ಮುಂಗಾರು ನಿರಾಶೆ; ಅನ್ನದಾತ ಹತಾಶೆ

ಭೂಮಿ ಹದಗೊಳಿಸಿ ಮಳೆ ನಿರೀಕ್ಷೆಯಲ್ಲಿ ರೈತ•ನೀರಿಲ್ಲದೆ ಬಿರುಕು ಬಿಟ್ಟ ಭತ್ತದ ಸಸಿಮಡಿ

Team Udayavani, Jul 8, 2019, 11:42 AM IST

08-July-13

ಕುರುಗೋಡು: ನದಿಯಲ್ಲಿ ನೀರು ಇಲ್ಲದೆ ಖಾಲಿಯಾಗಿರುವುದು.

ಸುಧಾಕರ್‌ ಮಣ್ಣೂರು
ಕುರುಗೋಡು:
ಹಿಂಗಾರು ಮಳೆಯಿಲ್ಲದೆ ಬಿತ್ತನೆಯಿಂದ ದೂರ ಉಳಿದಿದ್ದ ರೈತನಿಗೆ ಮುಂಗಾರು ಮತ್ತೂಮ್ಮೆ ನಿರಾಶೆ ಮೂಡಿಸಿ ಚಿಂತೆಗೀಡುಮಾಡಿದೆ.

ಈಗಾಗಲೇ ಪಟ್ಟಣದ ಸುತ್ತಮುತ್ತ ಗ್ರಾಮಗಳಲ್ಲಿ ಉತ್ತಮ ಮಳೆ ಕಾಣದ ರೈತರು ದೇವರುಗಳಿಗೆ ವಿಶೇಷ ಪೂಜೆ ಮತ್ತು ಅಭಿಷೇಕ ಇತರೆ ಧಾರ್ಮಿಕ ಪೂಜೆ ಮಾಡುತ್ತಾ ಭಗವಂತನಲ್ಲಿ ಪ್ರಾರ್ಥಿಸುವ ಸನ್ನಿವೇಶ ನಿರ್ಮಾಣವಾಗಿದೆ.

ಕಳೆದ ವರ್ಷ ಬರ ಅವರಿಸಿ ಕೃಷಿ ಚಟುವಟಿಕೆಯಿಂದ ಅನ್ನದಾತರು ದೂರ ಉಳಿದಿದ್ದರು. ಹಿಂಗಾರಿನಲ್ಲಿ ಬಿತ್ತನೆ ಮಾಡದ ರೈತರು ಮುಂಗಾರಿನಲ್ಲಿ ಬಿತ್ತನೆಗೆ ಅಣಿಯಾಗಿದ್ದಾರೆ. ಈಗಾಗಲೇ ಕೃಷಿ ಚಟುವಟಿಕೆಯಲ್ಲಿ ತೊಡಗಿ ಜಮೀನು ಹದಗೊಳಿಸಿದ್ದಾರೆ. ಮುಂಗಾರಿನಲ್ಲಿ ಮಳೆಯಾಗುವ ನಿರೀಕ್ಷೆಯಲ್ಲಿ ದಿನಗಳು ಕಳೆಯುತ್ತಿದ್ದರೂ ಉತ್ತಮ ಮಳೆಯಾಗದೆ ನದಿ ದಂಡೆಯ ಮಣ್ಣೂರು, ಸೂಗೂರು, ರುದ್ರಪಾದ, ನಡವಿ,ದೊಡ್ಡರಾಜಕ್ಯಾಂಪ್‌, ಎಚ್. ವಿರಾಪುರ, ಚನ್ನಪಟ್ಟಣ, ಸೋಮಲಾಪುರ ರೈತರು ಬಿತ್ತನೆ ಮಾಡಲು ಭತ್ತದ ಸಸಿ ಮಡಿಗಳು ಹಾಕಿದ್ದು ಸದ್ಯ ತುಂಗಭದ್ರಾ ಜಲಶಾಯ ಕೂಡ ಭತ್ತಿ ಹೋಗಿದ್ದು ಭತ್ತದ ಸಸಿ ಮಡಿಗಳು ಎಲ್ಲಂದರಲ್ಲಿ ನೀರು ಇಲ್ಲದೆ ಬಿರುಕು ಬಿಟ್ಟು ಹೋದ ಪರಿಣಾಮ ಕೆಲ ರೈತರ ಸಸಿ ಮಡಿಗಳು ಜಾನುವಾರುಗಳ ಪಾಲಾಗಿವೆ. ಇನ್ನೂ ಹಲವು ರೈತರು ತಮ್ಮ ಸಸಿ ಮಡಿಗಳಿಗೆ ಹಳ್ಳ ಕೊಳ್ಳದ ಮತ್ತು ಬಸಿ ನೀರನ್ನು ಉಣಿಸಿ ತುಂಗಭದ್ರಾ ನದಿಗೆ ನೀರು ಬರುವ ತನ ಕಾಪಾಡುವ ಪ್ರಯತ್ನದಲ್ಲಿ ತೊಡಗಿದ್ದಾರೆ.

