ಬೇಡಿಕೆಯೇ ದಲ್ಲಾಳಿಗಳಿಗೆ ವರದಾನ „ ಸಮೃದ್ಧಿ ಬೆಳೆ ಬಂದರೂ ರೈತರಿಗಿಲ್ಲ  ಲಾಭ

ಜೋರಾಗಿದೆ ಅವರೆಕಾಯಿ ಮಾರಾಟ

Team Udayavani, Dec 26, 2019, 6:05 PM IST

26-December-24

ತಿರುಮಲೆ ಶ್ರೀನಿವಾಸ್‌
ಮಾಗಡಿ: ಪಟ್ಟಣದ ಮಾರುಕಟ್ಟೆಯಲ್ಲಿ ಅವರೆ ಕಾಯಿ ಮಾರಾಟ ಭರದಿಂದ ನಡೆಯುತ್ತಿದ್ದು, ಇದರಿಂದಾಗಿ ಎಲ್ಲೆಡೆ ಅವರೆ ಕಾಯಿಯ ಸೊಗಡು ಗಮಗಮಿಸುತ್ತಿದೆ. ಮಾಗಡಿ ಕಲ್ಲುಬೆಟ್ಟಗುಡ್ಡಗಳಿಂದ ಕೂಡಿದ ಪ್ರದೇಶವಾಗಿದೆ. ಇಲ್ಲಿನ ಕೆಂಪು ಮರಳು ಮಿಶ್ರಿತ ಮಣ್ಣಿನಲ್ಲಿ ಬೆಳೆದ ಅವರೆಕಾಯಿ ಬಹಳ ಚೆನ್ನಾಗಿ ಬರುತ್ತದೆ. ಬಿಸಿಲಿನ ತಾಪಮಾನ ಹೆಚ್ಚಾದಂತೆಲ್ಲ ಅವರೆಕಾಯಿಯ ಸೊಗಡು ಹೆಚ್ಚಾಗಿಯೇ ಇರುತ್ತದೆ. ರುಚಿಯೂ ಅಧಿಕವಾಗಿರುತ್ತದೆ. ಇದರಿಂದ ಬೆಂಗಳೂರಿನಲ್ಲಿ ಮಾಗಡಿ ಅವರೆಕಾಯಿಗೆ ಭಾರಿ ಬೇಡಿಕೆ ಇದೆ.

ದಲ್ಲಾಳಿಗಳ ಲಾಭ: ತಾಲೂಕಿನಲ್ಲಿ ಸುಮಾರು 3 ಸಾವಿರ ಹೇಕ್ಟರ್‌ ಪ್ರದೇಶದಲ್ಲಿ ಅವರೆಕಾಯಿ ಬೆಳೆಯುತ್ತಾರೆ. ರೈತರು ತಮ್ಮ ಹೊಲದಲ್ಲಿ ಅವರೆಕಾಯಿ ಕಿತ್ತು ಮುಂಜಾನೆಯೇ ಮಾರುಕಟ್ಟೆಗೆ ತಂದು ಮಾರಾಟ ಮಾಡುತ್ತಾರೆ. ಇದಕ್ಕಾಗಿಯೇ ದಳ್ಳಾಳಿಗಳು ಬೆಂಗಳೂರಿನಿಂದ ಮಾಗಡಿಗೆ ಬಂದು ಕಡಿಮೆ ಬೆಲೆಗೆ ಖರೀದಿಸಿ, ಬೆಂಗಳೂ ರಿನಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಕೊಳ್ಳುತ್ತಾರೆ.

