ಕ್ಷಯ ಮುಕ್ತ ಸಮಾಜಕ್ಕಾಗಿ ಆಂದೋಲನ
56 ತಂಡಗಳಲ್ಲಿ 112 ಮಂದಿ ಕಾರ್ಯನಿರ್ವಹಣೆ • ಪ್ರತಿ ಮನೆಗೂ ವೈದ್ಯಕೀಯ ಸಿಬ್ಬಂದಿ ಭೇಟಿ
Team Udayavani, Jul 18, 2019, 3:40 PM IST
ಮಾಗಡಿ ಪಟ್ಟಣದ ಸರ್ಕಾರಿ ಆಸ್ಪತ್ರೆ ಮುಂಭಾಗ ಕ್ಷಯ ರೋಗ ಪತ್ತೆ ಆಂದೋಲನಕ್ಕೆ ಡಾ.ಚಂದ್ರಕಲಾ ಚಾಲನೆ ನೀಡಿದರು.
ಮಾಗಡಿ: ಕ್ಷಯ ರೋಗ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಕ್ಷಯ ರೋಗ ಪತ್ತೆ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ.ಚಂದ್ರಕಲಾ ತಿಳಿಸಿದರು.
ಪಟ್ಟಣದ ಸರ್ಕಾರಿ ಆಸ್ಪತ್ರೆ ಮುಂಭಾಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕ್ಷಯರೋಗ ವಿಭಾಗದಿಂದ ನಡೆದ ಕ್ಷಯ ರೋಗ ಪತ್ತೆ ಆಂದೊಲನಕ್ಕೆ ಚಾಲನೆ ನೀಡಿದ ಅವರು ಮಾತನಾಡಿ, ಜು.27ರ ವರೆಗೆ ಆಂದೋಲನ ನಡೆಯಲಿದೆ. ಒಟ್ಟು 56 ತಂಡಗಳಲ್ಲಿ 112 ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಪ್ರತಿ ಮನೆಗಳಿಗೆ ವೈದ್ಯಕೀಯ ಸಿಬ್ಬಂದಿ ಭೇಟಿ ನೀಡಿ, ರೋಗ ಪತ್ತೆಗೆ ಪರಿಶೀಲನೆ ಮಾಡಲಿದ್ದಾರೆ ಎಂದು ಹೇಳಿದರು.
ಮನೆ ಸದಸ್ಯರು ಸಹಕಾರ ನೀಡಿ: ಪ್ರತಿಯೊಂದು ವೈದ್ಯಕೀಯ ಸಿಬ್ಬಂದಿ ತಂಡವು ನಿತ್ಯ ಕನಿಷ್ಠ 30ರಿಂದ 50 ಮನೆಗಳಿಗೆ ಭೇಟಿ ನೀಡಲಿದ್ದಾರೆ. ಅವರಿಗೆ ಮನೆಯ ಸದಸ್ಯರು ಸಹಕಾರ ನೀಡಬೇಕು. ಯಾವುದೇ ಮುಜಗರವಿಲ್ಲದೆ ತಮ್ಮ ಮನೆಯಲ್ಲಿ ಯಾರಿಗಾದರೂ ಆರೋಗ್ಯವಿಲ್ಲದ್ದರೆ ತಿಳಿಸಿ, ಸಂಪೂರ್ಣ ಮಾಹಿತಿ ನೀಡಬೇಕು. ಈ ಮೂಲಕ ತಮ್ಮ ಮನೆಯಲ್ಲಿ ಇರುವ ವ್ಯಕ್ತಿಯ ರೋಗವನ್ನು ಪತ್ತೆ ಹಚ್ಚಿ, ತಮಗೆ ಬೇಕಾದ ಅಗತ್ಯ ಸಲಹೆ, ಔಷಧವನ್ನು ಉಚಿತವಾಗಿ ನೀಡಲಿದ್ದೇವೆ ಎಂದು ತಿಳಿಸಿದರು.
ಕ್ಷಯ ರೋಗ ತಡೆ ಕ್ರಮ: ಎರಡು ವಾರಕ್ಕಿಂತ ಮೇಲ್ಪಟ್ಟು ಕೆಮ್ಮು, ಸಂಜೆಯ ವೇಳೆ ಜ್ವರ ಕಾಣಿಸಿಕೊಳ್ಳುವುದು, ಎದೆ ನೋವು, ತೂಕ ಕಡಿಮೆಯಾಗುವುದು, ಕಫದ ಜೊತೆ ರಕ್ತ ಬೀಳುವುದು, ವಾಸಿಯಾಗದ ಕೆಮ್ಮು ಇವುಗಳು ಕ್ಷಯ ರೋಗದ ಪ್ರಮುಖ ಲಕ್ಷಣವಾಗಿದೆ. ರೋಗಿ ಕೆಮ್ಮಿದಾಗ ಹೊರ ಬರುವ ತುಂತರುಗಳಿಂದ ರೋಗಾಣುಗಳು ಆರೋಗ್ಯವಂತರ ಮೇಲೂ ಸೋಂಕು ಉಂಟಾಗಲಿದೆ. ಕ್ಷಯ ರೋಗ ತಡೆಗೆ ಅನುಸರಿಸಬೇಕಾದ ಎಲ್ಲಾ ಕ್ರಮಗಳನ್ನು ವೈದ್ಯಕೀಯ ಸಿಬ್ಬಂದಿ ತಿಳಿಸಿಕೊಡಲಿದ್ದಾರೆ. ಇದಕ್ಕೆ ಎಲ್ಲರ ಸಹಕಾರ ಅವಶ್ಯವಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಡಾ.ರಾಕೇಶ್, ಡಾ.ಅನಿಲ್ ಕುಮಾರ್, ಆರೋಗ್ಯ ಇಲಾಖೆಯ ಅಧಿಕಾರಿ ರಂಗನಾಥ್, ರಾಜು, ತುಕಾರಾಂ, ರಾಜಣ್ಣ, ಶಿವಣ್ಣ, ಬಾಲರಾಜು, ಕುಮಾರ್, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