ಬಳಸದೇ ತುಕ್ಕು ಹಿಡಿದ ಸಕ್ಕಿಂಗ್‌ ಯಂತ್ರ

6 ವರ್ಷಗಳಿಂದ ನಿಂತಲ್ಲೇ  ಸವೆಯುತ್ತಿರುವ ಯಂತ್ರ ದುರಸ್ತಿ ಮಾಡಿಲ್ಲ „ ಗ್ರಾಪಂ ನಿರ್ಲಕ್ಷ್ಯಕ್ಕೆ ಜನಾಕ್ರೋಶ

Team Udayavani, Nov 27, 2019, 6:55 PM IST

27-November-20

●ಎಂ.ಮೂರ್ತಿ
ಮಾಸ್ತಿ:
ಶೌಚಾಲಯ ತ್ಯಾಜ್ಯ ವಿಲೇವಾರಿಗೆ ಲಕ್ಷಾಂತರ ರೂ. ನೀಡಿ ಜಿಪಂನಿಂದ ಖರೀದಿಸಿ ಇಲ್ಲಿನ ಗ್ರಾಪಂಗೆ ನೀಡಿದ್ದ ಸಕ್ಕಿಂಗ್‌ ಯಂತ್ರ ಕೆಟ್ಟು ನಿಂತು, ವರ್ಷಗಳೇ ಕಳೆದಿದ್ದು, ಪೊಲೀಸ್‌ ಠಾಣೆ ಆವರಣದಲ್ಲಿ ಮಳೆ, ಗಾಳಿಗೆ ತುಕ್ಕು ಹಿಡಿಯುತ್ತಿದೆ.

ಬಯಲು ಬಹಿರ್ದೆಸೆ ಮುಕ್ತ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಗ್ರಾಪಂಗೆ ಶೌಚಾಲಯ ತುಂಬಿದಾಗ ಅದರಲ್ಲಿ ತ್ಯಾಜ್ಯ ಖಾಲಿ ಮಾಡಲು ಸಕ್ಕಿಂಗ್‌ ಯಂತ್ರ ನೀಡಲಾಗಿತ್ತು. ಆದರೆ, ಅದು ಕೆಟ್ಟು ನಿಂತು, 6 ವರ್ಷಗಳೇ ಕಳೆದಿದ್ದು, ಶೌಚಾಲಯಗಳು ಗುಂಡಿಗಳು ತುಂಬಿ, ಜನ ಮತ್ತೆ ಬಯಲು ಆಶ್ರಯಿಸಲು ಮುಂದಾಗಿದ್ದಾರೆ. ಗ್ರಾಮದಲ್ಲಿ ಪ್ರತಿಯೊಬ್ಬರೂ ಶೌಚಾಲಯ ನಿರ್ಮಿಸಿಕೊಂಡಿದ್ದಾರೆ. ಸಕ್ಕಿಂಗ್‌ಯಂತ್ರ ಇಲ್ಲದ ಕಾರಣದಿಂದ ಖಾಸಗಿಯವರಿಗೆ ಸಾವಿರಾರು ರೂ. ಕೊಟ್ಟು ಶೌಚಾಲಯ ಸ್ವಚ್ಛ ಮಾಡಿಸುವಂತಹ ಪರಿಸ್ಥಿತಿ ಇದೆ. ಮನುಷ್ಯರು ಶೌಚಾಲಯದ ಗುಂಡಿಗೆ ಇಳಿಯುವುದು ಹಾಗೂ ವಿಲೇವಾರಿ ಮಾಡುವ ಪದ್ಧತಿಯನ್ನು ನಿಷೇಧಿಸಿದ ನಂತರ ಸಾರ್ವಜನಿಕ, ಸರ್ಕಾರಿ ಕಚೇರಿಗಳು, ಸಮುದಾಯ ಶೌಚಾಲಯಗಳಲ್ಲಿನ ತ್ಯಾಜ್ಯವನ್ನು ಯಂತ್ರಗಳ ಮೂಲಕ ವಿಲೇವಾರಿ ಮಾಡುವುದನ್ನು ರಾಜ್ಯ ಸರ್ಕಾರ ಕಡ್ಡಾಯ ಮಾಡಿದೆ. ಇದರಿಂದ ಸಕ್ಕಿಂಗ್‌ ಯಂತ್ರಕ್ಕೆ ಬೇಡಿಕೆ ಬಂದಿದೆ.

ವಿನಾಶದ ಅಂಚಿಕೆ ತಲುಪಿದೆ: ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಕಳೆದ 6 ವರ್ಷಗಳ ಹಿಂದೆ ಜಿಪಂನಿಂದ ಮಾಲೂರು ತಾಲೂಕಿಗೆ 2 ಸಕ್ಕಿಂಗ್‌ಯಂತ್ರಗಳನ್ನು ನೀಡಲಾಗಿತ್ತು. ಅದರಲ್ಲಿ ಒಂದು ಮಾಸ್ತಿ ಗ್ರಾ.ಪಂ. ವಶಕ್ಕೆ ನೀಡಲಾಗಿತ್ತು. ಆದರೆ, ಸಕ್ಕಿಂಗ್‌ ಯಂತ್ರವನ್ನು ಗ್ರಾಮ ಪಂಚಾಯ್ತಿಯು ಸಾರ್ವಜನಿಕರ ಅನುಕೂಲಕ್ಕೆ ಬಳಸದ ಕಾರಣ, ಮಾಸ್ತಿ ಪೊಲೀಸ್‌ ಠಾಣೆ ಆವರಣದಲ್ಲಿ 6 ವರ್ಷಗಳಿಂದ ಬಿಸಿಲು, ಮಳೆಗೆ ತುಕ್ಕು ಹಿಡಿದು ಕೆಟ್ಟು ವಿನಾಶದ ಅಂಚಿಗೆ ಸಿಲುಕಿದೆ.

