ಜಪ್ತಿ ವಾಹನಗಳಿಗಿಲ್ಲ ಮುಕ್ತಿ

ಪೊಲೀಸ್‌ ಠಾಣೆ ಆವರಣದಲ್ಲಿ ಮಳೆ-ಬಿಸಿಲಿಗೆ ತುಕ್ಕು ಹಿಡಿಯುತ್ತಿವೆ ದ್ವಿಚಕ್ರ ವಾಹನಗಳು

Team Udayavani, Jun 17, 2019, 11:19 AM IST

17-June-9

ಲಿಂಗಸುಗೂರು: ಪೊಲೀಸ್‌ ಠಾಣೆ ಆವರಣದಲ್ಲಿ ಧೂಳು ತಿನ್ನುತ್ತಿರುವ ಬೈಕ್‌ಗಳು.

ಶಿವರಾಜ ಕೆಂಭಾವಿ
ಲಿಂಗಸುಗೂರು:
ಅಪಘಾತಕ್ಕೀಡಾದ, ವಿವಿಧ ಕಾನೂನು ಬಾಹಿರ ಚಟುವಟಿಕೆಗೆ ಬಳಸಿದ ಬೈಕ್‌ ಇತರೆ ವಾಹನಗಳು ಇಲ್ಲಿನ ಪೊಲೀಸ್‌ ಠಾಣೆ ಆವರಣದಲ್ಲಿ ಮಳೆ, ಬಿಸಿಲಿಗೆ ಹಾಳಾಗಿ ತುಕ್ಕು ಹಿಡಿಯುತ್ತಿವೆ.

ಅಪಘಾತ, ಕಳ್ಳತನ, ಕೋಳಿ ಪುಂಜ, ಜೂಜಾಟ ಸೇರಿ ಇತರೆ ಪ್ರಕರಣಗಳಲ್ಲಿ ಜಪ್ತಿ ಮಾಡಿದ ಬೈಕ್‌, ಲಾರಿ, ಕಾರ್‌ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ನಿಂತಿವೆ. ಕೆಲ ವಾಹನಗಳು ಅಪಘಾತದಲ್ಲಿ ನಜ್ಜುಗುಜ್ಜಾಗಿದ್ದರೆ, ಹೆಚ್ಚಿನ ನೂರಾರು ವಾಹನಗಳು ಉತ್ತಮ ಕಂಡೀಷನ್‌ನಲ್ಲಿವೆ. ಇವುಗಳಲ್ಲಿ ಕೆಲವು ಹೊಸ ವಾಹನಗಳಿದ್ದರೆ, ಇನ್ನೂ ಕೆಲವು ಕೆಲ ವರ್ಷಗಳಷ್ಟು ಹಿಂದಿನವು.

ಅಕ್ರಮ ಸಾಗಾಟಕ್ಕೆ ಬಳಸಿದ ವಾಹನಗಳು: ಅಕ್ರಮ ಸಾಗಾಟಕ್ಕೆ ಬಳಸಿದ ವಾಹನಗಳನ್ನು ವಶಪಡಿಸಿಕೊಂಡ ಬಳಿಕ ನ್ಯಾಯಾಲಯದಲ್ಲಿ ಕೇಸ್‌ ದಾಖಲಿಸಿದರೂ ವಾಹನಗಳನ್ನು ಬಿಟ್ಟುಕೊಡುವ ಹಾಗಿಲ್ಲವಂತೆ. ಕಾನೂನು ಉಲ್ಲಂಘಿಸಿದ ಕಾರಣ ವಾಹನಗಳ ಮಾಲೀಕರು ತಮ್ಮ ವಾಹನಗಳತ್ತ ತಲೆ ಹಾಕುವುದಿಲ್ಲ. ನ್ಯಾಯಾಲಯವಂತೂ ವಾಹನಗಳನ್ನು ಸುಲಭದಲ್ಲಿ ಬಿಟ್ಟು ಕೊಡುತ್ತಿಲ್ಲ. ಹಾಗಾಗಿ ಲಾರಿ, ಟಾಟಾ ಏಸ್‌ ಸೇರಿ ಇನ್ನಿತರ ವಾಹನಗಳು ಪೊಲೀಸ್‌ ಠಾಣೆ ಆವರಣದಲ್ಲಿ ಕೊಳೆಯುತ್ತಿವೆ.

