ಆರ್ಭಟಿಸಿದ ಕೃಷ್ಣಾ ಈಗ ಶಾಂತ

ಬಸವಸಾಗರ ಜಲಾಶಯದಿಂದ ಹೊರ ಹರಿವು ಸ್ಥಗಿತ•ಪರಿಹಾರ ಕೇಂದ್ರದಲ್ಲಿ ಸಂತ್ರಸ್ತರ ವಾಸ್ತವ್ಯ

Team Udayavani, Aug 21, 2019, 11:11 AM IST

21-Agust-6

ಲಿಂಗಸುಗೂರು: ಹೊರಹರಿವು ಸ್ಥಗಿತಗೊಳಿಸಿದ್ದರಿಂದ ಮಂಗಳವಾರ ಕಂಡು ಬಂದ ಬಸವಸಾಗರ ಜಲಾಶಯ.

ಶಿವರಾಜ ಕೆಂಭಾವಿ
ಲಿಂಗಸುಗೂರು:
ಕಳೆದ ತಿಂಗಳೊಪ್ಪತ್ತಿನಿಂದ ಕೃಷ್ಣಾ ನದಿ ಆರ್ಭಟಿಸಿ ತೀರದ ಜನರಲ್ಲಿ ಆತಂಕ ಸೃಷ್ಠಿಸಿ ಈಗ ಶಾಂತವಾಗಿದ್ದು, ಪ್ರವಾಹದಲ್ಲಿ ಬದುಕು ಕಳೆದುಕೊಂಡ ಸಂತ್ರಸ್ಥರು ಸರ್ಕಾರದ ನೆರವಿನತ್ತ ಮುಖ ಮಾಡಿದ್ದಾರೆ.

ಜುಲೈ 25ರಂದು ಬಸವಸಾಗರ ಜಲಾಶಯದಿಂದ 10 ಸಾವಿರ ಕ್ಯೂಸೆಕ್‌ ನೀರು ಹೊರ ಹರಿವಿನಿಂದ ಆರಂಭವಾಗಿ 6.30 ಲಕ್ಷ ಕ್ಯೂಸೆಕ್‌ ನೀರು ಹರಿದು ತಾಲೂಕಿನ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಅಪಾರ ಹಾನಿಯಾಗಿದೆ. ಜಲಾಶಯದಿಂದ ಹೊರ ಹರಿವು ಮಂಗಳವಾರ ಸಂಪೂರ್ಣ ಬಂದ್‌ ಮಾಡಿದ್ದರಿಂದ ಕೃಷ್ಣಾ ನದಿ ಆರ್ಭಟ ಸಂಪೂರ್ಣ ತಗ್ಗಿದೆ.

ಅನೇಕ ದಶಕಗಳಿಂದ 6.30 ಲಕ್ಷ ಕ್ಯೂಸೆಕ್‌ ನೀರು ಬಸವಸಾಗರ ಜಲಾಶಯಕ್ಕೆ ಬಂದ ಹಾಗೂ ಹೊರಕ್ಕೆ ಹರಿಸಿದ ಉದಾಹರಣೆಗಳು ಇಲ್ಲ. ಆದರೆ ಈ ವರ್ಷ ಪ್ರವಾಹ ಆರ್ಭಟ ಜೋರಾಗಿತ್ತು. ಇದರಿಂದ ಲಿಂಗಸುಗೂರು, ದೇವದುರ್ಗ ಹಾಗೂ ರಾಯಚೂರು ತಾಲೂಕುಗಳ ನದಿತೀರದ ಗ್ರಾಮಗಳು ಪ್ರವಾಹಕ್ಕೆ ಸಿಲುಕಿ ಅಲ್ಲಿನ ಜನರ ಬದುಕು ಮೂರಾಬಟ್ಟೆಗೊಳಿಸಿ ಈಗ ಕೃಷ್ಣಾ ಮೌನಕ್ಕೆ ಶರಣಾಗಿದೆ.

ಪ್ರವಾಹದಿಂದ ಅನೇಕ ಜನರು ತಮ್ಮ ಹೊಲದಲ್ಲಿ ಬೆಳೆದ ಬೆಳೆ, ಮನೆ, ಮನೆಯಲ್ಲಿನ ಬಟ್ಟೆಬರೆ, ಬೆಲೆಬಾಳುವ ವಸ್ತುಗಳು, ಮೇವು, ಜಾನುವಾರುಗಳನ್ನು ಕಳೆದುಕೊಳ್ಳುವಂತಾಗಿದೆ. ಸಂತ್ರಸ್ತರ ಬದುಕು ಅತಂತ್ರಕ್ಕೆ ಸಿಲುಕಿದಂತಾಗಿದೆ.

