ಕುಣಿಗಲ್‌ನಲ್ಲಿ ಫ‌ುಟ್ಪಾತ್‌ ಅಂಗಡಿಗಳ ತೆರವು


Team Udayavani, Oct 11, 2019, 7:42 PM IST

11-October-22

ಕುಣಿಗಲ್‌: ವ್ಯಾಪಾರಸ್ಥರ ತೀವ್ರ ವಿರೋಧದ ನಡುವೆ ಪಟ್ಟಣದ ರಸ್ತೆ ಬದಿಯಲ್ಲಿಟ್ಟು ಕೊಂಡಿದ್ದ ಫ‌ುಟಾ³ತ್‌ ಅಂಗಡಿಗಳನ್ನು ಪೊಲೀಸರ ನೆರವಿನಿಂದ ಪುರಸಭಾ ಅಧಿಕಾರಿಗಳು ಗುರುವಾರ ತೆರವು ಗೊಳಿಸಿದರು.

ನೋಟಿಸ್‌ ನೀಡಲಾಗಿತ್ತು: ಪಟ್ಟಣದ ಕೋಟೆ ಹಾಗೂ ಸಂತೇ ಮೈದಾನದ ಮಾರ್ಗ ಸೇರಿದಂತೆ 3 ಭಾಗದ ಫ‌ುಟಾ³ತ್‌ಗಳಲ್ಲಿ ಹಲವು ವರ್ಷಗಳಿಂದ ಅಂಗಡಿಗಳನ್ನು ಇಟ್ಟುಕೊಂಡಿದ್ದರು.

ಇದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ಈ ಸಂಬಂಧ ಸಾರ್ವಜನಿಕರು ಹಲವು ಬಾರಿ ಪುರಸಭೆಗೆ ತೆರವುಗೊಳಸುವಂತೆ ಮನವಿ ಸಲ್ಲಿಸಿದ್ದರು.

ಹೀಗಾಗಿ ಪುರಸಭಾ ಅಧಿಕಾರಿಗಳು ಅಂಗಡಿ ಮಾಲಿಕರಿಗೆ ನೋಟಿಸ್‌ ನೀಡಲಾಗಿತ್ತು. ಗುರುವಾರ ಬೆಳಗ್ಗೆ ಪುರಸಭಾ ಕಂದಾಯ ಅಧಿಕಾರಿ ಜಗರೆಡ್ಡಿ ನೇತೃತ್ವದಲ್ಲಿ ಪರಿಸರ ಎಂಜಿನಿಯರ್‌ ಚಂದ್ರಶೇಖರ್‌ ಕಾರ್ಯಾಚರಣೆ ನಡೆಸಿದರು. ಈ ವೇಳೆ ವ್ಯಾಪಾರಿಗಳು ತೆರವಿಗೆ ಅಡ್ಡಿಪಡಿಸಿ ಆಕ್ರೋಶ ವ್ಯಕ್ತಪಡಿಸಿದರು.

ಮಾತಿನ ಚಕಮಕಿ: ರಸ್ತೆ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಲು ಮುಂದಾದ ಅಧಿಕಾರಿಗಳೊಂದಿಗೆ ವ್ಯಾಪಾರಿಗಳು ವಾಗ್ವಾದಕ್ಕಿಳಿದರು. ಕೂಡಲೇ ಅಂಗಡಿ ತೆರವುಗೊಳಿಸಿ ಎಂದರೆ ನಮ್ಮ ಕುಟುಂಬ ಬೀದಿಗೆ ಬರಲಿದೆ ಎಂದು ವ್ಯಾಪಾರಿಗಳು ತರಾಟೆಗೆ ತೆಗೆದುಕೊಂಡರು. ಇದಕ್ಕೆ ಜಗ್ಗದ ಅಧಿಕಾರಿಗಳು ನಿಮ್ಮಿಂದ ಸಾರ್ವಜನಿಕರಿಗೆ ಹಾಗೂ ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ. ಸಬೂಬು ಬೇಕಿಲ್ಲ, ಸಂತೇಮಾಳದಲ್ಲಿ ವ್ಯಾಪಾರ ಮಾಡಲು ಹಲವು ಸೌಲಭ್ಯ ಕಲ್ಪಿಸಿಕೊಡಲಾಗಿದೆ. ಅಲ್ಲಿ ಹೋಗಿ ವ್ಯಾಪಾರ ಮಾಡಿ. ಸುಮ್ಮನೆ ನಾಗರಿಕರಿಗೆ ತೊಂದರೆ ಕೊಡಬೇಡಿ ಎಂದು ಖಡಕ್‌ ಎಚ್ಚರಿಕೆ ನೀಡಿದರು.

