ಮೂರು ಸಾವಿರ ದಾಳಿಂಬೆ ಗಿಡ ಬೇರು ಸಮೇತ ಸ್ಥಳಾಂತರ!

22 ಎಕರೆಯಲ್ಲಿ 10 ಸಾವಿರ ದಾಳಿಂಬೆ ಗಿಡ ಬೆಳೆಸಿದ್ದ ರೈತ „ 6 ವರ್ಷದ 10 ಅಡಿ ಎತ್ತರ ಬೆಳೆದ ದಾಳಿಂಬೆ ಗಿಡಗಳು

Team Udayavani, Jan 5, 2020, 5:35 PM IST

5-January-37

ಲಿಂಗಸುಗೂರು: ಪ್ರಗತಿಪರ ರೈತರೊಬ್ಬರು 22 ಎಕರೆಯಲ್ಲಿ ಬೆಳೆಸಿದ್ದ ದಾಳಿಂಬೆಗಿಡಗಳಲ್ಲಿ ಮೂರು ಸಾವಿರ ಗಿಡಗಳನ್ನು ಬೇರು ಸಮೇತ ಬೇರೆ ಜಮೀನಿಗೆ ಸ್ಥಳಾಂತರಿಸುವ ಸಾಹಸಕ್ಕೆ ಕೈ ಹಾಕಿ ಇತರೆ ರೈತರು ಹುಬ್ಬೇರಿಸುವಂತೆ ಮಾಡಿದ್ದಾರೆ.

ಲಿಂಗಸುಗೂರು ಪಟ್ಟಣದ ಪ್ರಗತಿಪರ ರೈತ ಬಸವರಾಜಗೌಡ ಗಣೇಕಲ್‌ ಅವರೇ ಈ ಸಾಹಸಕ್ಕೆ ಕೈ ಹಾಕಿದವರು. ಅವರು ತಾಲೂಕಿನ ನೀರಲಕೇರಾ ಗ್ರಾಮದ ಬಳಿ ತಮ್ಮ 22 ಎಕರೆ ಜಮೀನಿನಲ್ಲಿ 2014ರಲ್ಲಿ 10 ಸಾವಿರ ದಾಳಿಂಬೆ ಗಿಡಗಳನ್ನು ನೆಟ್ಟಿದ್ದರು. ಈ ಗಿಡಗಳು ಸದ್ಯ 10 ಅಡಿ ಎತ್ತರಕ್ಕೆ ಬೆಳೆದಿವೆ. ಇದರಲ್ಲಿ ಮೂರು ಸಾವಿರ ಗಿಡಗಳನ್ನು ಬೇರೆ ಜಮೀನಿಗೆ ಸ್ಥಳಾಂತರಿಸಲು ಮತ್ತು ಎರಡು ಸಾವಿರ ಗಿಡಗಳನ್ನು ತೆಗೆದುಹಾಕಲು ನಿರ್ಧರಿಸಿದ್ದರು. ಇದಕ್ಕೂ ಮುನ್ನ ಅವರು ಸುಮಾರು 50ಕ್ಕೂ ಗಿಡಗಳನ್ನು ಪ್ರಾಯೋಗಿಕವಾಗಿ ಬೇರು ಸಮೇತ ಕಿತ್ತು ಬೇರೆಡೆ ನೆಟ್ಟಿದ್ದರು. ಅವು ಉತ್ತಮವಾಗಿ ಬೆಳೆದು ಫಲ ನೀಡುತ್ತಿವೆ. ಇದರಿಂದ ಸ್ಫೂರ್ತಿ ಪಡೆದು ಈಗ ಮೂರು ಸಾವಿರ ಗಿಡಗಳನ್ನು ಬೇರೆ ಜಮೀನಿಗೆ ಸ್ಥಳಾಂತರಿಸಲು ಮುಂದಾಗಿದ್ದಾರೆ. ಇದಕ್ಕಾಗಿ ಅವರು ತೋಟಗಾರಿಕೆ ಇಲಾಖೆ ಮತ್ತು ಕೃಷಿ ತಜ್ಞರ ಸಲಹೆಯನ್ನು ಪಡೆದಿದ್ದಾರೆ.

