ರಂಗಮಂದಿರ ಶಿಥಿಲ: ವಿದ್ಯಾರ್ಥಿಗಳ ಆತಂಕ

ಹಂದಿಗೋಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದುರವಸ್ಥೆ

Team Udayavani, Aug 1, 2019, 1:33 PM IST

1-Agust-32

ಕುಮಟಾ: ಶಿಥಿಲಾವಸ್ಥೆಗೆ ಜಾರಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ರಂಗಮಂದಿರ.

ಕುಮಟಾ: ತಾಲೂಕಿನ ಹಂದಿಗೋಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ರಂಗಮಂದಿರವು ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದ್ದು, ಇದರಿಂದ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ತೀವ್ರ ಆತಂಕಕ್ಕಿಡಾಗಿದ್ದಾರೆ.

ಶಾಲೆಯಲ್ಲಿ ಸುಮಾರು 60 ಕ್ಕೂ ಅಧಿಕ ವಿದ್ಯಾರ್ಥಿಗಳು ಕಲಿಯುತ್ತಿದ್ದು, ಸುಸಜ್ಜಿತ ಶಾಲಾ ಕಟ್ಟಡಗಳು ಹಾಗೂ ಸುತ್ತಮುತ್ತಲಿನ ಪರಿಸರ ಮೊದಲಾದವುಗಳಿಂದ ವಿದ್ಯಾರ್ಥಿಗಳ ಗಮನ ಸೆಳೆಯುತ್ತಿದೆ. ಆದರೆ ಶಾಲಾ ಆವರಣದ ಮಧ್ಯಭಾಗದಲ್ಲಿರುವ ರಂಗಮಂದಿರುವ ಶಿಥಿಲಾವಸ್ಥೆಗೆ ಜಾರಿದ್ದು ಆತಂಕಕ್ಕೆ ಕಾರಣವಾಗಿದೆ. ಸುಮಾರು 25 ವರ್ಷಗಳ ಹಿಂದೆ ಪಜಾ ಅನುದಾನದಡಿ ಈ ರಂಗಮಂದಿರ ನಿರ್ಮಿಸಲಾಗಿತ್ತು. ಆದರೆ ಈಗ ರಂಗಮಂದಿರದ 6 ಕಂಬಗಳೂ ಸಹ ದುರ್ಬಲಗೊಂಡಿದ್ದು, ಸಿಮೆಂಟ್ ಪ್ಲಾಸ್ಟರ್‌ ಅಲ್ಲಲ್ಲಿ ಕಿತ್ತು ಬೀಳುತ್ತಿವೆ. ತೀವ್ರ ಆತಂಕದ ಸ್ಥಿತಿ ಎದುರಾಗಿರುವುದರಿಂದ ಮಕ್ಕಳ ಹಿತ ದೃಷ್ಟಿಯಿಂದ ರಂಗಮಂದಿರದಲ್ಲಿ ಮಾಡುತ್ತಿದ್ದ ಪ್ರಾರ್ಥನೆಯನ್ನು ಸ್ಥಳಾಂತರಿಸಲಾಗಿದೆ.

ರಂಗಮಂದಿರ ಸರಿಪಡಿಸಲು ಸಾಕಷ್ಟು ಹಣ ವ್ಯಯವಾಗುವುದರಿಂದ ಪಂಚಾಯತದಿಂದ ಅಷ್ಟು ಅನುದಾನ ಬಿಡುಗಡೆಗೊಳಿಸುವುದು ಕಷ್ಟಸಾಧ್ಯ. ಶಾಸಕರ ಇಲ್ಲವೇ ಸಂಸದರ ನಿಧಿಯಿಂದ ಅನುದಾನ ಬಿಡುಗಡೆಗೊಳಿಸುವ ಪ್ರಯತ್ನ ನಡೆಯಬೇಕಿದೆ ಎಂಬುದು ಸ್ಥಳೀಯರ ಅಭಿಪ್ರಾಯ. ಈ ದಿಶೆಯಲ್ಲಿ ಶಾಲಾ ಅಭಿವೃದ್ಧಿ ಸಮೀತಿಯವರು ಸಾಕಷ್ಟು ಪ್ರಯತ್ನ ನಡೆಸುತ್ತಿದ್ದಾರೆ.

ರಂಗಮಂದಿರದ ಎಲ್ಲ ಕಂಬಗಳು ದುರ್ಬಲವಾಗಿದ್ದು, ಕುಸಿಯುವ ಹಂತದಲ್ಲಿದೆ. ಮೊದಲು ಇದೇ ರಂಗಮಂದಿರದಲ್ಲಿ ವಿದ್ಯಾರ್ಥಿಗಳು ಪ್ರಾರ್ಥನೆ ಮಾಡುತ್ತಿದ್ದು, ಮಕ್ಕಳ ಹಿತ ದೃಷ್ಟಿಯಿಂದ ಈಗ ಸ್ಥಳವನ್ನು ಬದಲಾಯಿಸಲಾಗಿದೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ನೂತನ ರಂಗಮಂದಿರ ನಿರ್ಮಿಸಿಬೇಕಾದ ಅನಿವಾರ್ಯತೆಯಿದೆ.
ಉಷಾ ನಾಯಕ,
ಶಾಲಾ ಮುಖ್ಯಾಧ್ಯಾಪಕಿ

ಈ ಸಮಸ್ಯೆ ಕುರಿತು ಹಲವಾರು ಸಭೆಗಳಲ್ಲಿ ಚರ್ಚಿಸಲಾಗಿದೆ. ಕಟ್ಟಡಕ್ಕೆ ಅನುದಾನ ತರುವ ನಿಟ್ಟಿನಲ್ಲಿ ಶಾಲಾಭಿವೃದ್ಧಿ ಸಮೀತಿ ವತಿಯಿಂದ ಸಾಕಷ್ಟು ಪ್ರಯತ್ನಗಳು ನಡೆದಿವೆ. ಸಂಬಂಧಪಟ್ಟ ಅಧಿಕಾರಿಗಳು ಈ ಬಗೆಗೆ ಗಮನಹರಿಸಬೇಕು.
ಶ್ರೀಧರ ಪಟಗಾರ,
ಎಸ್‌ಡಿಎಮ್‌ಸಿ ಸದಸ್ಯ

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.