ನೀರಿಗಾಗಿ ಹಟ್ಟಿ ಬಂದ್‌

ಮೂರು ದಿನದಲ್ಲಿ ನೀರು ಪೂರೈಕೆ •ನಿರ್ವಹಣೆ ಚಿನ್ನದ ಗಣಿ ಕಂಪನಿಗೆ: ಅಧಿಕಾರಿಗಳ ಭರವಸೆ

Team Udayavani, Sep 19, 2019, 6:22 PM IST

19-Sepctember-30

ಲಿಂಗಸುಗೂರು: ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಹಟ್ಟಿ ಪಟ್ಟಣದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಸಾರ್ವಜನಿಕರು ಧರಣಿ ನಡೆಸಿದರು.

ಲಿಂಗಸುಗೂರು: ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಆಗ್ರಹಿಸಿ ಹಟ್ಟಿ ನಾಗರಿಕರ ಹೋರಾಟ ಸಮಿತಿ, ದಲಿತ ಮತ್ತು ಕನ್ನಡ ಪರ ಸಂಘಟನೆಗಳು ಬುಧವಾರ ಕರೆ ನೀಡಿದ್ದ ಹಟ್ಟಿ ಪಟ್ಟಣ ಬಂದ್‌ ಯಶಸ್ವಿಯಾಗಿದೆ.

ಬಂದ್‌ ಹಿನ್ನಲೆಯಲ್ಲಿ ಹಟ್ಟಿ ಪಟ್ಟಣದಲ್ಲಿ ಬೆಳಗ್ಗೆಯಿಂದಲೇ ಅಂಗಡಿ ಮುಂಗಟ್ಟು, ಹೊಟೇಲ್ಗಳನ್ನು ಮುಚ್ಚಲಾಗಿತ್ತು. ಸಾರಿಗೆ ಸಂಸ್ಥೆ ಕೂಡ ಬಸ್‌ ಸಂಚಾರ ಸ್ಥಗಿತಗೊಸಿ ಬಂದ್‌ಗೆ ಬೆಂಬಲ ಸೂಚಿಸಿತ್ತು. ಹಳೆ ಬಸ್‌ ನಿಲ್ದಾಣದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಕಾಕಾ ನಗರ, ಕೋಠಾ ಕ್ರಾಸ್‌ ಮುಖಾಂತರ ಅಂಬೇಡ್ಕರ್‌ ಸರ್ಕಲ್ಗೆ ಆಗಮಿಸಿ ರಸ್ತೆಯಲ್ಲಿ ಕುಳಿತು ಧರಣಿ ನಡೆಸಿದರು. ಬಳಿಕ ವಾಲ್ಮೀಕಿ ಸರ್ಕಲ್ನಲ್ಲಿ ಪ್ರತಿಭಟನಾ ನಿರತರು ಬಹಿರಂಗ ಸಭೆ ನಡೆಸಿದರು.

ಈ ವೇಳೆ ಮಾತನಾಡಿದ ಕಾರ್ಮಿಕ ಮುಖಂಡ ಮಹ್ಮದ್‌ ಅಮೀರಲಿ, ಕಳೆದ ಆರು ವರ್ಷಗಳ ಹಿಂದೆ 21 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ವಿಫಲಗೊಂಡಿದೆ. ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಗುತ್ತಿಗೆದಾರರು ಕೈಗೊಂಡ ಕಳಪೆ ಕಾಮಗಾರಿಯೇ ಕಾರಣವಾಗಿದೆ. ಕೂಡಲೇ ಅವ್ಯವಸ್ಥೆ ಸರಿಪಡಿಸಿ ಪಟ್ಟಣಕ್ಕೆ ಕುಡಿಯುವ ನೀರು ಪೂರೈಸಬೇಕೆಂದು ಆಗ್ರಹಿಸಿದರು.

ತಹಶೀಲ್ದಾರ್‌ ಚಾಮರಾಜ ಪಾಟೀಲ ಹಾಗೂ ಜಿಪಂ ಎಇಇ ಶ್ರೀಮಂತ ಮಿಣಜಗಿ, ಸ್ಥಳಕ್ಕೆ ಭೇಟಿ ನೀಡಿ, ಪಟ್ಟಣಕ್ಕೆ ಮೂರು ದಿನಗಳ ಒಳಗೆ ನೀರು ಪೂರೈಸಲು ಕ್ರಮ ವಹಿಸಲಾಗುವುದು. ಬಲದಂಡೆ ನಾಲೆಗೆ ಮೋಟಾರ್‌ ಪಂಪ್‌ ಅಳವಡಿಸಿ ನೀರು ಪೂರೈಸಲಾಗುವುದು. ಮತ್ತು ಕೃಷ್ಣಾನದಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ದುರಸ್ತಿ ಕಾಮಗಾರಿ ತಕ್ಷಣ ಮುಗಿಸಲಾಗುವುದು. ಮತ್ತು ಕುಡಿಯುವ ನೀರು ಪೂರೈಕೆ ಯೋಜನೆ ನಿರ್ವಹಣೆಯನ್ನು ಹಟ್ಟಿ ಚಿನ್ನದ ಗಣಿಗೆ ವಹಿಸುವ ಕುರಿತು ಕಂಪನಿ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಚರ್ಚಿಸಲಾಗಿದೆ. ಪಟ್ಟಣದ ಮುಖಂಡರ ನಿಯೋಗ ಕರೆದುಕೊಂಡು ಹೋಗಿ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದರು.

ಜಿಪಂ ಸದಸ್ಯೆ ಸಾಹೀರಾ ಬೇಗಂ, ಎನ್‌.ಸ್ವಾಮಿ, ಬಾಲಪ್ಪ ನಾಯಕ, ಕೆ.ವಿ. ಕಳ್ಳಿಮಠ, ಬಾಬು ಭೂಪುರ, ತಾಪಂ ಸದಸ್ಯ ಎಂ.ಲಿಂಗರಾಜ, ಮೌನೇಶ ಕಾಕಾನಗರ, ಮಲ್ಲಿಕಾರ್ಜುನ ಚಿತ್ರನಾಳ, ಹಿರಿಯ ಮುಖಂಡ ಗುಂಡಪ್ಪ ಗೌಡ, ಎಂ.ಸಿ ಚಂದ್ರಶೇಖರ, ಶ್ರೀನಿವಾಸ ಮಧು, ಚಿನ್ನಪ್ಪ, ನಿರ್ಮಲಾ, ಶಿವರಾಜಗೌಡ ಗುರಿಕಾರ, ಸಂಗಯ್ಯಸ್ವಾಮಿ, ಕನಕರಾಜ ಗುರಿಕಾರ, ವೀರನಗೌಡ, ಆನಂದಪ್ಪ, ರಾಜುಗೌಡ ಗುರಿಕಾರ, ವಿನೋದ ಕಮಲನ್ನಿ, ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.