ಬಸವಸಾಗರ ಉದ್ಯಾನ ಅಭಿವೃದ್ಧಿ ಯಾವಾಗ?

ಜಲಾಶಯ ಮುಂಭಾಗದ ನೂರಾರು ಎಕರೆಯಲ್ಲಿ ಬೆಳೆದಿವೆ ಜಾಲಿಗಿಡಗಳು •ನರ್ಸರಿಯಲ್ಲಿ ಬೆಳೆಸಿದ ಸಸಿಗಳು ಬೇರೆ ಉದ್ಯಾನಕ್ಕೆ ರವಾನೆ

Team Udayavani, Jun 5, 2019, 10:45 AM IST

5-June-11

ಲಿಂಗಸುಗೂರು: ನಾರಾಯಣಪುರ ಬಸವಸಾಗರ ಜಲಾಶಯ.

ಲಿಂಗಸುಗೂರು: ನಾಡಿನ ಎಲ್ಲ ಜಲಾಶಯಗಳಲ್ಲಿ ಉದ್ಯಾನವನ ಅಭಿವೃದ್ಧಿಪಡಿಸಿ ಪ್ರವಾಸಿಗರನ್ನು ಸೆಳೆಯಲಾಗುತ್ತಿದೆ. ಆದರೆ ಸಮೀಪದ ನಾರಾಯಣಪುರ ಬಸವಸಾಗರ ಜಲಾಶಯಕ್ಕೆ ಮಾತ್ರ ಈವರೆಗೆ ಈ ಭಾಗ್ಯ ಇಲ್ಲದಾಗಿದ್ದು, ಇಲ್ಲಿನ ಜಲಾಶಯ ಬರೀ ಜಾಲಿಗಿಡಗಳಿಂದ ಕಂಗೊಳಿಸುತ್ತಿದೆ!

1982ರಲ್ಲಿ ನಾಡಿಗೆ ಸಮರ್ಪಣೆಗೊಂಡ ನಾರಾಯಣಪುರ ಬಸವಸಾಗರ ಜಲಾಶಯ ರಾಜ್ಯದ ಮೂರನೇ ದೊಡ್ಡ ಅಣೆಕಟ್ಟು ಎಂಬ ಖ್ಯಾತಿ ಪಡೆದಿದೆ. ಇದು ರಾಯಚೂರು, ವಿಜಯಪುರ, ಯಾದಗಿರಿ, ಕಲಬುರಗಿ ಜಿಲ್ಲೆಗಳ ರೈತರ ಜೀವನಾಡಿಯಾಗಿದೆ. ಬಸವಸಾಗರ ಜಲಾಶಯ ನಿರ್ಮಾಣಕ್ಕಾಗಿ ಲಿಂಗಸುಗೂರು, ಮುದ್ದೇಬಿಹಾಳ ಹಾಗೂ ಸುರಪುರ ತಾಲೂಕುಗಳ ಒಟ್ಟು 77 ಹಳ್ಳಿಗಳನ್ನು ಸ್ಥಳಾಂತರಿಸಿ ಪುನರ್ವಸತಿ ಕಲ್ಪಿಸಲಾಗಿದೆ.

ಆಲಮಟ್ಟಿ ಜಲಾಶಯದಲ್ಲಿ 1993-94ರಿಂದ ಈವರೆಗೆ ಮೂರು ಹಂತದಲ್ಲಿ 33,506 ಎಕರೆ ಪ್ರದೇಶದಲ್ಲಿ ವಿವಿಧ ಉದ್ಯಾನವನಗಳನ್ನು ನಿರ್ಮಿಸಿದ್ದು, ಪ್ರವಾಸಿಗರನ್ನು ಸೆಳೆಯುತ್ತಿದೆ. ಆದರೆ ಬಸವಸಾಗರ ಜಲಾಶಯ ನಾಡಿಗೆ ಸಮರ್ಪಣೆಗೊಂಡು 36 ವರ್ಷ ಗತಿಸಿದರೂ ಈವರೆಗೂ ಪ್ರವಾಸಿಗರನ್ನು ಆರ್ಕಷಿಸುವಂತಹ ಉದ್ಯಾನವನ ಅಥವಾ ಯಾವುದೇ ಅಭಿವೃದ್ಧಿ ಕಾರ್ಯ ಆಗಿಲ್ಲ.

