ಗ್ರಾಮೀಣರೇ ಶುದ್ಧ ನೀರು ಬಳಸಿ

ಸಿಡಿಗನಹಳ್ಳಿಯಲ್ಲಿ ಶಾಸಕ ಮಂಜುನಾಥ್‌ ಸಲಹೆ

Team Udayavani, Aug 29, 2019, 4:48 PM IST

29-Agust-42

ಸಿಡಿಗನಹಳ್ಳಿ ಗ್ರಾಮದಲ್ಲಿ ನಿರ್ಮಿಸಿರುವ ಶುದ್ಧ ನೀರಿನ ಘಟಕವನ್ನು ಶಾಸಕ ಎ.ಮಂಜುನಾಥ್‌ ಉದ್ಘಾಟಿಸಿದರು. ಬೆಳಗುಂಬ ಗ್ರಾಪಂ ಅಧ್ಯಕ್ಷೆ ಯಶೋಧಮ್ಮ, ಕಂಪನಿ ಉಪಾಧ್ಯಕ್ಷ ನವೀನ್‌ ಸೋನಿ ಇದ್ದರು.

ಮಾಗಡಿ: ಕೇವಲ ಶ್ರೀಮಂತರು, ಜನಪ್ರತಿನಿಧಿಗಳು, ಅಧಿಕಾರಿಗಳು ಮಾತ್ರ ಶುದ್ಧ ನೀರು ಕುಡಿದರೆ ಸಾಲದು. ಗ್ರಾಮೀಣ ಜನರು ಶುದ್ಧ ನೀರು ಕುಡಿದು ಎಲ್ಲರಂತೆ ಆರೋಗ್ಯವಂತರಾಗಿರಬೇಕು ಎಂದು ಶಾಸಕ ಎ.ಮಂಜುನಾಥ್‌ ತಿಳಿಸಿದರು.

ತಾಲೂಕಿನ ಸಿಡಿಗನಹಳ್ಳಿ ಗ್ರಾಮದಲ್ಲಿ ನೂತನ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಸಿಡಿಗನಹಳ್ಳಿ ಗ್ರಾಮದಲ್ಲಿ ಸಾರ್ವಜನಿಕ ಉಪಯೋಗಕ್ಕಾಗಿ ಶುದ್ಧ ಕುಡಿವ ನೀರಿನ ಘಟಕ ಸ್ಥಾಪಿಸಲಾಗಿದೆ. ಟೊಯೋಟಾ ಕಿರ್ಲೋಸ್ಕರ್‌ ಮೋಟರ್‌ ಕಂಪನಿ ಗ್ರಾಮೀಣ ಭಾಗದ ಜನರ ಮತ್ತು ಶಾಲಾ ಮಕ್ಕಳ ಉಪಯೋಗಕ್ಕಾಗಿ ಶಾಲೆಗಳಿಗೆ ಶೌಚಾಲಯ, ಬಡ ಮಕ್ಕಳಿಗೆ ಪುಸ್ತಕ, ಬ್ಯಾಗ್‌ ವಿತರಣೆ, ಶಿಥಿಲ ಶಾಲಾ ಕಟ್ಟಡಗಳ ಪುನರ್‌ ನಿರ್ಮಾಣ ಸೇರಿದಂತೆ ಹಲವು ಸಮಾಜಮುಖೀ ಸೇವೆ ಮಾಡಿಕೊಂಡು ಬರುತ್ತಿದೆ. ಈಗಾಗಲೇ 37 ಶುದ್ಧ ಕುಡಿವ ನೀರಿನ ಘಟಕ ಪ್ರಾರಂಭಿಸಿದ್ದಾರೆ ಎಂದು ತಿಳಿಸಿದರು.

