70 ಗ್ರಾಮಗಳಲ್ಲಿಲ್ಲ ಮೂರಡಿ ಭೂಮಿ


Team Udayavani, Jan 6, 2020, 1:42 PM IST

6-Jnauary-15

ಲಿಂಗಸುಗೂರು: ಮನುಷ್ಯ ಸತ್ತ ನಂತರ ಶವ ಸಂಸ್ಕಾರಕ್ಕೆ ಕನಿಷ್ಠ ಮೂರಡಿ-ಆರಡಿ ಭೂಮಿ ಬೇಕು. ಆದರೆ ತಾಲೂಕಿನ 70ಕ್ಕೂ ಅಧಿಕ ಗ್ರಾಮಗಳಲ್ಲಿ ಶವ ಸಂಸ್ಕಾರಕ್ಕೆ ಮೂರಡಿ ಭೂಮಿ ಇಲ್ಲ…! ಇದು ನಿಜ, ತಾಲೂಕಿನ ಸುಮಾರು 70ಕ್ಕೂ ಹೆಚ್ಚು ಗ್ರಾಮಗಳಲ್ಲಿ ಸ್ಮಶಾನಕ್ಕೆ ಭೂಮಿಯೇ ಇಲ್ಲ. ಈ ಗ್ರಾಮಗಳಲ್ಲಿ ಮನೆಯಲ್ಲಿ ಯಾರಾದರೂ ಮೃತಪಟ್ಟರೆ ಕುಟುಂಬದವರಿಗೆ ಅಗಲಿಕೆಯ ದುಃಖ ಒಂದೆಡೆಯಾದರೆ, ಮತ್ತೂಂದೆಡೆ ಅಂತ್ಯ ಸಂಸ್ಕಾರ ಎಲ್ಲಿ ನಡೆಸಬೇಕೆಂಬ ನೋವು ಮನೆಯವರ ಜೊತೆ ಊರವರನ್ನೂ ಕಾಡುತ್ತಿದೆ.

ಗ್ರಾಮಗಳಲ್ಲಿ ಹೊಲ, ತೋಟ ಇರುವವರು ಕುಟುಂಬದಲ್ಲಿ ಯಾರಾದರೂ ಮೃತಪಟ್ಟರೆ ಹೇಗೋ ತಮ್ಮ ಭೂಮಿಯಲ್ಲಿ ಶವ ಸಂಸ್ಕಾರ ನೆರವೇರಿಸುತ್ತಾರೆ. ಆದರೆ ತುಂಡು ಭೂಮಿ ಇಲ್ಲದವರು, ಬಡವರ ಮನೆಯಲ್ಲಿ ನಿಧನರಾದರೆ ಶವ ಸಂಸ್ಕಾರಕ್ಕೆ ಜಾಗೆ ಹುಡುಕುವುದೇ ಸಮಸ್ಯೆ. ಸತ್ತವರಿಗೆ ಮುಕ್ತಿ ದೊರಕಿಸಲು ಊರಿಗೊಂದು ಸ್ಮಶಾನ ಇರಬೇಕು ಎಂಬ ಕಾರಣಕ್ಕೆ ಬಹಳ ಹಿಂದಿನಿಂದಲೂ ಪ್ರತಿ ಊರಲ್ಲಿ ಸ್ಮಶಾನ ಭೂಮಿ ಗುರುತಿಸಲಾಗುತ್ತಿತ್ತು.

