ಅಧಿಕಾರಿಗಳ ವಿರುದ್ಧ ಹೂಲಗೇರಿ ಗರಂ

ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಬೇಡಸರ್ವೇ ಇಲಾಖೆಯಲ್ಲಿ ಶೀಘ್ರ ಅರ್ಜಿ ವಿಲೇವಾರಿಯಾಗಲಿ

Team Udayavani, Dec 14, 2019, 4:07 PM IST

14-December-23

ಲಿಂಗಸುಗೂರು: ಮೈಮೇಲೆ ಖಾಕಿ ಹಾಕಿಕೊಂಡು ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡ್ತೀಯಾ..? ನಿನ್ನ ಅಧಿಕಾರವನ್ನು ಅಮಾಯಕ ರೈತರ ಮೇಲೆ ಚಲಾಯಿಸುವುದು ಸರಿಯಲ್ಲ ಎಂದು ಶಾಸಕ ಡಿ.ಎಸ್‌. ಹೂಲಗೇರಿ ಅವರು ಪ್ರಾದೇಶಿಕ ಅರಣ್ಯಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.

ತಾಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ತಾಲೂಕಿನಲ್ಲಿ ರೈತರನ್ನು ಒಕ್ಕಲೆಬ್ಬಿಸಿ ಸುಮ್ಮನೆ ಸಮಸ್ಯೆ ಸೃಷ್ಟಿಸಿ ಅನಗತ್ಯ ಗೊಂದಲ ಮೂಡಿಸುತ್ತಿರುವ ನನ್ನ ಗಮನಕ್ಕೆ ಬಂದಿದೆ ಎಂದು ಶಾಸಕರು ಅರಣ್ಯಾಧಿಕಾರಿ ಕಾಂಬ್ಳೆ ಅವರನ್ನು ತರಾಟೆಗೆ ತೆಗದುಕೊಂಡರು. ಇದಕ್ಕೆ ಅರಣ್ಯಾಧಿಕಾರಿಗಳು, ಅರಣ್ಯಭೂಮಿಯಲ್ಲಿ ಅಕ್ರಮ ಬೇಸಾಯ ತಡೆಗಟ್ಟುವಂತೆ ಸುಪ್ರೀಂಕೋರ್ಟ್‌ ಆದೇಶ ಇದೆ ಎಂದು ಸಮಾಜಾಯಿಷಿ ನೀಡಲು ಯತ್ನಿಸಿದರು. ಇದಕ್ಕೆ ಗರಂ ಆದ ಶಾಸಕರು, ಸುಪ್ರೀಂಕೋರ್ಟ್‌ ರೈತರನ್ನು ಒಕ್ಕಲೆಬ್ಬಿಸಿ ಅವರಿಗೆ ತೊಂದರೆ ಕೊಟ್ಟು ಅವರ ಮೇಲೆ ಕೇಸ್‌ ಮಾಡುವಂತೆ ಹೇಳಿದೆಯಾ?, ನಿನ್ನ ಮೇಲೆ ಖಾಕಿ ಇದೆ ಎಂದು ಅಹಂ ಬಿಟ್ಟು ರೈತರಿಗೆ ನಯವಾಗಿ ವರ್ತಿಸಿ ಅವರಿಗೆ ಮನವರಿಕೆ ಮಾಡಿಕೊಡಬೇಕು. ತಾಲೂಕಿನಲ್ಲಿ ಎಲ್ಲಿ-ಯಾವ ಸಸಿ ಹಚ್ಚದ ಬಗ್ಗೆ ಮಾಹಿತಿ ಕೊಡಬೇಕು. ಸ್ಥಳ ಪರಿಶೀಲಿಸುತ್ತೇನೆ. ಒಂದು ವೇಳೆ ನೀವು ನೀಡುವ ಮಾಹಿತಿಗೂ ಸ್ಥಳದಲ್ಲಿ ವ್ಯತ್ಯಾಸ ಕಂಡು ಬಂದರೆ ನಿಮ್ಮ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡುತ್ತೇನೆ ಎಂದು ಎಚ್ಚರಿಸಿದರು.

ಅಧಿಕಾರಿಗೆ ತಾಕೀತು: ನಿಮ್ಮ ಕಚೇರಿಯಲ್ಲಿ ಎರಡು ಸಾವಿರಕ್ಕೂ ಅರ್ಜಿಗಳು ವಿಲೇವಾರಿ ಮಾಡದೇ ಪೆಂಡಿಂಗ್‌ ಉಳಿಸಿಕೊಂಡಿದ್ದೀರಿ. ಸರ್ಕಾರಿ ಸರ್ವೇಗೂ ವಿಳಂಬ ಮಾಡುತ್ತೀರಿ. 12 ಜನ ಸರ್ವೇಯರ್‌ ಇಟ್ಟುಕೊಂಡು ಅರ್ಜಿ ವಿಲೇವಾರಿ ಮಾಡಲು ಆಗುವುದಿಲ್ಲವೇ? ಎಂದು ಪ್ರಶ್ನಿಸಿದ ಅವರು, ಶೀಘ್ರವೇ ನಿಮ್ಮ ಇಲಾಖೆ ಪ್ರತ್ಯೇಕ ಸಭೆ ಕರೆದು ಪ್ರತಿ ಅರ್ಜಿ ಸ್ಥಿತಿಗತಿ ಪರಿಶೀಲಿಸುವೆ. ಅದರಲ್ಲಿ ತಪ್ಪು ಕಂಡುಬಂದರೆ ನಿಮ್ಮನ್ನು ಅಮಾನತು ಮಾಡಲು ಶಿಫಾರಸು ಮಾಡುವೆ ಎಂದು ಸರ್ವೇ ಅಧಿ ಕಾರಿಗೆ ತಾಕೀತು ಮಾಡಿದರು.