ಎಲ್ಲಿ ನೋಡಿದಲ್ಲಿ ಜಾಲಿಗಿಡ: ಬಸವಸಾಗರ ಜಲಾಶಯ ಮುಂಭಾಗದ ನೂರಾರು ಎಕರೆ ಜಮೀನು ಪಾಳು ಬಿದ್ದಿದ್ದು, ಎಲ್ಲಿ ನೋಡಿದಲ್ಲಿ ಮುಳ್ಳಿನ ಜಾಲಿಗಿಡಗಳು ಹೆಮ್ಮರವಾಗಿ ಬೆಳೆವೆ. ಇದು ಬಸವಸಾಗರ ಜಲಾಶಯ ವೀಕ್ಷಣೆಗೆ ಆಗಮಿಸುವ ಪ್ರವಾಸಿಗರಲ್ಲಿ ಬೇಸರ ಮೂಡಿಸುತ್ತಿದೆ. ಈ ಪ್ರದೇಶದಲ್ಲಿ ಉದ್ಯಾನವನ ಅಭಿವೃದ್ಧಿಪಡಿಸಿದರೆ ಇನ್ನೂ ಹೆಚ್ಚಿನ ಪ್ರವಾಸಿಗರು ಇಲ್ಲಿಗೆ ಆಗಮಿಸಲು ಅನುಕೂಲವಾಗಲಿದೆ.

ನಾಡಿನಲ್ಲಿರುವ ಎಲ್ಲ ಜಲಾಶಯಗಳಲ್ಲಿ ಉದ್ಯಾನವನ ನಿರ್ಮಿಸಿ ಅಣೆಕಟ್ಟೆಗಳ ಸೌಂದರ್ಯ ಹೆಚ್ಚಿಸಲಾಗಿದೆ. ಆದರೆ ನಾರಾಯಣಪುರ ಬಸವಸಾಗರ ಜಲಾಶಯಕ್ಕೆ ಈ ಭಾಗ್ಯ ಇಲ್ಲದಾಗಿದೆ. ಈ ಹಿಂದಿನ ಸರಕಾರದಲ್ಲಿ ಕೃಷ್ಣಾ ಅಚ್ಚುಕಟ್ಟು ಪ್ರದೇಶದವರೇ ಪ್ರವಾಸೋದ್ಯಮ, ಜಲಸಂಪನ್ಮೂಲ ಸಚಿವರಾಗಿದ್ದರೂ ಬಸವಸಾಗರ ಜಲಾಶಯ ಬಗ್ಗೆ ನಿರ್ಲಕ್ಷ್ಯ ತೋರಿದ್ದರಿಂದ ಇಂದು ಜಲಾಶಯದ ನೂರಾರು ಎಕರೆ ಜಮೀನು ಪಾಳುಬಿದ್ದಿದೆ. ಇಲ್ಲಿ ಉದ್ಯಾನ ನಿರ್ಮಾಣ ಮಾಡುವುದು ಒಂದು ಕಡೆ ಇರಲಿ ಇಲ್ಲಿ ಬೆಳೆದಿರುವ ಜಾಲಿಗಿಡಗಳನ್ನು ಕಡಿದು ಸ್ವಚ್ಛಗೊಳಿಸಿ ಇನ್ನಿತರ ಗಿಡಗಳನ್ನು ಬೆಳೆಸುವುದಕ್ಕೂ ಇಲ್ಲಿನ ಅಧಿಕಾರಿಗಳು ಮುಂದಾಗದೇ ಇರುವುದು ಇಲ್ಲಿನ ಜನರ ದೌರ್ಬಾಗ್ಯವೇ ಸರಿ.

ನರ್ಸರಿ: ಜಲಾಶಯದ ಬಲಭಾಗದಲ್ಲಿ ಆಲಮಟ್ಟಿ ಅರಣ್ಯ ವಿಭಾಗದ ರೋಡಲಬಂಡಾ ವಲಯದಲ್ಲಿ ಬಸವಸಾಗರ ನರ್ಸರಿ ಇದೆ. ಇಲ್ಲಿ 50 ಸಾವಿರಕ್ಕೂ ಅಧಿಕ ವಿವಿಧ ಜಾತಿಯ ಸಸಿಗಳನ್ನು ಬೆಳೆಸಿ ಅವುಗಳನ್ನು ಆಲಮಟ್ಟಿ ಉದ್ಯಾನ ಸೇರಿ ಇನ್ನಿತರ ಕಡೆಗೆ ರವಾನಿಸಲಾಗುತ್ತಿದೆ. ಇಲ್ಲಿ ಬೆಳೆದ ಸಸಿಗಳು ಆಲಮಟ್ಟಿ ಉದ್ಯಾನಕ್ಕೆ ಬೇಕು. ಆದರೆ ಬಸವಸಾಗರ ಜಲಾಶಯಕ್ಕೆ ಮಾತ್ರ ಉದ್ಯಾನ ಭಾಗ್ಯ ಇಲ್ಲದಿರುವುದು ಈ ಭಾಗದ ಜನರಲ್ಲಿ ನಿರಾಸೆ ಮೂಡಿಸಿದೆ.

