ತರಕಾರಿ ಸಂತೆಗೆ ಸೌಲಭ್ಯ ಮರೀಚಿಕೆ

ಶಾಸಕರು ನೀಡಿದ್ದ ಭರವಸೆಗಳು ಹುಸಿ•ಎಲ್ಲೆಂದರಲ್ಲಿ ವಾಹನಗಳ ಪಾರ್ಕಿಂಗ್‌

Team Udayavani, Jun 17, 2019, 11:55 AM IST

17-June-13

ಕುರುಗೋಡು: ತರಕಾರಿ ಮಾರುಕಟ್ಟೆಯಲ್ಲಿ ಎಲ್ಲೆಂದರಲ್ಲಿ ವಾಹನಗಳ ಪಾರ್ಕಿಂಗ್‌.

ಸುಧಾಕರ್‌ ಮಣ್ಣೂರು
ಕುರುಗೋಡು:
ಪಟ್ಟಣದಲ್ಲಿ ದಿನದಿಂದ ದಿನಕ್ಕೆ ತರಕಾರಿ ವ್ಯಾಪಾರ ಸಂತೆಯಲ್ಲಿ ಜನಸಂಖ್ಯೆ ಹೆಚ್ಚಾಗಿ ಕಂಡು ಬರುತ್ತಿದ್ದು, ರಸ್ತೆ ಬದಿಯಲ್ಲಿ ಶೆಡ್‌ ಹಾಕಿಕೊಂಡು ವ್ಯಾಪಾರ ಮಾಡುವ ತರಕಾರಿ ವ್ಯಾಪಾರಸ್ಥರಿಗೆ ನಿತ್ಯ ಒಡಾಡುವ ವಾಹನಗಳ ಸಂಚಾರದಿಂದ ತೀವ್ರ ತೊಂದರೆ ಅನುಭವಿಸುವಂತಾಗಿದೆ.

ಪಟ್ಟಣದ ರಸ್ತೆ ಬದಿಯಲ್ಲಿ ನಿತ್ಯ ತರಕಾರಿ ವ್ಯಾಪಾರ ಮಾಡುವ ವ್ಯಾಪಾರಸ್ಥರ ಸಂಖ್ಯೆ ಸುಮಾರು 60 ರಿಂದ 70 ಇದೆ. ಇವರು ಸುಮಾರು ವರ್ಷಗಳಿಂದ ರಸ್ತೆ ಬದಿಯಲ್ಲಿ ಶೆಡ್‌ ಹಾಕಿಕೊಂಡು ವ್ಯಾಪಾರ ಮಾಡುತ್ತಾ ಬಂದಿದ್ದಾರೆ. ನಿತ್ಯ ತಮ್ಮ ವ್ಯಾಪಾರದ ಕಡೆಗೆ ಗಮನಹರಿಸಿಕೊಂಡು ಕಾರ್ಯನಿರ್ವಹಿಸುವ ವೇಳೆ ಅವರಿಗೆ ಯಾವುದೇ ರಕ್ಷಣೆ ಇಲ್ಲದೆ ರಸ್ತೆಯಲ್ಲಿ ಸಂಚರಿಸುವ ವಾಹನಗಳ ತೊಂದರೆ ಹಾಗೂ ಬಿಡಾಡಿ ದನಗಳ ಕಾಟದಿಂದ ಬೇಸತ್ತು ಹೋಗಿದ್ದಾರೆ.

ಇದಲ್ಲದೆ ಮಳೆ ಗಾಳಿ ಬಂದರೆ ಇವರ ಸ್ಥಿತಿ ಅಧೋಗತಿಗೆ ತಲುಪಿದೆ. ಗಾಳಿಗೆ ಶೆಡ್‌ನ‌ ತಾಡಪಾಲುಗಳು ಅಲ್ಲಲ್ಲಿ ಬಿದ್ದಿರುತ್ತವೆ. ಇಷ್ಟಲ್ಲದೇ ತರಕಾರಿ ವ್ಯಾಪಾರಸ್ಥರು ಮಳೆ ನೀರು ಬೀಳುವುದರಿಂದ ತಡಪಾಲು ಹೊದ್ದುಕೊಂಡು ಕುಳಿತುಕೊಳ್ಳಬೇಕಾಗಿದೆ.

ಪ್ರತಿ ಗುರುವಾರ ಪಟ್ಟಣದಲ್ಲಿ ಸಂತೆ ನಡೆಯುತ್ತಿದ್ದು, ತರಕಾರಿ ವ್ಯಾಪಾರಸ್ಥರ ಜತೆಗೆ ಇತರೆ ತಾಲೂಕು ಮತ್ತು ಜಿಲ್ಲೆಗಳಿಂದ ಬೇರೆ ಬೇರೆ ವ್ಯಾಪಾರ ಮಾಡುವ ಜನರು ಪಟ್ಟಣಕ್ಕೆ ಬರುತ್ತಿದ್ದು. ಸಂತೆಗೆ ಸುತ್ತಮುತ್ತ ಗ್ರಾಮಗಳ ಸಾರ್ವಜನಿಕರು ಬರುತ್ತಾರೆ. ಅದರೆ ಗೇಣಿಕೆಹಾಳ ರಸ್ತೆ ಎದುರು ಬಸವಣ್ಣ ರಸ್ತೆ, ಬಳ್ಳಾರಿ ರಸ್ತೆ ಸೇರಿ ಈ ಮೂರು ರಸ್ತೆಗಳ ಪಕ್ಕದಲ್ಲಿ ನಿತ್ಯ ತರಕಾರಿ ವ್ಯಾಪಾರ ನಡೆಯುತ್ತಿದೆ. ವ್ಯಾಪಾರ ಸ್ಥಳದಲ್ಲಿ ಗೇಣಿಕೆಹಾಳ್‌ ಮತ್ತು ಸಿರಿಗೇರಿ ಗ್ರಾಮಕ್ಕೆ ಹೋಗುವ ಆಟೋಗಳು ಇಲ್ಲೇ ನಿಲ್ಲಿಸಿರುತ್ತಾರೆ. ಇದರಿಂದ ಜನರಿಗೆ ಬರಲು ಕಷ್ಟವಾಗಿದೆ. ಜತೆಗೆ ಮಾರುಕಟ್ಟೆ ವ್ಯವಸ್ಥೆ ಬಗ್ಗೆ ಮಾಜಿ ಶಾಸಕರಾದ ಸೂರ್ಯನಾರಾಯಣ ರೆಡ್ಡಿ, ಟಿ.ಎಚ್.ಸುರೇಶ ಬಾಬು ಅವರ ಅಧಿಕಾರದಿಂದ ಹಿಡಿದು ಪ್ರಸಕ್ತ ಸಾಲಿನಲ್ಲಿರುವ ಶಾಸಕ ಜೆ.ಎನ್‌ ಗಣೇಶ ಅವರಿಗೆ ನಮಗೆ ತಾತ್ಕಾಲಿಕವಾಗಿ ವ್ಯಾಪಾರ ಮಾಡಲು ಮಾರುಕಟ್ಟೆಯ ವ್ಯವಸ್ಥೆ ಕಲ್ಪಿಸಿ ಕೊಡುವಂತೆ ತಿಳಿಸಿ ಗಮನಕ್ಕೆ ಕೂಡ ತಂದಿದ್ದಾರೆ.

ಇತ್ತೀಚೆಗೆ ಕಳೆದ ದಿನಗಳ ಹಿಂದೆ ಕಂಪ್ಲಿ ರಸ್ತೆ, ಗೇಣಿಕೆಹಾಳ ರಸ್ತೆ, ಮುಷ್ಟಗಟ್ಟೆ ರಸ್ತೆಗಳ ಅಗಲೀಕರಣ ವಿಷಯ ಕುರಿತು ಪಟ್ಟಣದ ನೀರಾವರಿ ಕಚೇರಿಯಲ್ಲಿ ಮುಖಂಡರ ಸಮ್ಮುಖದಲ್ಲಿ ಮತ್ತು ಶಾಸಕ ಜೆ.ಎನ್‌.ಗಣೇಶ್‌ ಅವರ ನೇತೃತ್ವದಲ್ಲಿ ಸಾರ್ವಜನಿಕ ಸಂಪರ್ಕ ಸಭೆ ಕರೆಯಲಾಗಿತ್ತು. ಸಭೆಯ ಕೊನೆಯಲ್ಲಿ ತರಕಾರಿ ವ್ಯಾಪಾರಸ್ಥರಿಗೆ ತಾತ್ಕಾಲಿಕವಾಗಿ ವ್ಯವಸ್ಥೆ ಕಲ್ಪಿಸುವುದಾಗಿ ಹೇಳಿ ಭರವಸೆ ನೀಡಿದ್ದರು.

ಕುರುಗೋಡಿನಲ್ಲಿ ಮಾರುಕಟ್ಟೆಗೆ ಪರ್ಯಾಯ ವ್ಯವಸ್ಥೆ ಮಾಡಿ ಜನರಿಗೆ ಮತ್ತು ತರಕಾರಿ ವ್ಯಾಪಾರಸ್ಥರಿಗೆ ಅನುಕೂಲ ಮಾಡಬೇಕು ಎಂದು ಅಂದಿನಿಂದ ಗುರಿ ಹೊಂದಿದ್ದೆ. ಈಗಾಗಲೇ ಕುರುಗೋಡು ಹೊಸ ತಾಲೂಕಾಗಿದೆ. ಮುಖ್ಯವಾಗಿ ತಾಲೂಕಿನಲ್ಲಿ ಮಾರುಕಟ್ಟೆಯ ವ್ಯವಸ್ಥೆ ಬೇಕು. ಅದಕ್ಕೆ ಪರ್ಯಾಯ ವ್ಯವಸ್ಥೆ ಮಾಡುವುದರ ಬಗ್ಗೆ ಸಂಸದರ ಜತೆ ಮಾತನಾಡಿ ಶೀಘ್ರ ವ್ಯವಸ್ಥೆ ಮಾಡಲು ಯತ್ನಿಸಲಾಗುವುದು.
ಟಿ.ಎಚ್.ಸುರೇಶ್‌ ಬಾಬು,
ಮಾಜಿ ಶಾಸಕರು.

ಸುಮಾರು ವರ್ಷಗಳಿಂದ ರಸ್ತೆ ಬದಿಯಲ್ಲಿ ಶೆಡ್‌ ಹಾಕಿಕೊಂಡು ತರಕಾರಿ ವ್ಯಾಪಾರ ಮಾಡಿಕೊಂಡು ಬಂದಿದ್ದೇವೆ. ಗಾಳಿ-ಮಳೆ ಬಂದರೆ ಯಾವುದೇ ರಕ್ಷಣೆ ಇಲ್ಲ. ಸಂಬಂಧಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು ಸೂಕ್ತ ಕ್ರಮಕ್ಕೆ ಮುಂದಾಬೇಕು.
ಮರಿಯಮ್ಮ,
ತರಕಾರಿ ವ್ಯಾಪಾರಿ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.