ಆರಂಭವಾಗದ ಜಿಟಿಡಿಸಿ ಕಾಲೇಜು ಕ್ಯಾಂಟೀನ್‌

ವಸತಿ ನಿಲಯದಲ್ಲಿ ಊಟ-ಉಪಹಾರವಿಲ್ಲದೇ ವಿದ್ಯಾರ್ಥಿಗಳ ಪರದಾಟ „ ಹೋಟೆಲ್‌ಗ‌ಳನ್ನೇ ಅವಲಂಬಿಸಿದ ವಿದ್ಯಾರ್ಥಿಗಳು

Team Udayavani, Sep 26, 2019, 12:00 PM IST

26-Sepctember-7

ಶಿವರಾಜ ಕೆಂಭಾವಿ
ಲಿಂಗಸುಗೂರು: ಪಟ್ಟಣದ ಜಿಟಿಟಿಸಿ ಕಾಲೇಜಿನ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಳೆದ ಎರಡು ವರ್ಷದ ಹಿಂದೆ ನಿರ್ಮಿಸಿದ್ದ ಕ್ಯಾಂಟೀನ್‌ ಇನ್ನೂ ಆರಂಭಗೊಳ್ಳದಿರುವುದು ವಿದ್ಯಾರ್ಥಿಗಳ ಪರದಾಟಕ್ಕೆ ಕಾರಣವಾಗಿದೆ.

ಪಟ್ಟಣದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ (ಜಿಟಿಟಿಸಿ) ಕಾಲೇಜಿನಲ್ಲಿ ರಕ್ಷಣೆ, ವೈಮಾನಿಕ, ಬಾಹ್ಯಾಕಾಶ ಹಾಗೂ ಕೈಗಾರಿಕಾ ರಂಗಕ್ಕೆ ಸಂಬಂ ಧಿಸಿದ ಅತ್ಯಂತ ಜಟಿಲ ವಿನ್ಯಾಸಗಳ ಹೊಂದಿರುವ ಉಪಕರಣಗಳನ್ನು ಜಿಟಿಡಿಸಿ ಕಾಲೇಜಿನ ಕಾರ್ಯಾಗಾರದಲ್ಲಿನ ಯಂತ್ರಗಳ ಸಹಾಯದಿಂದ ತಯಾರಿಸಲಾಗುತ್ತದೆ. ಕಾಲೇಜಿನಲ್ಲಿ ತರಬೇತಿ ಹೊಂದಿದ ವಿದ್ಯಾರ್ಥಿಗಳು ಸ್ವಯಂ ಉದ್ಯೋಗದ ಜೊತೆಗೆ ದೇಶ, ವಿದೇಶಗಳಲ್ಲಿ ಉದ್ಯೋಗ ಪಡೆಯುವ ಅವಕಾಶಗಳಿವೆ.

ಕಾಲೇಜಿನಲ್ಲಿ ಒಟ್ಟು 105 ವಿದ್ಯಾರ್ಥಿಗಳಿದ್ದಾರೆ. ಇದರಲ್ಲಿ 45 ವಿದ್ಯಾರ್ಥಿಗಳು ಕಾಲೇಜಿನ ವಸತಿ ನಿಲಯದಲ್ಲಿಯೇ ವಾಸ ಮಾಡುತ್ತಾರೆ. ಆದರೆ ಇವರಿಗೆ ಊಟ, ಉಪಹಾರದ ವ್ಯವಸ್ಥೆ ಇಲ್ಲದೇ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ.

1.23 ಕೋಟಿ ರೂ. ವೆಚ್ಚದ ಕ್ಯಾಂಟೀನ್‌: 2016ರಲ್ಲಿ ಜಿಟಿಡಿಸಿ ಕಾಲೇಜಿನ ಆವರಣದಲ್ಲಿ ವಿಶೇಷ ಅಭಿವೃದ್ಧಿ ಯೋಜನೆಯಡಿ(ಎಸ್‌ಡಿಪಿ), ಅಂದಾಜು 1.23 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕ್ಯಾಂಟೀನ್‌ ಕಟ್ಟಡ ನಿರ್ಮಿಸಲಾಗಿದೆ. 2017ರಲ್ಲಿ ಕಟ್ಟಡವನ್ನು ಕಾಲೇಜು ಸುಪರ್ದಿಗೆ ನೀಡಲಾಗಿದೆ. ಕಾಮಗಾರಿ ಪೂರ್ಣಗೊಂಡು ಹಲವು ವರ್ಷಗಳೇ ಉರುಳಿವೆ. ಆದರೆ ಕಟ್ಟಡದ ಉದ್ಘಾಟನೆ ನೆಪದಲ್ಲಿ ಕ್ಯಾಂಟೀನ್‌ ಆರಂಭಗೊಳಿಸದೇ ಇರುವುದರಿಂದ ವಿದ್ಯಾರ್ಥಿಗಳು ಪಟ್ಟಣದ ಹೊಟೇಲ್‌ಗ‌ಳಿಗೆ ಊಟಕ್ಕಾಗಿ ಅಲೆಯುವ ಸ್ಥಿತಿ ನಿರ್ಮಾಣಗೊಂಡಿದೆ.

ತಡೆಗೋಡೆ ಇಲ್ಲ: ಕಾಲೇಜಿನಲ್ಲಿ ಲಕ್ಷಾಂತರ ರೂ. ಬೆಲೆ ಬಾಳುವ ಯಂತ್ರೋಪಕರಣಗಳಿವೆ. ಆದರೆ ಮುಖ್ಯದ್ವಾರ ಬಳಿಯ ರಸ್ತೆ ಬದಿಯಲ್ಲಿ ಕಾಂಪೌಂಡ್‌ ಗೋಡೆ ಬಿದ್ದರೂ ಮರು ನಿರ್ಮಾಣಕ್ಕೆ ಮುಂದಾಗಿಲ್ಲ. ಪರಿಣಾಮ ಕಾಲೇಜಿನ ಕಟ್ಟಡದೊಳಗೆ ಕುರಿ-ಮೇಕೆ,
ದನಕರುಗಳು ನುಗ್ಗುತ್ತಿವೆ. ಕೂಡಲೇ ಕ್ಯಾಂಟೀನ್‌ ಆರಂಭಿಸುವ ಜೊತೆಗೆ ಕಾಲೇಜು ಕಟ್ಟಡಕ್ಕೆ ಆವರಣ ಗೋಡೆ ನಿರ್ಮಿಸಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.