ಖಂಡಗಾರ ಡ್ಯಾಂಗೆ ಪ್ರವಾಸಿಗರ ಲಗ್ಗೆ

ಕಿರಿದಾದ ರಸ್ತೆ-ಅಪಾಯಕಾರಿ ತಿರುವುಗಳು•ಅಧಿಕಾರಿಗಳು-ಜನಪ್ರತಿನಿಧಿಗಳು ಲಕ್ಷ್ಯ ವಹಿಸಲಿ

Team Udayavani, Jul 18, 2019, 1:36 PM IST

18-July-30

ಕುಮಟಾ: ತಾಲೂಕಿನ ಮಿರ್ಜಾನ್‌ ಗ್ರಾಪಂ ವ್ಯಾಪ್ತಿಯ ನಾಗೂರು ಗ್ರಾಮದ ಖಂಡಗಾರ ಕಿರು ಡ್ಯಾಮ್‌ಗೆ ಮಳೆಗಾಲದಲ್ಲಿ ಹೆಚ್ಚೆಚ್ಚು ಪ್ರವಾಸಿಗರು ಲಗ್ಗೆ ಇಡುತ್ತಿದ್ದು, ಮೂಲ ಸೌಕರ್ಯ ಕಲ್ಪಿಸಬೇಕಿದೆ.

ಪಟ್ಟಣದಿಂದ ಮಿರ್ಜಾನ ಒಳ ಮಾರ್ಗದ ಮುಖಾಂತರ ಖಂಡಗಾರ ಮಾರ್ಗವಾಗಿ ಕ್ರಮಿಸಿದರೆ ಮಧ್ಯದಲ್ಲೇ ಈ ಕಿರು ಡ್ಯಾಮ್‌ ಕಾಣಸಿಗುತ್ತದೆ. ಈ ಜಲಧಾರೆಗೆ ಖಂಡಗಾರ ಫಾಲ್ಸ್ ಎಂದೂ ಕರೆಯುತ್ತಾರೆ. ಮಳೆಗಾಲದಲ್ಲಿ ಮೇಲಿಂದ ಹರಿದು ಬರುವ ನೀರಿಗೆ ಅಡ್ಡಲಾಗಿ ಕಟ್ಟೆ ಕಟ್ಟಲಾಗಿದ್ದು, ನೀರು ನಿಯಮಿತ ಪ್ರಮಾಣದಲ್ಲಿ ಹರಿದು ಹೋಗಿ ಕಟ್ಟೆ ಕೆಳಗಡೆ ಧುಮುಕುವುದರಿಂದ ಆ ದೃಶ್ಯ ರಮಣೀಯವಾಗಿರುತ್ತದೆ.

ಇಲ್ಲಿನ ನೀರು ಶುಚಿಯಾಗಿದ್ದು, ಪರಿಸರ ಕೂಡ ಸ್ವಚ್ಛವಾಗಿದೆ. ನೀರಿನ ಮಟ್ಟ ಒಂದೇ ಪ್ರಮಾಣದಲ್ಲಿ ಇರುವುದರಿಂದ ಚಿಕ್ಕ ಮಕ್ಕಳಿಂದ ಹಿಡಿದು, ಸಾಕಷ್ಟು ಜನರು ಈಜು ಕಲಿಯಲು ಇಲ್ಲಿಗೆ ಆಗಮಿಸುತ್ತಾರೆ. ಸ್ಥಳೀಯರು ಹೇಳುವ ಪ್ರಕಾರ ಮಳೆಗಾಲ ಪ್ರಾರಂಭದಿಂದ ಪ್ರತಿದಿನ 200 ಕ್ಕೂ ಅಧಿಕ ಪ್ರವಾಸಿಗರು ಹಾಗೂ ಸುತ್ತಮುತ್ತಲಿನ ಸಾರ್ವಜನಿಕರು ಈ ಸ್ಥಳಕ್ಕೆ ಭೇಟಿ ನೀಡಿ, ಇಲ್ಲಿನ ರಮಣೀಯ ದೃಶ್ಯವನ್ನು ಕಣ್ತುಂಬಿಕೊಳ್ಳುತ್ತಾರೆ.

ವ್ಯವಸ್ಥೆ ಕಲ್ಪಿಸಿ: ಈ ಕಿರು ಡ್ಯಾಮ್‌ ಅರಣ್ಯ ಇಲಾಖೆ ಅಧೀನದಲ್ಲಿದೆ. ಮಳೆಗಾಲದಲ್ಲಿ ಪ್ರವಾಸಿಗರು ಆಗಮಿಸುವುದರಿಂದ ಕುಳಿತುಕೊಳ್ಳುವ ಬೇಂಚು ಅಥವಾ ಆಸನದ ವ್ಯವಸ್ಥೆಯನ್ನು ಅರಣ್ಯ ಇಲಾಖೆ ಅಥವಾ ಪ್ರವಾಸೋದ್ಯಮ ಇಲಾಖೆ ಕಲ್ಪಿಸಬೇಕಾಗಿದೆ. ಒಂದು ಶೌಚಾಲಯ ಹಾಗೂ ಮಹಿಳೆಯರಿಗಾಗಿ ವಿಶೇಷ ಕೊಠಡಿ ನಿರ್ಮಿಸಿದರೆ ಸಾಕಷ್ಟು ಮಹಿಳೆಯರೂ ಆಗಮಿಸುತ್ತಿದ್ದರು ಎಂಬ ಮಾತು ಕೇಳಿಬಂದಿದೆ.

ಮೂಲ ಸೌಕರ್ಯದ ಕೊರತೆ: ಹೆಚ್ಚೆಚ್ಚು ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಈ ಸ್ಥಳಕ್ಕೆ ಹಲವಾರು ಸಮಸ್ಯೆಗಳಿವೆ. ಇಲ್ಲಿ ಓಡಾಡುವ ರಸ್ತೆ ಕಿರಿದಾಗಿದ್ದು, ಅಪಾಯಕಾರಿ ತಿರುವುಗಳಿವೆ. ಹಾಗೆ ಇಲ್ಲಿ ಬರುವ ಪ್ರವಾಸಿಗರಿಗೆ ಉಳಿದುಕೊಳ್ಳಲು ಯಾವುದೇ ವಸತಿ ವ್ಯವಸ್ಥೆಯಿಲ್ಲ. ಕನಿಷ್ಠ ಶೌಚಾಲಯದ ವ್ಯವಸ್ಥೆ, ಬಟ್ಟೆ ಬದಲಾಯಿಸಿಕೊಳ್ಳಲು ಕೊಠಡಿ ಸೌಲಭ್ಯವೂ ಇಲ್ಲ. ಇದರಿಂದ ವಿಶೇಷವಾಗಿ ಮಹಿಳೆಯರು ಕಿರಿಕಿರಿ ಅನುಭವಿಸುವಂತಾಗಿದೆ. ಹಾಗೆ ಊಟ, ತಿಂಡಿಗಾಗಿ ಒಂದು ಹೋಟೆಲ್, ಅಂಗಡಿ ಕೂಡ ಇಲ್ಲಿ ಇಲ್ಲವಾಗಿದ್ದು, ಇಲ್ಲಿ ಬರುವಂತಹ ಪ್ರವಾಸಿಗರು ಹಸಿವು ನೀಗಿಸಿಕೊಳ್ಳಲು ಏನಾದರೂ ಪಟ್ಟಣದಿಂದಲೇ ತರಬೇಕಾದ ಅನಿವಾರ್ಯತೆ ಇದೆ.

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.