ಡೆಂಘೀ ನಿಯಂತ್ರಿಸಿ: ಮರಳಿ ಗ್ರಾಮದಲ್ಲಿ ಡೆಂಘೀ ಪ್ರಕರಣಗಳು ತಾಂಡವಾಡುತ್ತಿದೆ. ನೀವು ಗ್ರಾಮಕ್ಕೆ ತೆರಳಿ ಅಲ್ಲಿನ ಪರಿಸ್ಥಿತಿ ಅವಲೋಕಿಸಿ ವರದಿ ನೀಡುವಂತೆ ತಾಲೂಕು ಆರೋಗ್ಯಾಧಿಕಾರಿ ಡಾ| ರುದ್ರಗೌಡ ಪಾಟೀಲ್‌ ಅವರಿಗೆ ಸೂಚಿಸಿದರು. ಮರಳಿ ಗ್ರಾಮದಲ್ಲಿ 6 ಶಂಕಿತ ಡೆಂಘೀ ಪ್ರಕರಣ ಪತ್ತೆಯಾಗಿದೆ. ಎರಡು ನೀರಿನ ಮೂಲ ಪರೀಕ್ಷೆ ಮಾಡಲಾಗಿದೆ. ನಿಯಂತ್ರಣಕ್ಕಾಗಿ ವೈದ್ಯರ ತಂಡವನ್ನು ಅಲ್ಲಿಗೆ ಕಳಿಸಲಾಗಿದೆ. ತಾತ್ಕಲಿಕವಾಗಿ ಕ್ಲಿನಿಕ್‌ ತೆರೆಯಲಾಗಿದೆ ಎಂದು ಡಾ| ರುದ್ರಗೌಡ ಸಭೆಗೆ ತಿಳಿಸಿದರು.

ಲೋಕೋಪಯೋಗಿ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಬಹಳಷ್ಟು ಕೆಲಸಗಳು ಬಾಕಿ ಉಳಿದಿವೆ. ಬರುವ ಮಾರ್ಚ್‌ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಿದರೆ ಸರ್ಕಾರದಲ್ಲಿ ಮತ್ತೆ ಹೊಸ ಕಾಮಗಾರಿಗಳಿಗೆ ಅನುದಾನ ತರಲು ಪ್ರಯತ್ನಿಸಬಹುದು. ಕೂಡಲೇ ಕಾಮಗಾರಿಗಳಿಗೆ ಚುರುಕು ನೀಡಿ ಪೂರ್ಣಗೊಳಿಸಿಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಗಂಗಾಕಲ್ಯಾಣ ಯೋಜನೆಗಳು ಕೇವಲ ಕಡತದಲ್ಲಿ ಪ್ರಗತಿ ಕಾಣುತ್ತಿದ್ದು, ಅದರ ಬದಲಾಗಿ ಸ್ಥಳದಲ್ಲಿ ಪ್ರಗತಿ ಕಾಣಬೇಕು. ಕುಡಿಯುವ ನೀರಿನ ಯೋಜನೆಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಯಾವುದೇ ರೀತಿ ವಿಳಂಬ ಮಾಡಬಾರದು. ಕುಡಿಯುವ ನೀರಿನ ಸೌಕರ್ಯ ಒದಗಿಸುವ ಬಗ್ಗೆ ನಿರ್ಲಕ್ಷ್ಯ ಬೇಡ ಎಂದು ಜೆಸ್ಕಾಂ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಗುರುಗುಂಟಾ ಗ್ರಾಮದಲ್ಲಿ ಹಾಸ್ಟೆಲ್‌ ಸಮಸ್ಯೆ ಅವ್ಯವಸ್ಥೆಯಿಂದ ಕೂಡಿದೆ. ಈ ಬಗ್ಗೆ ಕ್ರಮ ಕೈಗೊಳ್ಳಿ. ಹಾಸ್ಟೆಲ್‌ ನಿರ್ವಹಣೆಗೆ ವಿವಿಧ ಸಂಘಟನೆಯವರಿಗೆ ಕೆಲಸ ಕೊಡಬೇಡಿ. ಸರಿಯಾಗಿ ಕೆಲಸ ಮಾಡುವವರಿಗೆ ನಿರ್ವಹಣೆ ಕೆಲಸ ಕೊಡಿ ಎಂದು ಎಸ್‌ಟಿ ಅಧಿಕಾರಿ ಶಿವಮಾನಪ್ಪ ಅವರಿಗೆ ಸೂಚಿಸಿದರು.

ತಾಪಂ ಅಧ್ಯಕ್ಷೆ ಶ್ವೇತಾ ಪಾಟೀಲ್‌, ಜಿಪಂ ಸದಸ್ಯರಾದ ಬಸನಗೌಡ ಕಂಬಳಿ, ಸಂಗಣ್ಣ ದೇಸಾಯಿ, ತಾಪಂ ಇಒ ಪಂಪಾಪತಿ ಸೇರಿದಂತೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.