ಪೊಲೀಸ್ ವಸತಿಗೃಹಗಳು ಶಿಥಿಲ
ಮಳೆ ಬಂದರೆ ಸೋರುವ 30 ಮನೆಗಳು•ಸುಮಾರು 40 ವರ್ಷದ ಹಿಂದೆ ನಿರ್ಮಾಣ
Team Udayavani, Jun 27, 2019, 11:13 AM IST
ಲಿಂಗಸುಗೂರು: ಪೊಲೀಸ್ ಕ್ವಾಟರ್ಸ್ನಲ್ಲಿ ದುಸ್ಥಿತಿಯಲ್ಲಿರುವ ಮನೆಗಳು.
ಶಿವರಾಜ ಕೆಂಭಾವಿ
ಲಿಂಗಸುಗೂರು: ಪಟ್ಟಣದ ಪೊಲೀಸ್ ಠಾಣೆ ಆವರಣದಲ್ಲಿ ಸುಮಾರು 65 ವರ್ಷಗಳ ಹಿಂದೆ ನಿರ್ಮಿಸಿದ 30 ವಸತಿಗೃಹಗಳು ಸಂಪೂರ್ಣ ಶಿಥಿಲಗೊಂಡಿದ್ದು, ಜನರಿಗೆ ರಕ್ಷಣೆ ನೀಡುವ ಪೊಲೀಸರಿಗೆ ಮನೆಯಲ್ಲಿ ರಕ್ಷಣೆ ಇಲ್ಲದಂತಾಗಿದೆ.
ಪಟ್ಟಣದಲ್ಲಿ ಬ್ರಿಟೀಷರ ಆಡಳಿತ ಅವಧಿಯಲ್ಲಿ 1935ರಲ್ಲಿ ಪೊಲೀಸ್ ಠಾಣೆ ನಿರ್ಮಿಸಲಾಗಿದೆ. ಸ್ವಾತಂತ್ರ್ಯಾನಂತರ 1955ರ ಸುಮಾರಿಗೆ ಪೊಲೀಸ್ ಠಾಣೆ ಆವರಣದಲ್ಲಿ 30 ಮನೆಗಳನ್ನು ನಿರ್ಮಿಸಲಾಗಿದೆ. ಈ ಮನೆಗಳು ಈಗ ಶಿಥಿಲಗೊಂಡಿವೆ. ಮಳೆಯಾದರೆ ಸೋರುತ್ತವೆ. ಕೆಲವೊಮ್ಮೆ ಮೇಲ್ಛಾವಣಿ ಕಾಂಕ್ರೀಟ್ ಪದರು ಉದುರುತ್ತದೆ. ಹೀಗಾಗಿ ಪೊಲೀಸರು ಭಯದಲ್ಲೇ ಮನೆಯಲ್ಲಿ ಕಾಲ ಕಳೆಯುವಂತಾಗಿದೆ. ಇನ್ನು ಕೆಲ ಮನೆಗಳು ಸಂಪೂರ್ಣ ಬೀಳುವ ಸ್ಥಿತಿಯಲ್ಲಿರುವುದರಿಂದ ಕೆಲ ಪೊಲೀಸರು ಇದ್ದುದರಲ್ಲೇ ಸುಸ್ಥಿತಿಯಲ್ಲಿರುವ ಮನೆಯಲ್ಲಿ ವಾಸಿಸುತ್ತಿದ್ದಾರೆ. ಆದರೆ ಠಾಣೆ ವಸತಿಗೃಹಗಳ ಸುತ್ತಮುತ್ತ ಕೊಳಚೆ ಸಂಗ್ರಹವಾಗಿದೆ. ಜಾಲಿಮುಳ್ಳಿನ ಗಿಡಗಳು ಬೆಳೆದಿವೆ. ಸೊಳ್ಳೆ, ಕ್ರಿಮಿ ಕೀಟಗಳ ಕಾಟವೂ ಹೆಚ್ಚಾಗಿದೆ. ಮನೆಗಳ ಹಿಂಬದಿಯ ಚರಂಡಿಗಳ ಸ್ವಚ್ಛತೆ ಮಾಡದ್ದರಿಂದ ಹೂಳು ತುಂಬಿ ಕೊಳಚೆ ನೀರು ರಸ್ತೆಯಲ್ಲಿ ಹರಿಯುತ್ತಿದೆ. ಕೆಲ ವರ್ಷಗಳ ಹಿಂದೆ ಪೊಲೀಸ್ ಠಾಣೆ ಆವರಣದಲ್ಲಿ ಪಿಎಸ್ಐ ಸೇರಿ ಪೇದೆಗಳಿಗಾಗಿ 12 ಹೊಸ ಮನೆ ನಿರ್ಮಿಸಲಾಗಿದೆ. ಡಿವೈಎಸ್ಪಿ ಕಚೇರಿ ಬಳಿ 12 ವಸತಿ ಗೃಹ ನಿರ್ಮಿಸಲಾಗಿದೆ.