ತಾಲೂಕಿನ ಕೆಲವು ನದಿ ತೀರದ ಗ್ರಾಮಗಳಲ್ಲಿ ಸಂತ್ರಸ್ತರಾಗಿರುವ ಜನರಿಗೆ ಪರಿಹಾರ ಕೇಂದ್ರದಲ್ಲಿ ವಾಸ್ತವ್ಯ ವ್ಯವಸ್ಥೆ ಮಾಡಿಸಲಾಗಿದೆ. ಆದರೆ ಸಂತ್ರಸ್ತರು ಬೆಳೆ ಪರಿಹಾರ, ಮನೆ ಪುನರ್‌ ನಿರ್ಮಾಣ, ಜಾನುವಾರು ಕಳೆದ ಕೊಂಡುವವರಿಗೆ ಪರಿಹಾರ ಹಾಗೂ ನಡುಗಡ್ಡೆ ಗ್ರಾಮಗಳಿಗೆ ಶಾಶ್ವತ ಪರಿಹಾರ ಒದಗಿಸಲು ಆ ಗ್ರಾಮಗಳ ಸ್ಥಳಾಂತರ. ಗೋನವಾಟ್ಲ-ಕಡದರಗಡ್ಡಿ ಸೇತುವೆ ನಿರ್ಮಾಣ ಮಾಡುತ್ತೇವೆ ಎಂದು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಒಂದಲ್ಲ ಹತ್ತಾರು ಭರವಸೆಗಳನ್ನು ಸಂತ್ರಸ್ತರಿಗೆ ನೀಡಿದ್ದಾರೆ. ಈ ಎಲ್ಲ ಭರವಸೆಗಳು ಈಡೇರಿಕೆಯತ್ತ ಸಂತ್ರಸ್ತರು ಮುಖ ಮಾಡಿ ಕಾತರರಾಗಿದ್ದಾರೆ. 2009ರಲ್ಲಿ ಉಂಟಾಗಿದ್ದ ಪ್ರವಾಹಕ್ಕೆ ಸಿಲುಕಿದ್ದ ಚಿಕ್ಕ ಉಪ್ಪೇರಿ, ಸುಣಕಲ್ ಗ್ರಾಮಗಳ ಸಂತ್ರಸ್ತರಿಗಾಗಿ 367 ಮನೆಗಳನ್ನು ಗ್ರಾಮಗಳ ಹೊರಭಾಗದಲ್ಲಿ ಹಟ್ಟಿ ಚಿನ್ನದ ಗಣಿ ಸಹಯೋಗದಲ್ಲಿ ನಿರ್ಮಿಸಲಾಗಿತ್ತು. ಆದರೆ ಇಲ್ಲಿ ಯಾವುದೇ ಮೂಲಭೂತ ಸೌಲಭ್ಯಗಳು ಇಲ್ಲದಾಗಿದೆ. ಸುಣಕಲ್ ಗ್ರಾಮದ ಆಸರೆ ಮನೆಗಳಲ್ಲಿ ಕೆಲವೇ ಕೆಲವು ಕುಟಂಬಗಳು ಹರುಕು-ಮುರುಕು ಆಸರೆ ಮನೆಗಳಲ್ಲಿ ಕ್ರಿಮಿಕಿಟ, ವಿಷಜಂತುಗಳ ಮಧ್ಯೆ ಅನಿವಾರ್ಯವಾಗಿ ವಾಸ ಮಾಡುತ್ತಿದ್ದಾರೆ. ಇನ್ನೂ ಚಿಕ್ಕ ಉಪ್ಪೇರಿ ಗ್ರಾಮಗಳಲ್ಲಿ ಆಸರೆ ಮನೆಗಳ ಇನ್ನೂ ಸಂತ್ರಸ್ತರಿಗೆ ಹಸ್ತಾಂತರಿಸಿಲ್ಲ. ಮನೆಗಳು ಸಂಪೂರ್ಣವಾಗಿ ಹಾಳಾಗಿವೆ. ಈ ಬಗ್ಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಗಮನಹರಿಸದೇ ಇರುವುದು ರ್ದುದೈವದ ಸಂಗತಿಯಾಗಿದೆ.

2009ರಲ್ಲಿನ ಹಾಗೂ ಈ ವರ್ಷದ ಪ್ರವಾಹ ಸಂತ್ರಸ್ತರ ಅನುಭವಿಸಿದ ಯಾತನೆಯನ್ನು ದೂರ ಮಾಡಲು ತಾಲೂಕಿನ ಅಧಿಕಾರಿಗಳು ಕಾಳಜಿ ವಹಿಸಿ ಯುದ್ಧೋಪಾದಿಯಲ್ಲಿ ಪರಿಹಾರ ಕಾರ್ಯ ಮಾಡಬೇಕಾಗಿದೆ ಎಂಬ ಆಗ್ರಹ ಕೇಳಿ ಬಂದಿದೆ.

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.