ಕಲುಷಿತ ನೀರು ಸೇವನೆಯಿಂದ ರೋಗ: ಕಲುಷಿತ ನೀರು ಸೇವನೆಯಿಂದ ರೋಗಕ್ಕೆ ತುತ್ತಾಗುತ್ತಿದ್ದೇವೆ. ಸುಂದರ ಪರಿಸರ ಹಾಗೂ ಆರೋಗ್ಯಕ್ಕಾಗಿ ಗ್ರಾಮೀಣ ಜನತೆ ಶುಚಿತ್ವವನ್ನು ಕಾಪಾಡಬೇಕು. ಟೊಯೋಟಾ ಕಂಪನಿಯವರೇ 15 ವರ್ಷ ನಿರ್ವಹಣೆ ಮಾಡಲಿದ್ದಾರೆ. ಖಾಸಗಿ ಕಂಪನಿಯಡಿ ನಿರ್ಮಾಣಗೊಂಡ ಘಟಕಗಳು ಉತ್ತಮ ಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಆದರೆ, ಸರ್ಕಾರ, ಶಾಸಕರ ಅನುದಾನದಡಿ ನಿರ್ಮಾಣಗೊಂಡ ಶುದ್ಧ ನೀರಿನ ಘಟಕಗಳು ನಿರ್ವಹಣೆಯಲ್ಲಿ ವಿಫ‌ಲಗೊಂಡಿದ್ದೇವೆ. ಇದು ತಲೆತಗ್ಗಿಸುವ ಕೆಲಸ ಎಂದು ಬೇಸರ ವ್ಯಕ್ತಪಡಿಸಿದರು.

ನೀರು ಪೋಲಾಗದಂತೆ ತಂತ್ರಜ್ಞಾನ ಅಳವಡಿಕೆ: ಟೊಯೋಟಾ ಕಿರ್ಲೋಸ್ಕರ್‌ ಮೋಟರ್‌ ಪ್ರೈವೇಟ್ ಲಿಮಿಟೆಡ್‌ ಕಂಪನಿ ಪ್ರಧಾನ ವ್ಯವಸ್ಥಾಪಕ ರಾಜೇಂದ್ರ ಹೆಗ್ಡೆ ಮಾತನಾಡಿ, ಇದು 1200 ಲೀಟರ್‌ ಶುದ್ಧ ಕುಡಿಯುವ ನೀರಿನ ಘಟಕವಾಗಿದೆ. ಇದರ ನಿರ್ವಹಣೆಯೂ ತಾಂತ್ರಿಕವಾಗಿದೆ. ಮೊಬೈಲ್ನಲ್ಲಿಯೇ ಎಲ್ಲಾ ಲೋಪದೋಷಗಳನ್ನು ನೋಡಬಹುದು. ಈ ಘಟಕಕ್ಕೆ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಕ್ಯಾನ್‌ ಕ್ಲೀನಿಂಗ್‌ ಸಹ ಮಾಡಲಾಗುತ್ತದೆ. ಶುದ್ಧೀಕರಣದಿಂದ ಹೆಚ್ಚಿನ ನೀರು ಪೋಲಾಗದಂತೆ ವಿಶೇಷ ತಂತ್ರಜ್ಞಾನದಿಂದ ಘಟಕ ಕೂಡಿದೆ. ಗ್ರಾಮೀಣ ಜನತೆ ಶುದ್ಧ ನೀರು ಕುಡಿದು ಆರೋಗ್ಯವಂತರಾಗಿರಬೇಕು ಎಂದರು.

ಈ ವೇಳೆ ಬೆಳಗುಂಬ ಗ್ರಾಪಂ ಅಧ್ಯಕ್ಷೆ ಯಶೋಧಮ್ಮ, ಕಂಪನಿ ಉಪಾಧ್ಯಕ್ಷ ನವೀನ್‌ ಸೋನಿ, ರಾಜ್ಯ ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಕೆ.ಕೃಷ್ಣಮೂರ್ತಿ, ಎಚ್.ಜೆ.ಕಿರಣ್‌, ಗ್ರಾಪಂ ಮಾಜಿ ಅಧ್ಯಕ್ಷ ಹೊನ್ನಪ್ಪ, ಕೋಟಪ್ಪ, ಸಿಡಿಗನಹಳ್ಳಿ ವೆಂಕಟೇಶ್‌, ವನರಾಜು, ರಾಮಣ್ಣ, ಮಡಿವಾಳರ ಪಾಳ್ಯದ ನರಸಿಂಹಯ್ಯ, ಶಿವಲಿಂಗಯ್ಯ, ಹರ್ತಿ ಮಾರಣ್ಣ, ರಂಗೇನಹಳ್ಳಿ ಜಯಣ್ಣ, ಉಗ್ರಪ್ಪ, ಬಿ.ಆರ್‌.ಗುಡ್ಡೇಗೌಡ, ಪಿಡಿಒ ಪುರುಷೋತ್ತಮ, ಧನಂಜಯ ಕುಮಾರ್‌, ಶಿವರಾಜು, ವೆಂಕಟಾಚಲಯ್ಯ ಮತ್ತಿತರರಿದ್ದರು.

ಟಾಪ್ ನ್ಯೂಸ್

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.