ಬ್ಯಾಂಕ್‌ ಖಾತೆ ಸಂಖ್ಯೆ ಅದಲು-ಬದಲು

ಕಚೇರಿಯಿಂದ ಕಚೇರಿಗೆ ಅಲೆದಾಡುತ್ತಿರುವ ಕಿಸಾನ್‌ ಸಮಾನ್‌ ಯೋಜನೆ ಅರ್ಜಿದಾರರು

Team Udayavani, Jun 28, 2019, 3:28 PM IST

28-June-24

ಲಿಂಗಸುಗೂರು: ಸಹಾಯಕ ಆಯುಕ್ತರ ಕಚೇರಿಗೆ ಮನವಿ ಸಲ್ಲಿಸಲು ಆಗಮಿಸಿದ್ದ ಸಂತೆಕೆಲ್ಲೂರು ಗ್ರಾಮದ ರೈತರು.

ಲಿಂಗಸುಗೂರು: ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಗಾಗಿ ಅಗತ್ಯ ದಾಖಲೆಗಳನ್ನು ನೀಡಿದ್ದರೂ ತಮ್ಮ ಖಾತೆ ಸಂಖ್ಯೆ ಬದಲಿಗೆ ಬೇರೊಬ್ಬರ ಬ್ಯಾಂಕ್‌ ಖಾತೆ ಸಂಖ್ಯೆ ನಮೂದಿಸಿದ ಮಸ್ಕಿ ರೈತ ಸಂಪರ್ಕ ಕೇಂದ್ರದ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಂತೆಕೆಲ್ಲೂರು ರೈತರು ಸಹಾಯಕ ಆಯುಕ್ತರಿಗೆ ಆಗ್ರಹಿಸಿದ್ದಾರೆ.

ಆಗಿದ್ದೇನು?: ಸಂತೆಕೆಲ್ಲೂರು ಗ್ರಾಮದ ರೈತ ಆದಮ್ಮ ದ್ಯಾಮಣ್ಣ, ಅಕ್ಕಮಹಾದೇವಿ ಅಮರಯ್ಯ, ಸಂಗಮ್ಮ ಮಲ್ಲಯ್ಯ, ಮಲ್ಲಿಕಾರ್ಜುನ ಸೇರಿ ಇತರರು ಈ ತೊಂದರೆ ಎದುರಿಸುತ್ತಿದ್ದಾರೆ. ಈ ಎಲ್ಲ ರೈತರು ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಲು ಪಹಣಿ, ಆಧಾರ್‌ ಕಾರ್ಡ್‌, ಬ್ಯಾಂಕ್‌ ಪಾಸ್‌ಬುಕ್‌ ನಕಲು ಪ್ರತಿ ಸೇರಿ ಇನ್ನಿತರ ಅಗತ್ಯ ದಾಖಲೆಗಳೊಂದಿಗೆ ಮಸ್ಕಿ ರೈತ ಸಂಪರ್ಕ ಕೇಂದ್ರದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಅಲ್ಲಿನ ಕೃಷಿ ಅಧಿಕಾರಿಗಳು ಎಲ್ಲ ದಾಖಲೆಗಳನ್ನು ಪಡೆದುಕೊಂಡಿದ್ದರೂ ಬ್ಯಾಂಕ್‌ ಖಾತೆ ಕಾಲಂನಲ್ಲಿ ಬೇರೆಯವರ ಬ್ಯಾಂಕ್‌ ಖಾತೆ ಸಂಖ್ಯೆ ನಮೂದಿಸಿ ಸ್ವೀಕೃತಿ ಪ್ರತಿ ನೀಡಿದ್ದಾರೆ. ಇದನ್ನು ಕಂಡ ರೈತರು ಈ ಬಗ್ಗೆ ಕೃಷಿ ಅಧಿಕಾರಿಗಳನ್ನು ವಿಚಾರಿಸಿದರೆ ಇದು ನಾನು ಮಾಡಿಲ್ಲ, ತಾಂತ್ರಿಕ ದೋಷವಾಗಿರಬಹುದು ಎಂದು ಹೇಳಿದ್ದಾರೆ. ಇದನ್ನು ತೆಗೆದು ನಮ್ಮ ಬ್ಯಾಂಕ್‌ ಖಾತೆ ಸಂಖ್ಯೆ ಹಾಕಿ ಎಂದು ಕೇಳಿದರೆ ಇದು ಬರಲ್ಲ, ನೀವು ಬ್ಯಾಂಕ್‌ನವರಿಗೆ ಕೇಳ್ರಿ, ಇಲ್ಲಾ ಪಿಡಿಒ ಅವರನ್ನು ಕೇಳ್ರಿ ಎಂದು ತಮ್ಮ ತಪ್ಪಿನಿಂದ ನುಣುಚಿಕೊಳ್ಳುತ್ತಿದ್ದಾರೆ. ಇದರಿಂದ ಬೇಸತ್ತ ರೈತರು ಗುರುವಾರ ಪಟ್ಟಣದ ಸಹಾಯಕ ಆಯುಕ್ತರ ಕಚೇರಿಗೆ ಆಗಮಿಸಿ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಆಗ್ರಹ: ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಉದ್ದೇಶ ಪೂರ್ವಕವಾಗಿ ನಮ್ಮ ಅರ್ಜಿಗಳಲ್ಲಿ ಬೇರೊಬ್ಬರ ಬ್ಯಾಂಕ್‌ ಖಾತೆ ಸಂಖ್ಯೆ ನಮೂದಿಸಿದ್ದಾರೆ. ಇಲ್ಲಿ ಆಗಿರುವ ದೋಷ ಸರಿಪಡಿಸುವಂತೆ ಪಿಡಿಒ, ಕಂದಾಯ ನಿರೀಕ್ಷಕ, ಗ್ರಾಮ ಲೆಕ್ಕಾಧಿಕಾರಿ, ತಾಲೂಕು ಕೃಷಿ ಅಧಿಕಾರಿ ಹಾಗೂ ಬ್ಯಾಂಕ್‌ ಅಧಿಕಾರಿಗಳನ್ನು ಸಂಪರ್ಕಿಸಿದರೂ ಲೋಪ ಸರಿಪಡಿಸಿಲ್ಲ. ಹೀಗಾಗಿ ಕಚೇರಿಯಿಂದ ಕಚೇರಿಗೆ ಅಲೆದಾಡುವಂತಾಗಿದೆ. ಇಂತಹ ತಪ್ಪುಗಳು ಸಾಕಷ್ಟ ಅಗಿವೆ. ಕೂಡಲೇ ಕೃಷಿ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.