ಈಗಾಗಲೇ ಪಟ್ಟಣದ ವ್ಯಾಪ್ತಿಯಲ್ಲಿ 28 ಸಾವಿರ ಎಕರೆ ಜಮೀನು ಇದ್ದು. ವಿವಿಧ ಕಡೆ ಅಲ್ಪ ಮಳೆಯಾದ ಕಾರಣ ಹೊರ ಭೂಮಿಗಳಲ್ಲಿ ಒಣ ಬೇಸಾಯದ ಪದ್ಧತಿ ಜೋರಾಗಿ ನಡೆಯುತ್ತಿದೆ.

ಬಿತ್ತನೆಯ ಗುರಿ: ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆಯಿಂದ ಮುಂಗಾರಿನಲ್ಲಿ ಸೂರ್ಯಕಾಂತಿ 470 ಹೆಕ್ಟೇರ್‌, ಭತ್ತ 30 ಹೆಕ್ಟೇರ್‌, ಮೆಕ್ಕೆಜೋಳ 30 ಹೆಕ್ಟೇರ್‌, ನವಣಿ 32 ಹೆಕ್ಟೇರ್‌, ಸಜ್ಜೆ 15 ಹೆಕ್ಟೇರ್‌, ತೋಗರಿ 20 ಹೆಕ್ಟೇರ್‌ ಸೇರಿದಂತೆ ದ್ವಿದಳ ಧಾನ್ಯಗಳನ್ನು ಬೆಳೆಯುವ ಗುರಿ ಕೃಷಿ ಇಲಾಖೆ ಹೊಂದಿದೆ.

ಮಾರಾಟವಾದ ಬೀಜಗಳು: ಮುಂಗಾರು ಹಂಗಾಮಿನಲ್ಲಿ ರೈತರಿಗೆ ತೊಂದರೆಯಾಗದಂತೆ ಕುರುಗೋಡು ತಾಲೂಕಿನ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜಗಳನ್ನು ರಿಯಾಯಿತಿ ದರದಲ್ಲಿ ವಿತರಣೆ ಮಾಡಲು ಕೃಷಿ ಇಲಾಖೆ ಕ್ರಮ ಕೈಗೊಂಡಿದ್ದು ಭತ್ತ 380 ಕ್ವಿಂಟಲ್, ಮೆಕ್ಕೆಜೋಳ 1 ಕ್ವಿಂಟಲ್ 20 ಕೆಜಿ, ನವಣಿ 50 ಕೆಜಿ, ತೊಗರಿ 3 ಕ್ವಿಂಟಲ್, ಸೂರ್ಯಕಾಂತಿ 1 ಕ್ವಿಂಟಲ್ 10 ಕೆಜಿ ಬಿತ್ತನೆ ಬೀಜ ವಿತರಿಸಲಾಗಿದೆ. ಇನ್ನೂ ಬಿತ್ತನೆ ಬೀಜ ದಾಸ್ತಾನಿದ್ದು ಯಾವುದೇ ಕೊರತೆ ಉಂಟಾಗದಂತೆ ಮುಂಜಾಗ್ರತೆ ವಹಿಸಲಾಗಿದೆ.

ಮಳೆಯ ಪ್ರಮಾಣ ಕುಸಿದಿದ್ದರಿಂದ ಕಡಿಮೆ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಜುಲೈ ಮತ್ತು ಆಗಸ್ಟ್‌ ನಲ್ಲಿ ಭತ್ತ ಬಿತ್ತನೆ ಆರಂಭವಾಗಬೇಕಿತ್ತು. ಅಲ್ಲಲ್ಲಿ ಅಲ್ಪ ಮಳೆಯಾದ ಹಿನ್ನೆಲೆ ಮೆಕ್ಕೆಜೋಳ ಉತ್ತಮ ರೀತಿಯಲ್ಲಿ ಬಿತ್ತನೆಯಾಗಿದೆ. ಶೀಘ್ರವೇ ಉತ್ತಮ ಮಳೆಯಾದರೆ ಇನ್ನೂ ಅನುಕೂಲ.
ದೇವರಾಜ,
ಕೃಷಿ ಅಧಿಕಾರಿ, ಕುರುಗೋಡು

ನದಿ ದಂಡೆಯ ರೈತರು ಈಗಾಗಲೇ ಭತ್ತ ನಾಟಿ ಮಾಡಬೇಕಿತ್ತು. ಮಳೆರಾಯ ಕೈಕೊಟ್ಟ ಪರಿಣಾಮ ಮುಂಗಾರು ಬೆಳೆಗೆ ಮುಂದಾಗಿಲ್ಲ. ಅದರಲ್ಲಿ ನದಿಯಲ್ಲಿ ನೀರು ಇಲ್ಲದೆ ಖಾಲಿ ಅಗಿದೆ. ಮುಂದಿನ ದಿನಗಳಲ್ಲಿ ಉತ್ತಮ ಮಳೆ ಬರುತ್ತೆ ಎಂದು ತಿಳಿದು ಭತ್ತ ನಾಟಿ ಮಾಡಲು ಸಸಿ ಮಡಿಗಳನ್ನು ಹಾಕಿದ್ದು ಅದಕ್ಕೂ ನೀರಿಲ್ಲದೆ ಒಣಗಿ ಹೋಗಿದೆ. ಆದರೂ ಪ್ರತಿ ವರ್ಷ ರೈತರು ಸಮಸ್ಯೆಗೆ ಸಿಲುಕಬೇಕಾಗಿದೆ.
ಮಂಜುನಾಥ,
ನದಿ ದಂಡೆಯ ಪ್ರಗತಿ ಪರ ರೈತ

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.