ತೆರವುಗೊಳಿಸಿ: ಕೆಲ ವ್ಯಕ್ತಿಗಳು ಚರಂಡಿ ಮೇಲೆ ಅಂಗಡಿ ಮಳಿಗೆ ನಿರ್ಮಾಣ ಮಾಡಿಕೊಂಡು ಕಾನೂನು ಬಾಹಿರವಾಗಿ ವ್ಯಾಪಾರ ಮಾಡುತ್ತಿದ್ದಾರೆ. ಮೊದಲು ಆ ಕಟ್ಟಡ ತೆರವುಗೊಳಿಸಿ ಬಳಿಕ ನಾವು ತೆರವುಗೊಳಿಸುತ್ತೇವೆ ಎಂದು ಪಟ್ಟು ಹಿಡಿದರು. ಈ ವೇಳೆ ಕಂದಾಯ ಅಧಿಕಾರಿ ಜಗರೆಡ್ಡಿ, ಅಕ್ರಮವಾಗಿ ಚರಂಡಿ ಮೇಲೆ ಅಂಗಡಿ ಮಳಿಗೆ ಮಾಡಿಕೊಂಡಿ ರುವವರಿಗೆ ನೋಟಿಸ್‌ ನೀಡಿ ತೆರವುಗೊಳಿಸಲಾಗು ವುದು. ಮೊದಲು ನೀವು ಅಂಗಡಿ ತೆರವುಗೊಳಿಸಿ ಎಂದು ತಿಳಿಸಿದರು. ಇದಕ್ಕೆ ಒಪ್ಪದ ವ್ಯಾಪಾರಿಗಳು
ಖಾಸಗಿ ಬಸ್‌ ನಿಲ್ದಾಣ, ಬಿ.ಎಂ.ರಸ್ತೆ ಬದಿಯಲ್ಲಿ ಹಣ್ಣು, ಹೂ, ತರಕಾರಿ ಮೊದಲಾದ ವಸ್ತು ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದಾರೆ. ಒಂದೆಡೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು. ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು, ಮುಂದಿನ ದಿನದಲ್ಲಿ ಸೂಕ್ತ ಕ್ರಮಕೈಗೊಳ್ಳಲಾಗುವುದು. ಅಂಗಡಿ ತೆರವುಗೊಳಿಸಬೇಕೆಂದು ತಿಳಿಸಿದರು. ಇದಕ್ಕೆ ಒಪ್ಪಿದ ಕೆಲ ವ್ಯಾಪಾರಿಗಳು, ಸ್ವಯಂ ಪ್ರೇರಿತರಾಗಿ ಅಂಗಡಿ ತೆರವು ಮಾಡಿಕೊಂಡರು.

ಮತ್ತೆ ಅಂಗಡಿ ಇಟ್ಟರೆ ದಂಡ: ತೆರವುಗೊಳಿಸಿದ ಸ್ಥಳದಲ್ಲಿ ಮತ್ತೆ ಅಂಗಡಿ ಇಟ್ಟುಕೊಂಡು ವ್ಯಾಪಾರ ಮಾಡುವವರಿಗೆ ಮುಲಾಜಿಲ್ಲದೆ ದಂಡ ಹಾಕಲಾಗು ವುದು ಎಂದು ಪುರಸಭಾ ಮುಖ್ಯಾಧಿಕಾರಿ ಆರ್‌. ರಮೇಶ್‌ ಎಚ್ಚರಿಕೆ ನೀಡಿದರು.ಕಾರ್ಯಾಚರಣೆ ಯಲ್ಲಿ ಕಂದಾಯ ನಿರೀಕ್ಷಕರಾದ ಹನುಮಂತ ರಾಜು, ವ್ಯವಸ್ಥಾಪಕ ವೆಂಕಟರಮಣಪ್ಪ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.