2 ಸಾವಿರ ಹುದ್ದೆ ಶೀಘ್ರ ಭರ್ತಿಗೆ ಕ್ರಮ
•150 ಹೊಸ ಬಸ್ ಖರೀದಿ •ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ ಎಂಡಿ ಜಾಹೀರಾ ನಸೀಮ್
Team Udayavani, Aug 28, 2019, 1:10 PM IST
ಲಿಂಗಸುಗೂರು: ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕಿ ಜಾಹೀರಾ ನಸೀಮ್ ಪಟ್ಟಣದ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಲಿಂಗಸುಗೂರು: ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ ಎರಡು ಸಾವಿರ ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ಶೀಘ್ರ ನೇಮಕಾತಿ ಮಾಡಲಾಗುವುದು ಎಂದು ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಜಾಹೀರಾ ನಸೀಮ್ ಹೇಳಿದರು.
ಪಟ್ಟಣದಲ್ಲಿ ಮಂಗಳವಾರ ಹೊಸ ಬಸ್ ನಿಲ್ದಾಣ ಕಾಮಗಾರಿ ಹಾಗೂ ಸಾರಿಗೆ ಘಟಕ ಪರಿಶೀಲಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸಂಸ್ಥೆಯ ವ್ಯಾಪ್ತಿಯಲ್ಲಿ ಎಲ್ಲ ಘಟಕಗಳಿಗೆ ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕ ಪ್ರಕ್ರಿಯೆ ಶೀಘ್ರವೇ ಕೈಗೆತ್ತಿಕೊಳ್ಳಲಾಗುವುದು. ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ನೀಡುವ ನಿಟ್ಟಿನಲ್ಲಿ ಬಸ್ಗಳ ಸಂಖ್ಯೆ ಹೆಚ್ಚಿಸಲು ತಿರ್ಮಾನಿಸಲಾಗಿದೆ. 150 ಹೊಸ ಬಸ್ಗಳನ್ನು ಖರೀದಿಸಲಾಗುವುದು. ಹಲವೆಡೆ ಹೊಸ ನಿಲ್ದಾಣ ನಿರ್ಮಾಣ ಕಾರ್ಯ ಪ್ರಗತಿಯಲ್ಲಿ ಸಾಗಿದೆ ಎಂದರು.
ಸ್ವಚ್ಛತೆ ಕಾಪಾಡಲು ಸೂಚನೆ: ಪಟ್ಟಣದ ಸಾರಿಗೆ ಘಟಕಕ್ಕೆ ಭೇಟಿ ನೀಡಿದ್ದ ಅವರು, ಘಟಕದಲ್ಲಿ ಸ್ವಚ್ಛತೆ ಕಾಪಾಡಬೇಕು. ಸಿಬ್ಬಂದಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಶುದ್ಧ ನೀರಿನಿಂದ ಬಸ್ ತೊಳೆಯಬೇಕು. ಸಿಬ್ಬಂದಿಗಳಿಗೆ ಗ್ಲೌಜ್, ಮಾಸ್ಕ್ ನೀಡಬೇಕು ಹಾಗೂ ಸ್ವಚ್ಛತೆಗಾಗಿ ಹೊರಗುತ್ತಿಗೆ ಆಧಾರದ ಮೇಲೆ ಸಿಬ್ಬಂದಿಗಳನ್ನು ನಿಯೋಜನೆ ಮಾಡಿಕೊಳ್ಳಿ ಎಂದು ಘಟಕದ ವ್ಯವಸ್ಥಾಪಕ ಪ್ರಕಾಶ ದೊಡ್ಡಮನಿಗೆ ಸೂಚಿಸಿದರು.
ಕಲಬುರಗಿ ವಿಭಾಗದ ಸಿಟಿಎಂ ಕೊಟ್ರೇಶ, ಡಿಟಿಒ ರಾಜೇಂದ್ರ ಜಾದವ, ರಾಯಚೂರು ಜಾಗೃತಿ ದಳ ಅಧಿಕಾರಿ ನಜೀರ್ ಅಹ್ಮದ, ಗುತ್ತಿಗೆದಾರ ಆದಪ್ಪ ಮನಗೂಳಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