ಸಮಸ್ಯೆಗಳ ಆಗರ ಸಿರಿಗೇರಿ ರೈತ ಕೇಂದ್ರ

ರೈತರಿಗೆ ಕೂಡಲು ಸುರಕ್ಷಿತ ಸ್ಥಳವಿಲ್ಲ•ಎಲ್ಲೆಂದರಲ್ಲಿ ಮದ್ಯ ಬಾಟಲಿಗಳ ದರ್ಶನ

Team Udayavani, Jul 3, 2019, 11:50 AM IST

3-July-13

ಕುರುಗೋಡು: ಸಮೀಪದ ಸಿರಿಗೇರಿಯ ರೈತ ಸಂಪರ್ಕ ಕೇಂದ್ರದ ಹೊರ ನೋಟ

ಸುಧಾಕರ್‌ ಮಣ್ಣೂರು
ಕುರುಗೋಡು:
ರೈತರಿಗೆ ಕುಳಿತುಕೊಳ್ಳಲು ಸುರಕ್ಷಿತವಾದ ಸ್ಥಳವಿಲ್ಲ. ಬಿತ್ತನೆ ಬೀಜಗಳನ್ನು ಖರೀದಿ ಮಾಡಲು ಬರುವುದಕ್ಕೆ ಸರಿಯಾಗಿ ದಾರಿ ವ್ಯವಸ್ಥೆ ಇಲ್ಲ. ಕಚೇರಿಯೂ ಪಾಳುಬಿದ್ದು ನಾರುತ್ತಿದ್ದು ಒಟ್ಟಾರೆ ಸಮಸ್ಯೆಗಳ ಆಗರವಾಗಿ ಮಾರ್ಪಟ್ಟಿದೆ ಕುರುಗೋಡು ಪಟ್ಟಣ ಸಮೀಪದ ಸಿರಿಗೇರಿಯ ರೈತ ಸಂಪರ್ಕ ಕೇಂದ್ರ.

ಹೌದು, ಸಿರಿಗೇರಿಯ ರೈತ ಸಂಪರ್ಕ ಕೇಂದ್ರಕ್ಕೆ ಸುತ್ತಮುತ್ತ ಹತ್ತಾರು ಹಳ್ಳಿಯ ರೈತರು ನವಣಿ, ಸಜ್ಜೆ, ತೊಗರಿ, ಸೂರ್ಯಕಾಂತಿ, ಜೋಳ ಸೇರಿದಂತೆ ವಿವಿಧ ರೀತಿಯ ಬೀಜಗಳನ್ನು ಪ್ರತಿ ವರ್ಷ ತೆಗೆದುಕೊಂಡು ಹೋಗುತ್ತಾರೆ. ಅದರೆ ಕೇಂದ್ರಕ್ಕೆ ಬರುವವರಿಗೆ ಸರಿಯಾದ ವ್ಯವಸ್ಥೆಯಿಲ್ಲ. ಕೇಂದ್ರದ ಸುತ್ತಮುತ್ತದ ಬೀದಿ ಬದಿ ವ್ಯಾಪಾರಸ್ಥರು ಕಸ ಕಡ್ಡಿಗಳನ್ನು ಕೇಂದ್ರದ ಅವರಣದಲ್ಲಿ ಸಂಗ್ರಹಿಸಿ ಅದನ್ನು ಸುಟ್ಟು ಹಾಕಿ ಹೋಗುತ್ತಿದ್ದರು ಅದನ್ನು ಪ್ರಶ್ನಿಸುವವರು ಇಲ್ಲದಂತಾಗಿದೆ.

ಕೇಂದ್ರದ ಮುಂಭಾಗದಲ್ಲಿ ವೈನ್‌ ಶಾಪ್‌ ಇದ್ದು ಸಂಜೆಯಾದರೆ ಮದ್ಯಪ್ರಿಯರ ಹಾವಳಿ ಕೇಂದ್ರದ ಅವರಣದಲ್ಲಿ ದೌಡಾಯಿಸಿ ಮದ್ಯ ಸೇವಿಸಿ ಎಲ್ಲೆಂದರಲ್ಲಿ ಬಾಟಲ್ಗಳು ಬಿಸಾಡಿ ಹೋಗುವುದು ಸರ್ವಸಮಾನ್ಯವಾಗಿದೆ. ಇನ್ನೂ ಕೇಂದ್ರದ ಹಿಂಭಾಗದಲ್ಲಿ ರಾಶಿಗಟ್ಟಲೇ ಮದ್ಯ ಬಾಟಲ್ಗಳು ಬಿದ್ದಿದ್ದು ಈ ಅಕ್ರಮ ಚಟುವಟಿಕೆಗೆ ಕೃಷಿ ಅಧಿಕಾರಿಗಳು ಸಾಥ್‌ ನೀಡುತ್ತಿದ್ದಾರೆ ಎಂಬ ಪ್ರಶ್ನೆಗಳು ರೈತರಲ್ಲಿ ಕೇಳಿಬರುತ್ತಿವೆ.