ಸರ್ಕಾರ ಸಕ್ಕಿಂಗ್‌ ಯಂತ್ರವನ್ನು ಸಾರ್ವಜನಿಕ ಉಪಯೋಗಕ್ಕೆ ನೀಡಿದೆಯೋ ಅಥವಾ ಮಾಸ್ತಿ ಪೊಲೀಸ್‌ ಠಾಣೆ ಆವರಣದಲ್ಲಿ ಸಾರ್ವಜನಿಕರ ಪ್ರದರ್ಶನಕ್ಕೆ ಇಟ್ಟಿದೆಯೋ ಎಂಬ ಅನುಮಾನ ಮಾಸ್ತಿ ಗ್ರಾಮಸ್ಥರನ್ನು ಕಾಡುತ್ತಿದೆ. ಅಲ್ಲದೆ, ವಿವಿಧ ಪ್ರಕರಣಗಳಲ್ಲಿ ಮಾಸ್ತಿ ಪೊಲೀಸ್‌ ಠಾಣೆ ಆವರಣದಲ್ಲಿ ನಿಲ್ಲಿಸಲಾಗಿರುವ ವಾಹನಗಳ ನಡುವೆಯೇ ಈ ಸಕ್ಕಿಂಗ್‌ ಯಂತ್ರವನ್ನೂ ನಿಲ್ಲಿಸಲಾಗಿದೆ. ಹೀಗಾಗಿ ಯಾವುದೋ ಪ್ರಕರಣದಲ್ಲಿ ಪೊಲೀಸರು ಸಕ್ಕಿಂಗ್‌ ಯಂತ್ರ ವಶಕ್ಕೆ ಪಡೆದು ಠಾಣೆ ಆವರಣದಲ್ಲಿ ನಿಲ್ಲಿಸಿಕೊಂಡಿದ್ದಾರೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ.

ಸದ್ಯ ಟೈರ್‌ಗಳು, ಕಬ್ಬಿಣದ ಪೈಪ್‌ಗ್ಳು, ಯಂತ್ರದ ಬಣ್ಣ ಮಾಸುತ್ತಿದ್ದು, ಗುಜುರಿಗೆ ಸೇರುವ ಮುನ್ನವೇ ಗ್ರಾಪಂನವರು ದುರಸ್ತಿ ಮಾಡಿಸಬೇಕು. ಕೂಡಲೇ ಗ್ರಾಪಂ ಅಧಿಕಾರಿಗಳು ಇತ್ತ ಕಡೆ ಗಮನ ಹರಿಸಿ, ಸರ್ಕಾರದಿಂದ 5 ಲಕ್ಷ ರೂ.ಗೂ ಹೆಚ್ಚು ವೆಚ್ಚ ಮಾಡಿ ಖರೀದಿಸಿರುವ ಸಕ್ಕಿಂಗ್‌ ಯಂತ್ರವನ್ನು ಸರಿಪಡಿಸಿ ಶೌಚಾಲಯಗಳ ತ್ಯಾಜ್ಯ ಸ್ವತ್ಛ ಮಾಡಲು ಉಪಯೋಗಿಸಲಿ ಎಂದು ಗ್ರಾಮದ ಮುಖಂಡ ನರಸಿಂಹ ಮೂರ್ತಿ ಮನವಿ ಮಾಡಿದ್ದಾರೆ.

ಸಕ್ಕಿಂಗ್‌ ಯಂತ್ರ ಪೊಲೀಸ್‌ ಠಾಣೆ ಆವರಣದಲ್ಲಿ ನಿಲ್ಲಿಸಿರುವುದು ಗಮನ ಬಂದಿದೆ. ತುಕ್ಕು ಹಿಡಿಯುತ್ತಿರುವ ಯಂತ್ರವನ್ನು ದುರಸ್ತಿ ಪಡಿಸಲು ಮುಂದಿನ ಗ್ರಾಪಂ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು.
●ಸುಗುಣಮ್ಮ ಶ್ರೀನಿವಾಸ್‌,
ಅಧ್ಯಕ್ಷರು, ಮಾಸ್ತಿ ಗ್ರಾಪಂ.

ಸುರಕ್ಷತೆ ದೃಷ್ಟಿಯಿಂದ ಗ್ರಾಪಂ ಆವರಣದಲ್ಲಿ ಸಕ್ಕಿಂಗ್‌ಯಂತ್ರ ನಿಲ್ಲಿಸಿಲ್ಲ. ನಾನು ಅಧಿಕಾರಿವಹಿಸಿಕೊಳ್ಳುವುದಕ್ಕೂ ಮುನ್ನವೇ ಪೊಲೀಸ್‌ ಠಾಣೆ ಆವರಣದಲ್ಲಿ ಯಂತ್ರ ನಿಲ್ಲಿಸಲಾಗಿತ್ತು. ಅದು ಕೆಟ್ಟು ನಿಂತಿರುವುದು ನನ್ನ ಗಮನಕ್ಕೆ ಬಂದಿದೆ. ಸರಿಪಡಿಸಲು ಹೆಚ್ಚಿನ ಕಾಳಜಿ ವಹಿಸಲಾಗಿದೆ. ಸದ್ಯದಲ್ಲೇ ಸಾರ್ವಜನಿಕರಿಗೆ ಸೇವೆಗೆ ಒದಗಿಸಲಾಗುವುದು.
ಕಾಶೀನಾಥ್‌, ಪಿಡಿಒ, ಮಾಸ್ತಿ ಗ್ರಾಪಂ

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.