ದುಸ್ಥಿತಿ: ಪೊಲೀಸ್ ಕ್ವಾಟರ್ಸ್ನ ಮೈದಾನದಲ್ಲಿ ಪೊಲೀಸರು ಜಪ್ತಿ ಮಾಡಿದ ಮರಳು, ವಾಹನಗಳನ್ನು ಸಂಗ್ರಹಿಸಲಾಗಿದೆ. ಹೀಗಾಗಿ ಪೊಲೀಸ್ ಸಿಬ್ಬಂದಿ ಮತ್ತು ಅವರ ಮಕ್ಕಳಿಗೆ ಆಟವಾಡಲು ಮೈದಾನವೇ ಇಲ್ಲದಂತಾಗಿದೆ. ಒಳಾಂಗಣ ಕ್ರೀಡೆಗಾಗಿ ನಿರ್ಮಿಸಿದ ಕಟ್ಟಡ ನಿರ್ವಹಣೆ ಇಲ್ಲದೇ ಪಾಳು ಬಿದ್ದಿದೆ. ಪಿಎಸ್ಐ ಹಳೆ ಮನೆ ಕುಸಿದಿದೆ. ಕ್ವಾಟರ್ಸ್ನ ಸುತ್ತಲಿನ ಕಾಂಪೌಂಡ್ ಅಲ್ಲಲ್ಲಿ ಕುಸಿದಿದೆ. ಇಂತಹ ಸಂಕಷ್ಟದ ವಾತಾವರಣದಲ್ಲಿ ಪೊಲೀಸರು ಬದುಕು ಸಾಗಿಸುವಂತಾಗಿದೆ. ಕೆಲವು ಪಾಳು ಬಿದ್ದ ಕಟ್ಟಡಗಳು ಹಾಗೂ ಹಳೆ ಮನೆಗಳನ್ನು ನೆಲಸಮಗೊಳಿಸಿ ಹೊಸ ವಸತಿಗೃಹಗಳನ್ನು ನಿರ್ಮಿಸಿ ಪೊಲೀಸರಿಗೆ ಅನುಕೂಲ ಮಾಡಿಕೊಡಲು ಇಲಾಖೆ ಮೇಲಾಧಿಕಾರಿಗಳು ಕ್ರಮ ವಹಿಸಬೇಕಿದೆ.
ಪೊಲೀಸ್ ಕ್ವಾಟರ್ಸ್ ಕಾಂಪೌಂಡ್ ನಿರ್ಮಾಣಕ್ಕಾಗಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಲ್ಲಿ 5 ಲಕ್ಷ ರೂ. ಅನುದಾನ ನೀಡುವಂತೆ ಶಾಸಕರಿಗೆ ಮನವಿ ಮಾಡಿದ್ದೇವೆ.
•ದಾದಾವಲಿ,
ಪಿಎಸ್ಐ, ಲಿಂಗಸುಗೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು