ವಸತಿ ನಿಲಯಕ್ಕಿಲ್ಲ ಸ್ವಂತ ಕಟ್ಟಡ

ಕೇವಲ ಎರಡು ಕೊಠಡಿಗಳಲ್ಲಿಯೇ ದಿನ ಕಳೆಯುತ್ತಿದ್ದಾರೆ 80 ವಿದ್ಯಾರ್ಥಿನಿಯರು

Team Udayavani, Jul 25, 2019, 12:46 PM IST

25-JUly-23

ಲಕ್ಷ್ಮೇಶ್ವರ: ವಸತಿ ನಿಲಯದ ಹೊರ ನೋಟ.

ಲಕ್ಷ್ಮೇಶ್ವರ: ತಾಲೂಕಿನ ಗೊಜನೂರ ಗ್ರಾಮದಲ್ಲಿರುವ ಕರ್ನಾಟಕ ಕಸ್ತೂರ ಬಾ ಗಾಂಧಿ ಬಾಲಕೀಯರ ವಸತಿ ನಿಲಯಕ್ಕೆ ಸ್ವಂತ ಕಟ್ಟಡವಿಲ್ಲದೇ ಗ್ರಾಮದ ಪ್ರಾಥಮಿಕ ಶಾಲೆಯ ಕೇವಲ ಎರಡು ಕೊಠಡಿಗಳಲ್ಲಿಯೇ 80 ವಿದ್ಯಾರ್ಥಿನಿಯರು ದಿನ ಕಳೆಯುತ್ತಿದ್ದಾರೆ.

6ರಿಂದ 10ನೇ ತರಗತಿಯವರೆಗಿನ ಬಡತನ ರೇಖೆಗಿಂತ ಕೆಳಗಿರುವ ಮತ್ತು ಶಾಲೆಯಿಂದ ಹೊರಗುಳಿದ ಎಸ್‌ಸಿ-ಎಸ್‌ಟಿ ಮತ್ತು ಇತರೇ ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿನಿಯರ ಶಿಕ್ಷಣಕ್ಕಾಗಿ ತೆರೆದಿರುವ ವಸತಿ ನಿಲಯ ಇದಾಗಿದೆ. 2012-13ರಲ್ಲಿ ರಾಜ್ಯ ಸರ್ಕಾರ ಪೂರಕ ಸಿದ್ಧತೆಗಳಿಲ್ಲದೇ ಈ ವಸತಿ ನಿಲಯ ಆರಂಭ ಮಾಡಿತು. ವಸತಿ ನಿಲಯಕ್ಕಾಗಿ ಗ್ರಾಮದ ಪ್ರಾಥಮಿಕ ಶಾಲೆಯ ಎರಡು ಕೊಠಡಿ ಎರವಲು ಪಡೆಯುವ ಮೂಲಕ ಮಂಜೂರಾದ ವಸತಿ ನಿಲಯ ಉಳಿಸಿಕೊಳ್ಳುವಲ್ಲಿ ಇಲಾಖೆ ಗ್ರಾಮಸ್ಥರ ಸಹಕಾರದಿಂದ ಯಶಸ್ವಿಯಾಯಿತು.

ಶಿಕ್ಷಣ ಇಲಾಖೆಯು ಈ ವಸತಿ ನಿಲಯ ನಿರ್ವಹಿಸಲು ಸರ್ಕಾರೇತರ ಸಂಸ್ಥೆಗಳಿಗೆ ಗುತ್ತಿಗೆ ನೀಡಿ ಕೈ ತೊಳೆದುಕೊಂಡಿದೆ. ಒಂದು ಕೊಠಡಿಯಲ್ಲಿ ತಲಾ 40 ಬಾಲಕಿಯರಂತೆ ತುಂಬಲಾಗಿದ್ದು, ಕಾಲು ಚಾಚಿ ಮಲಗಲೂ ಕೂಡ ಆಗದಂತಹ ಸ್ಥಿತಿಯಿದೆ. ವಿದ್ಯಾರ್ಥಿನಿಯರು ತಮ್ಮ ಟ್ರಂಕ್‌, ಪುಸ್ತಕ, ಹಾಸಿಗೆ, ಬಟ್ಟೆ-ಬರೆ ಇತರೇ ಅವಶ್ಯಕ ವಸ್ತುಗಳನ್ನು ಮುಂದಿಟ್ಟುಕೊಂಡು ಅಭ್ಯಸಿಸುತ್ತಿದ್ದು, ಮೂಕವೇದನೆ ಅನುಭವಿಸುತ್ತಿದ್ದಾರೆ.

ಇದು ಕೇವಲ ವಸತಿ ಶಾಲೆಯಾಗಿದ್ದು, ಮಕ್ಕಳು ಶಿಕ್ಷಣಕ್ಕಾಗಿ ಗ್ರಾಮದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಅಭ್ಯಸಿಸುತ್ತಿದ್ದಾರೆ. 6ನೇ ವರ್ಗದಲ್ಲಿ 12, 7ನೇ ವರ್ಗದಲ್ಲಿ 15, 8ನೇ ವರ್ಗದಲ್ಲಿ 13, 9ನೇ ವರ್ಗದಲ್ಲಿ 23 ಹಾಗೂ 10ನೇ ವರ್ಗದಲ್ಲಿ 17 ಸೇರಿ ಒಟ್ಟು 80 ವಿದ್ಯಾರ್ಥಿನಿಯರು ವಾಸವಾಗಿದ್ದಾರೆ. ಇವರಿಗೆ ಮಧ್ಯಾಹ್ನ ಶಾಲೆಯ ಬಿಸಿಯೂಟವಾದರೆ ಬೆಳಗ್ಗೆ, ರಾತ್ರಿ ಮತ್ತು ರಜಾ ದಿನಗಳು ಇವರ ಊಟೋಪಚಾರವನ್ನು ಕೊಪ್ಪಳ ಮೂಲದ ಮಂಜುಶ್ರೀ ಎಂಬ ಸಂಸ್ಥೆ ನಿಭಾಯಿಸುತ್ತಿದೆ.

ಧಾರವಾಡದ ಕೆ.ಆರ್‌.ಪಿ ಅಸೋಸಿಯೆಟ್ಸ್‌ನವರು ವಸತಿ ನಿಲಯದ ವಾರ್ಡನ್‌, ದೈಹಿಕ ಶಿಕ್ಷಕರು, ಕಾವಲುಗಾರ ಮತ್ತು ಇಬ್ಬರು ಅಡುಗೆ ಸಿಬ್ಬಂದಿ ವ್ಯವಸ್ಥೆ ನಿರ್ವಹಿಸುತ್ತದೆ. ಇಲ್ಲಿನ ಶಿಕ್ಷಣ ಇಲಾಖೆಯದ್ದು ಕೇವಲ ಉಸ್ತುವಾರಿ ಮಾತ್ರ.

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.