದ ಅನ್ನಭಾಗ್ಯದಿಂದ ಆರೋಗ್ಯಭಾಗ್ಯದವರೆಗಿನ ಯೋಜನೆ, ಸಮ್ಮಿಶ್ರ ಸರ್ಕಾರದ ಸಾಲಮನ್ನಾ, ಬಡವರ ಬಂಧು ಕಾರ್ಯಕ್ರಮವನ್ನು ಜನರಿಗೆ
ತಿಳಿಸಲಾಗುವುದು ಎಂದರು.

ಎ.ಎನ್‌.ಮಹೇಶ್‌, ಶಿವಾನಂದಸ್ವಾಮಿ, ಅತಿಕ್‌ ಕೈಸರ್‌, ಶಿವಮೊಗ್ಗದ ಮಂಜುನಾಥ್‌ ಪೂಜಾರಿ, ಕ್ಷೇತ್ರ ಸಮಿತಿ ಅಧ್ಯಕ್ಷ ಹಂಪಾಪುರ ಮಂಜೇಗೌಡ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.