ಜಾಗೆ ಕೊರತೆ: ಯಾವ ಗ್ಯಾರೇಜ್‌, ಶೋರೂಮ್‌ಗಳಲ್ಲೂ ಇಲ್ಲದಷ್ಟು ವಾಹನಗಳು ಪೊಲೀಸ್‌ ಠಾಣೆಯಲ್ಲಿ ಬಿಡಾರ ಹೂಡಿವೆ. ಅಪಘಾತಕ್ಕೀಡಾದ ಬೈಕ್‌, ಕಾರು ಇನ್ನಿತರ ವಾಹನಗಳು ಇಲ್ಲಿವೆ. ಬೈಕ್‌ಗಳಿಗಂತೂ ಜಾಗವಿಲ್ಲದಂತಾಗಿದೆ.

ಕಾರಣ..?: ಯಾವುದೇ ಪ್ರಕರಣದಲ್ಲಿ ಪೊಲೀಸರು ಜಪ್ತಿ ಮಾಡಿದ ವಾಹನಗಳನ್ನು ಪೊಲೀಸ್‌ ಠಾಣೆಯಿಂದ ಬಿಡುಗಡೆಯಾಗಬೇಕಾದರೆ ವಾಹನದ ನೋಂದಣಿ, ವಿಮೆ ಸೇರಿದಂತೆ ಇನ್ನಿತರ ಅಗತ್ಯ ದಾಖಲಾತಿ ಇದ್ದರೆ ಮಾತ್ರ ವಾಹನ ಬಿಡುಗಡೆಗೊಳಿಸುವಂತೆ ಸುಪ್ರೀಂ ಕೋರ್ಟ್‌ ಆದೇಶವಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅನೇಕ ಬೈಕ್‌ಗಳು ಇಲ್ಲಿ ಕೊಳೆಯುತ್ತಿವೆ. ಇದಲ್ಲದೆ ಬೈಕ್‌ ಅಪಘಾತದಲ್ಲಿ ಸವಾರರು ಮೃತಪಟ್ಟಿದ್ದರೆ ಅವರ ಕುಟಂಬಸ್ಥರು ನಮ್ಮವರೇ ಅಪಘಾತದಲ್ಲಿ ತೀರಿ ಹೋದ ಮೇಲೆ ಬೈಕ್‌ ನಮಗ್ಯಾಕೆ ಬೇಕು ಎನ್ನುವ ಕಾರಣಕ್ಕೆ ಬಿಡಿಸಿಕೊಳ್ಳಲು ಮುಂದಾಗುವುದಿಲ್ಲ. ಇಲ್ಲಿ ಬಿಸಿಲಿಗೆ, ಮಳೆಗೆ ಮೈಯೊಡ್ಡಿವೆ. ಇನ್ನೂ ಕೆಲವು ಅಪಘಾತದಲ್ಲಿ ನುಜ್ಜಗುಜ್ಜಾಗಿರುವ ಕಾರಣ ರಿಪೇರಿ ಮಾಡಿಸುವ ಬದಲು ಹೊಸ ವಾಹನಗಳನ್ನು ಕೊಳ್ಳಬಹುದು ಎಂಬ ಕಾರಣಕ್ಕೆ ಕೆಲವರು ಬೈಕ್‌ಗಳನ್ನು ಬಿಡಿಸಿಕೊಳ್ಳದ್ದಕ್ಕೆ ಅನೇಕ ವರ್ಷಗಳಿಂದ ಪೊಲೀಸ್‌ ಠಾಣೆಯಲ್ಲಿ ಮೂಲೆಗುಂಪಾಗಿವೆ.

ಪಟ್ಟಣದ ಪೊಲೀಸ್‌ ಠಾಣೆ ಆವರಣದಲ್ಲಿ ನೂರಾರು ಬೈಕ್‌ಗಳ ರಾಶಿಯೇ ಇದೆ. ಆದರೆ ಇವುಗಳ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಮೇಲಾಧಿಕಾರಿಗಳು ಗಮನ ಹರಿಸಬೇಕಾಗಿದೆ.

ಪೊಲೀಸ್‌ ಇಲಾಖೆ ಜಪ್ತಿ ಮಾಡಿದ ಬೈಕ್‌, ಕಾರ್‌ ಸೇರಿ ಯಾವುದೇ ವಾಹನಗಳಾಗಲಿ ಅಗತ್ಯ ದಾಖಲೆಗಳು ಇದ್ದರೆ ಮಾತ್ರ ಬಿಡುಗಡೆಗೆ ಸುಪ್ರೀಂಕೋರ್ಟ್‌ ಆದೇಶವಿದೆ. ದಾಖಲಾತಿ ಇರಲಾರದ ವಾಹನಗಳೇ ಇಲ್ಲಿವೆ.
•ದಾದಾವಲಿ,
ಪಿಎಸ್‌ಐ, ಲಿಂಗಸುಗೂರು

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.