ಕೇಂದ್ರಕ್ಕೆ ಸರಿಯಾಗಿ ಮುಖ್ಯ ಗೇಟ್ ಇಲ್ಲ: ರೈತ ಸಂಪರ್ಕ ಕೇಂದ್ರಕ್ಕೆ ಸರಿಯಾದ ಗೇಟ್ ವ್ಯವಸ್ಥೆ ಇಲ್ಲ. ಮುಂಭಾಗದ ಬೀದಿ ಬದಿ ವ್ಯಾಪಾರಸ್ಥರು, ಎಗ್‌ರೈಸ್‌, ಹೂಗಳ ಅಂಗಡಿ, ಕಿರಾಣಿ ಅಂಗಡಿ ಸೇರಿದಂತೆ ಇತರೆ ಅಂಗಡಿಗಳ ಅಡ್ಡೆಯಾಗಿದೆ. ಕೇಂದ್ರಕ್ಕೆ ಬರುವ ರೈತರಿಗೆ ಸರಿಯಾಗಿ ವ್ಯವಸ್ಥೆ ಇಲ್ಲದೆ ಕೇಂದ್ರದ ಮುಂದಿರುವ ತಡೆಗೋಡೆ ಮೇಲೆ ಕುಳಿತು ಅಧಿಕಾರಿಗಳನ್ನು ಕಾದು ಕೆಲಸಗಳನ್ನು ಮಾಡಿಕೊಂಡು ಹೋಗಬೇಕಾಗಿದೆ. ಕೆಲವೊಮ್ಮೆ ಬಾಗಿಲು ಮುಚ್ಚಿದ ಸಂದರ್ಭದಲ್ಲಿ ಮತ್ತು ಮುಂದೆ ಅಂಗಡಿಗಳು ಇರುವುದರಿಂದ ಗೊಂದಲಕ್ಕೀಡಾಗಿ ರೈತರು ವಾಪಸ್ಸು ಹೋಗುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಪಾಳು ಬಿದ್ದ ಕೊಠಡಿ: ಕೇಂದ್ರ ಬಹುದಿನಗಳ ಕೊಠಡಿಯಾಗಿದ್ದು ಅಲ್ಲಲ್ಲಿ ಕೇಂದ್ರದ ಮೇಲ್ಛಾವಣಿ ಶಿಥಿಲಗೊಂಡಿದೆ.ಅದರಲ್ಲಿ ಇರುವ ಬೀಜಗಳಿಗೆ ಹೆಗ್ಗ‌ಣಗಳ ಹಾವಳಿ ಜಾಸ್ತಿಯಾಗಿವೆ. ಈಗಾಗಲೇ ಸದ್ಯ ಇರುವ ಕೇಂದ್ರದ ಪಕ್ಕದಲ್ಲಿರುವ ಕೊಠಡಿಯಲ್ಲಿ ಸುಮಾರು ವರ್ಷಗಳ ಕಾಲ ಕಾರ್ಯನಿರ್ವಹಿಸಿ ರೈತರಿಗೆ ಅನುಕೂಲಪಡಿಸಿದ್ದರು. ಅದರಲ್ಲಿ ಹೆಗ್ಗಣಗಳ ಕಾಟದಿಂದ ಪಕ್ಕದ ಹಳೆಯ ನೀರಾವರಿ ಕೊಠಡಿಗೆ ಸ್ಥಳಾಂತರಗೊಂಡಿದ್ದರು. ಇದರಲ್ಲಿ ಕೂಡ ಸರಿಯಾಗಿ ವ್ಯವಸ್ಥೆ ಇಲ್ಲದಂತಾಗಿದ್ದು ಸದ್ಯ ಮದ್ಯಪ್ರಿಯರ ತಾಣವಾಗಿದೆ.

ಅನುಕೂಲವಾದಾಗ ಕಚೇರಿ ಒಪನ್‌: ವರ್ಷದಲ್ಲಿ 2-3 ತಿಂಗಳ ಕಾಲ ಮಾತ್ರ ಕೇಂದ್ರದ ಬಾಗಿಲು ತೆರೆಯುತ್ತದೆ. ಅದರಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಸರಿಯಾಗಿ ಸಮಯಕ್ಕೆ ಬಾಗಿಲು ತೆಗೆಯದೇ ತಮಗೆ ಅನುಕೂಲವಾದಾಗ ತೆಗೆಯುತ್ತಿದ್ದು ಇದರಿಂದ ದೂರದ ರೈತ ಸಂಪರ್ಕ ಕೇಂದ್ರಕ್ಕೆ ತೆರಳಿ ಬೀಜಗಳನ್ನು ಖರೀದಿ ಮಾಡುವಂತಾಗಿದೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.