ಏಕೆ ಸ್ಥಳಾಂತರ: ಆರು ವರ್ಷದ ಗಿಡಗಳು ಸದ್ಯ 10 ಅಡಿ ಬೆಳೆದುನಿಂತಿವೆ. ಆದರೆ ಇಳುವರಿ ಕುಂಠಿತಗೊಂಡಿದ್ದರಿಂದ 10 ಸಾವಿರ ಗಿಡಗಳ ಪೈಕಿ ಮೂರುಸಾವಿರ ಗಿಡಗಳನ್ನು ಬೇರು ಸಮೇತ ಕಿತ್ತು ನಾಲ್ಕು ಕಿ.ಮೀ. ದೂರದ ಕರಡಕಲ್‌ ಹೊರಭಾಗ ಘನತ್ಯಾಜ್ಯ ವಿಲೇವಾರಿ ಘಟಕದ ಎದುರಿನ 10 ಎಕರೆ ಜಮೀನಿಗೆ ತಂದು ನೆಡಲಾಗುತ್ತಿದೆ. ಇದಕ್ಕಾಗಿ 20 ಲಕ್ಷ ರೂ. ವ್ಯಯಿಸುತ್ತಿದ್ದು, ಈಗಾಗಲೇ ಒಂದು ಸಾವಿರ ಗಿಡಗಳನ್ನು ನಡೆಲಾಗಿದೆ.

ಕಾರ್ಯಾಚರಣೆ ಹೇಗೆ?: ನೀರಲಕೇರಾ ಬಳಿಯ 22 ಎಕರೆ ಜಮೀನಿನಲ್ಲಿ ದಾಳಿಂಬೆ ಗಿಡದ ಸುತ್ತಲು ಗುಂಡಿ ತೆಗೆದು ಅದಕ್ಕೆ ನೀರು ಹಾಕಿ ಮಣ್ಣು ಹಾಗೂ ಬೇರುಗಳನ್ನು ಸಡಿಲಿಸಲಾಗಿದೆ. ಅದೇ ರೀತಿ ಕರಡಕಲ್‌ ಬಳಿಯ ಜಮೀನಿನಲ್ಲೂ ಬೇರು ಸಮೇತ ದಾಳಿಂಬೆ ಗಿಡ ನೆಡಲು ಗುಂಡಿಗಳನ್ನು ತೋಡಲಾಗಿದೆ. ಎರಡು ದಿನಗಳ ಮೊದಲೇ ನೀರು ಹರಿಸಲಾಗಿದೆ. ತಾಯಿ ಬೇರು ಹಾಗೂ ಮಣ್ಣು ಸಹಿತವಾಗಿ ಗಿಡಗಳನ್ನು ಹಿಟಾಚಿ ಮೂಲಕ ಕಿತ್ತು ಒಂದು ಟ್ರ್ಯಾಕ್ಟರ್‌ನಲ್ಲಿ ಆರು ಗಿಡಗಳಂತೆ ಕರಡಕಲ್‌ ಬಳಿಯ ಜಮೀನಿಗೆ ತಂದು ಗುಂಡಿಯಲ್ಲಿ ನಡೆಲಾಗಿದೆ. ಈ ಗುಂಡಿಗೆ ಕ್ರಿಮಿನಾಶಕ, ಗೊಬ್ಬರ ಹಾಕಿ ನೆಟ್ಟ ಗಿಡಗಳನ್ನು ಸಂರಕ್ಷಿಸುವ ಕೆಲಸ ನಡೆದಿದೆ.

ಬಹುತೇಕರು ಬೆಳೆ ಹಾನಿ, ಕೃಷಿ ದುಬಾರಿ ಎಂಬ ಕಾರಣಕ್ಕೆ ಕೃಷಿಯಿಂದ ವಿಮುಖರಾಗುತ್ತಿರುವ ಈ ಸಂದರ್ಭದಲ್ಲಿ ಗಣೇಕಲ್‌ ಅವರು ಹೊಸ ಪ್ರಯತ್ನಕ್ಕೆ ಕೈಹಾಕಿರುವುದು ಎಲ್ಲರಲ್ಲಿ ಅಚ್ಚರಿ ಮೂಡಿಸಿದೆ. ಮೂರು ಸಾವಿರ ಗಿಡಗಳನ್ನು ಕಿತ್ತಲು ಎರಡು ಹಿಟಾಚಿ ಬಳಸುತ್ತಿದ್ದಾರೆ. ಗಿಡಗಳನ್ನು ಬೇರೆ ಜಮೀನಿಗೆ ಸಾಗಿಸಲು ಆರು ಟ್ರ್ಯಾಕ್ಟರ್‌ಗಳನ್ನು ಬಳಸುತ್ತಿದ್ದಾರೆ. ಸುಮಾರು 80 ಕೂಲಿ ಕಾರ್ಮಿಕರು ಕಳೆದ ವಾರದಿಂದ ಕೆಲಸ ಮಾಡುತ್ತಿದ್ದಾರೆ.

ಶಿವರಾಜ ಕೆಂಭಾವಿ

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.