ಚಿಕ್ಕ ಸೇತುವೆ; ಸಂಚಾರಕ್ಕೆ ಕಿರಿಕಿರಿ

ಸಂಚಾರ ದಟ್ಟಣೆಯಿಂದ ವಾಹನ ಚಾಲಕರಿಗೆ ನಿತ್ಯ ಸಮಸ್ಯೆ•ನೂತನ ಸೇತುವೆ ನಿರ್ಮಿಸಿ

Team Udayavani, Jun 24, 2019, 11:40 AM IST

24-June-13

ಕುರುಗೋಡು: ಚಿಕ್ಕದಾದ ಎಲ್‌ಎಲ್‌ಸಿ ಕಾಲುವೆಯ ಸೇತುವೆ

ಸುಧಾಕರ್‌ ಮಣ್ಣೂರು
ಕುರುಗೋಡು:
ಸಂಪರ್ಕ ಸೇತುವೆ ದಾಟಬೇಕೆಂದರೆ ಕಾಯಲೇಬೇಕು. ಎದುರು-ಬದುರು ವಾಹನ ಬಂದರಂತೂ ಟ್ರಾಫಿಕ್‌ ಜಾಮ್‌ ಗ್ಯಾರಂಟಿ. ಪಾದಚಾರಿಗಳು ದಾಟಲೂ ಕಿರಿ ಕಿರಿ. ಸಣ್ಣಪುಟ್ಟ ವಾಹನ ಚಾಲನೆಗೂ ಸಮಸ್ಯೆ.

ಹೌದು, ಇದು ಕುರುಗೋಡು, ಕಂಪ್ಲಿ, ಬಳ್ಳಾರಿ ಮಾರ್ಗವಾಗಿ ಸಂಚರಿಸುವ ಸಾವಿರಾರು ವಾಹನಗಳು ನಿತ್ಯ ಎದುರಿಸುತ್ತಿರುವ ಸಮಸ್ಯೆ.

ಸೋಮಲಾಪುರ ಕ್ರಾಸ್‌ನ ಕುರುಗೋಡು ಮಾರ್ಗದಲ್ಲಿರುವ ಎಲ್ಎಲ್ಸಿ ಕಾಲುವೆಯ ಸೇತುವೆ ಬಹಳ ಚಿಕ್ಕದಾಗಿದ್ದು. ಇದರ ಮೇಲಿಂದ ಒಡಾಡುವ ಬಸ್‌ಗಳು ಮತ್ತು ಲಾರಿಗಳು ಪದೇ ಪದೇ ಟ್ರಾಫಿಕ್‌ ಜಾಮ್‌ ಸಾಮಾನ್ಯವಾಗಿದೆ.

ಇದರಿಂದ ಅಕ್ಕಪಕ್ಕದ ಗ್ರಾಮಗಳ ಸಾರ್ವಜನಿಕರು ಹಾಗೂ ಕೂಲಿ ಕಾರ್ಮಿಕರು ಕೆಲಸ, ಕಾರ್ಯಗಳಿಗೆ ಹೋಗಲು ಸಮಸ್ಯೆ ಎದುರಿಸುವಂತಾಗಿದೆ.

ಕುರುಗೋಡು, ಕಂಪ್ಲಿ ಮಾರ್ಗವಾಗಿ ಬಳ್ಳಾರಿ ಮಾರ್ಗಕ್ಕೆ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿವೆ. ಬೆಳೆಯುತ್ತಿರುವ ಪಟ್ಟಣದ ಅವಶ್ಯಕತೆಗೆ ತಕ್ಕಂತೆ ಸುಗಮ ಸಂಚಾರಕ್ಕೆ ಯೋಜನೆ ರೂಪಿಸಬೇಕಿದೆ.

ಮುಖ್ಯ ರಸ್ತೆ ಮೇಲೆ ಹಾದುಹೋಗಿರುವ ಸೋಮಲಾಪುರ ಕ್ರಾಸ್‌ ಕುರುಗೋಡು ಮಾರ್ಗದಲ್ಲಿ ಎಲ್ಎಲ್ಸಿ ಕಾಲುವೆ ಸೇತುವೆ ಇದ್ದು. ಇದು ಸುಮಾರು 1955-60ರಲ್ಲಿ ನಿರ್ಮಿಸಲಾಗಿದೆ. ಇತ್ತೀಚೆಗೆ ಈ ರಸ್ತೆಯನ್ನು ಎಸ್‌.ಎಚ್.132 ಆಗಿ ಮೇಲ್ದರ್ಜೆಗೇರಿಸಲಾಗಿದೆ.