ಊರುಗಳು ಬೆಳೆದಂತೆ, ಬಡಾವಣೆಗಳಾದ ಬಳಿಕ ಮನೆ, ಕಟ್ಟಡಗಳು ನಿರ್ಮಾಣಕ್ಕೆ ಆದ್ಯತೆ ನೀಡಲಾಯಿತೇ ಹೊರತು ಸ್ಮಶಾನಕ್ಕೆ ಭೂಮಿ ಗುರುತಿಸುವಲ್ಲಿ ಆಳುವವರು, ಸರ್ಕಾರ, ಅಧಿಕಾರಿಗಳು, ಸಮುದಾಯ ನಿರ್ಲಕ್ಷಿಸುತ್ತ ಬಂದ ಪರಿಣಾಮ ಈಗ ಶವ ಸಂಸ್ಕಾರವೇ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಸತ್ತರೆ ಶವ ಹೂಳಲು ಮೂರಡಿ ಅಡಿ ಜಾಗ ಇಲ್ಲದ ಮೇಲೆ ಎಷ್ಟು ಆಸ್ತಿ ಮಾಡಿದರೆ ಏನು ಪ್ರಯೋಜನ ಎಂಬುದು ಹಿರಿಯರ ಮಾತಾಗಿದೆ. ಇದ್ದಾಗ ಸುಖಪಡಲಿಲ್ಲ ಸತ್ತಾಗಲಾದರೂ ಗೊಂದಲ ಗೋಜಲುಗಳಿಲ್ಲದೆ ಮುಕ್ತಿ ಕೊಡಿ ಎಂದು ಹಿರಿಯರು ಹೇಳುತ್ತಾರೆ. ಆದರೆ ಅಂತ್ಯಸಂಸ್ಕಾರಕ್ಕೆ ಕನಿಷ್ಠ ಜಾಗವೂ ಇಲ್ಲದಿರುವುದು ಮತ್ತಷ್ಟು ನೋವು ತರುವಂತಾಗಿದೆ.

ಲಿಂಗಸುಗೂರು ಪಟ್ಟಣದಲ್ಲಿ ಕೆಲವು ಸಮುದಾಯಗಳಿಗೆ ಸಶ್ಮಾನವೇ ಇಲ್ಲ. ಕರಡಕಲ್‌ ಕೆರೆ ತಟದಲ್ಲಿ ಅಂತ್ಯಸಂಸ್ಕಾರ ನೆರವೇರಿಸುತ್ತಿದ್ದಾರೆ. ಹುಲಿಗುಡ್ಡ ಗ್ರಾಮಸ್ಥರು ಅರಣ್ಯ ಭೂಮಿಯಲ್ಲಿ ಶವಸಂಸ್ಕಾರ ಮಾಡುತ್ತಿದ್ದಾರೆ. ಪಟ್ಟಣದ ವ್ಯಾಪ್ತಿಯಲ್ಲಿ ಸರ್ಕಾರಿ ಜಾಗೆ ಇದ್ದರೂ ಸಶ್ಮಾನಕ್ಕೆ ಜಾಗ ಇಲ್ಲದಾಗಿದೆ.

ಗುರುತಿಸುವಿಕೆಯಲ್ಲಿ ಕಾಲಹರಣ: ಸ್ಮಶಾನ ಭೂಮಿ ಇಲ್ಲದ ಗ್ರಾಮಗಳಲ್ಲಿ ಸರ್ಕಾರಿ ಭೂಮಿ ನೀಡುವ ಬಗ್ಗೆ ಕಂದಾಯ ಇಲಾಖೆ ಜಾಗ ಗುರುತಿಸುವುದರಲ್ಲೇ ಕಾಲಹರಣ ಮಾಡುತ್ತಿದೆ ವಿನಃ ಜಾಗ ಗುರುತಿಸುವ ಕೆಲಸ ನಡೆಯುತ್ತಿಲ್ಲ. ಇದಲ್ಲದೆ ಸರ್ಕಾರ ನಿಗದಿಪಡಿಸಿದ ಬೆಲೆಗೆ ಭೂಮಿ ಮಾರಾಟ ಮಾಡಲು ಯಾರೂ ಮುಂದೆ ಬರದ ಹಿನ್ನೆಲೆಯಲ್ಲಿ ಸಶ್ಮಾನಕ್ಕೆ ಜಾಗವೂ ಇಲ್ಲಿ ಗಗನ ಕುಸಮವಾಗಿದೆ. ತಾಲೂಕು ಆಡಳಿತ ಸ್ಮಶಾನ ಇಲ್ಲದ ಗ್ರಾಮಗಳಲ್ಲಿ ಸ್ಮಶಾನಕ್ಕೆ ಜಾಗೆ ಒದಗಿಸಲು ಮುಂದಾಗಬೇಕಿದೆ.

ಟಾಪ್ ನ್ಯೂಸ್

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.