ಪ್ರವಾಸಿ ತಾಣಗಳು: ನಾರಾಯಣಪುರ ಜಲಾಶಯದಲ್ಲಿ ಉದ್ಯಾನ ಅಭಿವೃದ್ಧಿಪಡಿಸಿದರೆ ಈ ಭಾಗದಲ್ಲಿರುವ ಇತರೆ ಪ್ರವಾಸಿ ತಾಣಗಳ ವೀಕ್ಷಣೆಗೂ ಜನರು ಹರಿದುಬರುವಂತಾಗಲಿದೆ. ತಾಲೂಕಿನ ಜಲದುರ್ಗ ಕೋಟೆ, ಛಾಯಾಭಗವತಿ, ಚಾಲುಕ್ಯ ಶೈಲಿಯ ಜಡೆ ಶಂಕರಲಿಂಗೇಶ್ವರ ದೇವಸ್ಥಾನ ಸೇರಿ ಐತಿಹಾಸಿಕ ಹಿನ್ನೆಲೆ ಹೊಂದಿರುವ ಸಣ್ಣಪುಟ್ಟ ಪ್ರವಾಸಿ ತಾಣಗಳು ಜಲಾಶಯಕ್ಕೆ ಹತ್ತಿರದಲ್ಲಿವೆ. ಮತ್ತಷ್ಟು ಪ್ರವಾಸಿಗರನ್ನು ಇತ್ತ ಸೆಳೆಯುವ ಉದ್ದೇಶದಿಂದ ಇಲ್ಲಿ ಉದ್ಯಾನವನ ನಿರ್ಮಾಣ ಮಾಡುವುದು ಅಗತ್ಯವಾಗಿದೆ. ಆಲಮಟ್ಟಿ ಮಾದರಿಯಲ್ಲೇ ಇಲ್ಲೂ ಕೂಡಾ ಉದ್ಯಾನವನ ನಿರ್ಮಾಣ ಮಾಡಬೇಕೆಂಬುದು ಇಲ್ಲಿನ ಪ್ರವಾಸಿಗರ ಒತ್ತಾಯವಾಗಿದೆ.

ಬಸವಸಾಗರ ಜಲಾಶಯದ ಮುಂಭಾಗದಲ್ಲಿ ನೂರಾರು ಎಕರೆ ಜಾಗ ಈಗ ಪಾಳು ಬಿದ್ದಿದೆ. ಉದ್ಯಾನ ನಿರ್ಮಿಸಿದರೆ ನಿತ್ಯವೂ ಸಾವಿರಾರು ಪ್ರವಾಸಿಗರು ಇಲ್ಲಿಗೆ ಬರುತ್ತಾರೆ. ಇದರ ಸುತ್ತಮುತ್ತಲಿನ ಐತಿಹಾಸಿಕ ತಾಣಗಳಿಗೆ ಹೆಚ್ಚಿನ ಮನ್ನಣೆ ನೀಡಿದಂತಾಗುತ್ತಿದೆ. ಸರ್ಕಾರ ಉದ್ಯಾನ ನಿರ್ಮಿಸಲು ಮುಂದಾಗಬೇಕು.
ಅನಿಲ ಅಲಬನೂರ, ಪ್ರವಾಸಿಗ

ಬಸವಸಾಗರ ಜಲಾಶಯಕ್ಕೆ ಮತ್ತಷ್ಟು ಮೆರಗು ನೀಡಲು ಉದ್ಯಾನವನ ನಿರ್ಮಾಣಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ವಿಶ್ವಬ್ಯಾಂಕ್‌ ನೆರವು ದೊರೆಯುವ ವಿಶ್ವಾಸವಿದೆ.
ಆರ್‌.ಎಲ್. ಹಳ್ಳೂರು
ಜೆಇ ಆಣೆಕಟ್ಟು ವಿಭಾಗ

ಶಿವರಾಜ ಕೆಂಭಾವಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.