ಹುಣುಸೂರು ಅವರೆಕಾಯಿ ಮಾರಾಟ: ಮಾಗಡಿ ಅವರೆಕಾಯಿಗೆ ಬೇಡಿಕೆ ಹೆಚ್ಚಾದಂತೆಲ್ಲ. ಬೆಲೆಯಲ್ಲಿಯೂ ಹೆಚ್ಚಾಗಿದ್ದು, ಮಾಗಡಿಯಲ್ಲಿ ಕೆ.ಜಿ. ಅವರೆಕಾಯಿಗೆ 35 ರಿಂದ 50 ರೂ. ವರೆಗೂ ಮಾರಾಟವಾಗುತ್ತಿದೆ. ಇದನ್ನೇ ಕೆಲವರು ಬಂಡವಾಳ ಮಾಡಿಕೊಂಡು ಹುಣಸೂರಿನಿಂದ ಕಡಿಮೆ ಬೆಲೆಗೆ ಅವರೆಕಾಯಿ ಖರೀದಿಸಿ ತಂದು ಮಾಗಡಿ ಅವರೆಕಾಯಿ ಎಂದು ಸುಳ್ಳು ಹೇಳಿ ಕೊಂಡು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಮೂಲಕ ಜನರನ್ನು ಯಾಮಾರಿಸುವುದುಂಟು. ಮಾಗಡಿ ಪಟ್ಟಣದ ಕಲ್ಯಾಗೇಟ್‌ ವೃತ್ತ, ತಾಲೂಕಿನ ವೆಂಗಳಪ್ಪನಹಳ್ಳಿ, ಕುದೂರು, ಮರೂರು, ತಿಪ್ಪಸಂದ್ರ ರಸ್ತೆ ಬದಿಗಳಲ್ಲಿ ಅವರೆಕಾಯಿ ಮಾರಾಟದ ರಾಶಿ,ರಾಶಿ ಕಣ್ಣಿಗೆ ರಾಚುತ್ತದೆ. ಕಾರು,ಬೈಕ್‌ ನಲ್ಲಿ ರಸ್ತೆಯಲ್ಲಿ ಸಂಚರಿಸುವವರು ವಾಹನಗಳನ್ನು ನಿಲ್ಲಿಸಿ ಮಾಗಡಿ ಅವರೆಕಾಯಿ ಎಂದೇ ಖರೀದಿಸುತ್ತಾರೆ. ಕೆಲವೆಡೆ ಮಾಗಡಿ ಅವರೆಕಾಯಿ ಜತೆಗೆ ಹುಣುಸೂರಿನ ಅವರೆ ಕಾಯಿ ಮಿಶ್ರಣ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಜನರನ್ನು ಯಾಮಾರಿಸಿ ಹಣ ಗಳಿಸುವುದರಿಂದ ಗ್ರಾಹಕರ ಅಸಮಧಾನಕ್ಕೂ ಕಾರಣವಾಗಿದೆ.

ಅವರೆಕಾಯಿಯ ಮೇಳ: ಅದರಲ್ಲೂ ಚುಮ ಚುಮ ಚಳಿಗೆ ಅವರೆಕಾಯಿಯ ಖ್ಯಾದಗಳನ್ನು ತಯಾರಿಸಿಕೊಂಡು ಸವಿಯಲು
ಹೇಳಿ ಮಾಡಿಸಿದಂತ ಧನುರ್ಮಾಸ. ಈ ಮಾಸದಲ್ಲೇ ಅವರೆಕಾಯಿಯಿಂದ ತಯಾರಿಸಿದ ಆಹಾರ ಮೇಳ ಸಹ ಹಲವು ವರ್ಷಗಳಿಂದಲೂ ಬೆಂಗಳೂರಿನ ವಿಶ್ವೇಶ್ವರಪುರಂನ ವಾಸವಿ ರಸ್ತೆಯಲ್ಲಿ ಮತ್ತು ಮಲ್ಲೇಶ್ವರಂನಲ್ಲಿ ನಡೆದುಕೊಂಡು ಬರುತ್ತಿದೆ. ಅವರೆಕಾಯಿಯ ಖ್ಯಾದ ಆಹಾರ ಪ್ರಿಯರನ್ನು ಬಾಯಿ ಚಪ್ಪರಿಸುವಂತೆ ಮಾಡುತ್ತದೆ.

ಕೆಂಪು, ಮರಳು ಮಿಶ್ರಿತ ಭೂಮಿಯಾಗಿರುವುದರಿಂದ
ಉತ್ತಮ ಇಳುವರಿಬರುತ್ತದೆ. ಸೊಗಡಿನಿಂದ ಕೂಡಿದ ಮಾಗಡಿ
ಅವರೆಕಾಯಿ ಬಹಳ ರುಚಿಯಾಗಿರುತ್ತದೆ. ಆದ್ದರಿಂದ ಪಟ್ಟಣ ನಗರ ಪ್ರದೇಶದಲ್ಲಿ ಅತ್ಯಂತಬೇಡಿಕೆಯೂ ಇದೆ.
ಶಿವಶೆಂಕರ್‌,
ಸಹಾಯಕ ಕೃಷಿ ನಿರ್ದೇಶಕ

ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲದ ಕಾರಣ ದಳ್ಳಾಳಿಗಳ ಕಪಿ ಮುಷ್ಠಿಗೆ ರೈತರು ಸಲಕಿ ನಷ್ಟ ಹೊಂದಬೇಕಾದ ಪರಿಸ್ಥಿತಿ ಎದುರಾಗಿದೆ. ಸರ್ಕಾರ ರೈತರು ಬೆಳೆದ ಬೆಳೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಮಾಡಿದರೆ ತುಂಬ ಅನಕೂಲವಾಗುತ್ತದೆ.
ಸಿ. ರಾಜಣ್ಣ ,
ವಿಠಲಾಪುರ ರೈತ

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.