ಮೋದಿ ಮತ್ತೆ ಪ್ರಧಾನಿ; ಜಿಲ್ಲಾದ್ಯಂತ ಸಂಭ್ರಮ
ಬಿಜೆಪಿ ಕಾರ್ಯಕರ್ತರು-ಮೋದಿ ಅಭಿಮಾನಿಗಳ ಶೋಭಾಯಾತ್ರೆಸಾರ್ವಜನಿಕರಿಗೆ ಲಾಡು-ಪೇಡೆ ವಿತರಣೆ ಮೋದಿಗೆ ಜೈಕಾರ
Team Udayavani, May 31, 2019, 10:53 AM IST
ಲಿಂಗಸುಗೂರು: ನರೇಂದ್ರ ಮೋದಿ ಎರಡನೇ ಬಾರಿ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಮೋದಿ ಅಭಿಮಾನಿಗಳು ಸಿಹಿ ವಿತರಿಸಿ ಸಂಭ್ರಮಿಸಿದರು.
ಲಿಂಗಸುಗೂರು: ಅತ್ಯಂತ ಪ್ರಚಂಡ ಬಹುಮತದಿಂದ ಗೆದ್ದು ನರೇಂದ್ರ ಮೋದಿ ಮತ್ತೂಮ್ಮೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರಿಂದ ಗುರುವಾರ ಸಂಜೆ ಪಟ್ಟಣದಲ್ಲಿ ಟೀಮ್ ಮೋದಿ ಸಂಘಟನೆ, ಬಿಜೆಪಿ, ಹಿಂದೂ ಜಾಗರಣಾ ವೇದಿಕೆ ಸೇರಿದಂತೆ ಇನ್ನಿತರ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಅದ್ಧೂರಿಯಾಗಿ ವಿಜಯೋತ್ಸವ ಆಚರಿಸಿದರು.
ಪಟ್ಟಣದ ನೇತಾಜಿ ವೃತ್ತದಿಂದ ವಿವಿಧೆಡೆ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರ ಮೆರವಣಿಗೆ ನಡೆಸಿದರು. ವಿಜಯೋತ್ಸವ ಅಂಗವಾಗಿ 20 ಸಾವಿರ ಲಾಡು ಹಂಚಿದರು.
ಹಿರಿಯ ಮುಖಂಡ ಡಾ| ಶಿವಬಸಪ್ಪ ಮಾತನಾಡಿ, ಕಳೆದ ಐದು ವರ್ಷಗಳಲ್ಲಿ ನರೇಂದ್ರ ಮೋದಿ ದೇಶದ ಪ್ರಗತಿಗಾಗಿ ಶ್ರಮಿಸಿದ್ದಾರೆ. ಅವರು ದೇಶದ ಸಮರ್ಥ ನಾಯಕರಾಗಿ ಹೊರಹೊಮ್ಮಿದ್ದಾರೆ. ಇಡೀ ವಿಶ್ವವೇ ಮೆಚ್ಚುವಂತಹ ನಾಯಕರಾಗಿದ್ದಾರೆ. ಇದೀಗ ಎರಡನೇ ಅವಧಿಗೆ ಅವರು ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದು ನಮ್ಮೆಲ್ಲರಿಗೆ ಹೆಮ್ಮೆಯ ದಿನವಾಗಿದೆ ಎಂದರು. ಹಿರಿಯ ಮುಖಂಡ ಶರಣಬಸಪ್ಪ ಗುಡದನಾಳ, ಲಕ್ಷ್ಮೀಕಾಂತ ರೆಡ್ಡಿ, ಮನೋಹರ ರೆಡ್ಡಿ, ಜಗನ್ನಾಥ ಕುಲಕರ್ಣಿ, ವಿಶ್ವನಾಥ ಆನ್ವರಿ, ಅಯ್ಯಪ್ಪ ವಕೀಲ, ಹನುಮೇಶ ಸರಾಫ್, ಸಿದ್ದು ಬಡಿಗೇರ, ಚೆನ್ನಬಸವ ಹಿರೇಮಠ, ವೀರಣ್ಣ ಹುರಕಡ್ಲಿ, ಮಲ್ಲಯ್ಯ ತಾತ, ಜೀವನ ಬಾಳೇಗೌಡ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ
ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್ ಕಾಸ್ಟಿಂಗ್ ಜಾರಿಯಾಗಲಿ
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್