ಇನ್ನೂ ಸೇತುವೆ ಭಾಗದ ತಡೆಗೋಡೆ ಸಿಮೆಂಟ್ ಪದರು ಉದುರುತ್ತಿದೆ. ಇದರ ಜತೆಗೆ ಸೇತುವೆಯ ಅಲ್ಲಲ್ಲಿ ತೆಗ್ಗು ಬಿದ್ದಿದ್ದು, ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಯಾವಾಗ ಏನಾಗುತ್ತೋ ಎಂದು ಭಯದಲ್ಲಿ ಪ್ರಯಾಣಿಸಬೇಕಾದ ಅನಿವಾರ್ಯತೆ ಉಂಟಾಗಿದೆ.

ತುರ್ತು ಪರಿಸ್ಥಿತಿಗೆ ಧಕ್ಕೆ: ಸಾಮಾನ್ಯ ವಾಹನಗಳು ಮತ್ತು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಆ್ಯಂಬುಲೆನ್ಸ್‌ ಸರಾಗವಾಗಿ ಸಾಗಲು ಕೆಲವೊಮ್ಮೆ ಸಮಸ್ಯೆಯಾದ ಸನ್ನಿವೇಶಗಳು ಈ ಮಾರ್ಗದಲ್ಲಿ ಪ್ರಯಾಣಿಸುವ ಚಾಲಕರು ಸ್ಮರಿಸಬಹುದು.

ಸೇತುವೆ ನಿರ್ಮಾಣಕ್ಕೆ ಒತ್ತಾಯ: ಕಳೆದ ಎರಡ್ಮೂರು ತಿಂಗಳಿಂದ ಕಾಲುವೆಯಲ್ಲಿ ನೀರಿಲ್ಲ. ಹಾಗಾಗಿ ಈ ಮಾರ್ಗದಲ್ಲಿ ಸಂಚಾರಕ್ಕೆ ತಾತ್ಕಾಲಿಕ ಅನುಕೂಲ ಒದಗಿಸಿ. ಹೊಸ ಸೇತುವೆ ನಿರ್ಮಿಸಿದರೆ ಮುಂದಾಗುವ ಅವಘಡಗಳು ತಪ್ಪಿಸಬಹುದು ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಲಿಖೀತ ರೂಪದಲ್ಲಿ ಹಲವು ಬಾರಿ ಮನವರಿಕೆ ಮಾಡಿದರೂ ಇದುವರೆಗೂ ಯಾವುದೇ ರೀತಿಯ ಪ್ರಯೋಜನ ಆಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸೇತುವೆ ಚಿಕ್ಕದಾಗಿದ್ದು, ಸಂಚಾರಕ್ಕೆ ತೊಂದರೆ ಆಗಿದೆ. ಗ್ರಾಮಸ್ಥರು ಮತ್ತು ಚಾಲಕರು ಮೇಲಧಿಕಾರಿಗಳಿಗೆ ತಿಳಿಸುವಂತೆ ಕೂಡ ತಿಳಿಸಿಲ್ಲ. ಇದರ ಬಗ್ಗೆ ಸಂಬಂಧಿಸಿದ ಅಧಿಕಾರಿಗಳ ಜತೆ ಸೇತುವೆಯ ದುರಸ್ತಿ ಬಗ್ಗೆ ಮಾತನಾಡುವೆ.
ಮಂಜುನಾಥ,
ಸಿಪಿಐ, ಕುರುಗೋಡು.

ಈ ಮಾರ್ಗದ ರಸ್ತೆಗೆ ಬಂದರೆ ಸೇತುವೆ ಬಳಿ ಎದುರುಗಡೆ ಬರುವ ವಾಹನಗಳು ನೋಡಿದರೆ ಮೈ ಜುಮ್ಮೆನಿಸುತ್ತೆ. ಅದರಲ್ಲೂ ಸೇತುವೆ ದಾಟುವಾಗ ಯಾವಾಗ ದಾಟುತ್ತೇವೆಯೋ ಅನಿಸುತ್ತೆ. ಎದುರು ಬದುರು ವಾಹನ ಬಂದರೆ ಕೆಲ ನಿಮಿಷ ಕಾದು ಆನಂತರ ಹೋಗಬೇಕು. ಚಾಲಕರಿಗೆ ಮತ್ತು ಪ್ರಯಾಣಿಕರಿಗೆ ಯಾವಾಗ ಏನು ಆಗುತ್ತೆ ಗೊತ್ತಿಲ್ಲ.
•ಪರುಶುರಾಮ,
ಚಾಲಕರು.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.