ಬಿಡಾಡಿ ದನಗಳ ಹಾವಳಿಗೆ ಬ್ರೇಕ್‌ ಹಾಕಿ

ಕಂಡು ಕಾಣದಂತೆ ಜಾಣಕುರುಡು ಪ್ರದರ್ಶಿಸುತ್ತಿರುವ ಪುರಸಭೆ: ಆಕ್ರೋಶ

Team Udayavani, Oct 17, 2019, 6:00 PM IST

17-October-24

ತಿರುಮಲೆ ಶ್ರೀನಿವಾಸ್‌
ಮಾಗಡಿ:
ಪಟ್ಟಣದಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಿದ್ದು, ಇದರಿಂದ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ಸಂಚರಿಸಲು ತೀವ್ರ ತೊಂದರೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಪಟ್ಟಣದ ಮುಖ್ಯರಸ್ತೆ ಹಾಗೂ ಅಲ್ಲಲ್ಲಿ ವೃತ್ತಗಳ ಬಳಿ ರಾಶಿ ರಾಶಿ ಕಸಗಳ ಮಧ್ಯೆ ಆಹಾರ ಹರಸಿ ಬರುವ ಬಿಡಾಡಿ ದನಗಳು ರಸ್ತೆ ಮಧ್ಯೆಯೇ ಅಡ್ಡಾದಿಡ್ಡಿಯಾಗಿ ಓಡಾಡುತ್ತಿರುತ್ತವೆ. ಇದರಿಂದ ವಾಹನ ಸವಾರರಿಗೆ ಅಡೆತಡೆಯಾಗುತ್ತಿದೆ. ವಾಹನ ಸವಾರರು ದನಗಳ ಮಧ್ಯೆ ಸಂಚರಿಸಲು ಹೋಗಿ ದನಗಳಿಗೆ ತಾಕಿ ಪಘಾತ ಸಂಭವಿಸಿರುವ ಅನೇಕ ಘಟನೆಗಳು ನಡೆದಿವೆ.

ಅನೇಕ ಅಪಘಾತ ಸಂಭವಿಸಿವೆ: ಅದರಲ್ಲೂ ವಯೋ ವೃದ್ಧರು, ಯವತಿಯರು, ಮಕ್ಕಳನ್ನು ಕಂಡೊಡನೆ ಬಿಡಾಡಿ ದನಗಳು ಮೇಲೆ ಎರಗಲು ಯತ್ನಿಸುತ್ತವೆ.

ದನಗಳಿಂದ ತಪ್ಪಿಸಿಕೊಳ್ಳಲು ಭಯದಿಂದಲೇ ಕಾಲಿಗೆ ಬುದ್ಧಿ ಹೇಳುತ್ತಾರೆ. ಕೆಲವರು ವಾಹನಗಳಿಗೆ ಅಡ್ಡ ಬರುವ ದನಗಳನ್ನು ರಕ್ಷಿಸಲು ಹೋಗಿ ಎದುರಿಗೆ ಬರುವ ವಾಹನಕ್ಕೆ ಡಿಕ್ಕಿ ಹೊಡೆದು ಆಸ್ಪತ್ರೆ ಸೇರಿದ್ದಾರೆ.

ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯ: ದೊಡ್ಡ ವಾಹನಗಳು ಬಿಡಾಡಿ ದನಗಳಿಗೆ ತಾಕಿದ್ದರಿಂದ ದನಗಳು ಸಹ ಗಾಯಗೊಳ್ಳುತ್ತಿವೆ. ಎಷ್ಟೋ ದನಗಳು ಮೃತಪಟ್ಟಿರುವ ಉದಾಹರಣೆಗಳಿವೆ. ಹೀಗಿರುವಾಗ ಪುರಸಭೆ ಅಧಿಕಾರಿಗಳಾಗಲಿ ಅಥವಾ ಗೋ ಸಂರಕ್ಷಣೆ ಪದಾಧಿಕಾರಿಗಳಾಗಲಿ ಗೋವುಗಳನ್ನು ಬೇರೆಡೆ ಬಿಡದೆ ಕಂಡು ಕಾಣದಂತೆ ಜಾಣ ಕುರುಡು ಪ್ರದರ್ಶಿಸುತ್ತಿರುವುದು ಸಾರ್ವಜನಿಕರಲ್ಲಿ ಬೇಸರ ತಂದಿದೆ.

ಅಳಲು ತೋಡಿಕೊಂಡ ನಾಗರಿಕರು: ಈ ಬಗ್ಗೆ ಉದಯವಾಣಿಯೊಂದಿಗೆ ಸ್ಥಳೀಯರಾದ ನರಸಿಂಹಯ್ಯ ಮಾತನಾಡಿ, ಪಟ್ಟಣದ ಹೃದಯ ಭಾಗವೇ ಆಗಿರುವ ಕೆಂಪೇಗೌಡ ವೃತ್ತದ ಬಳಿಯೇ ಕಸದ ರಾಶಿ ಬಿದ್ದಿರುತ್ತದೆ. ಅದೇ ರೀತಿ ಬಿಕೆ ರಸ್ತೆ, ಕಲ್ಯಾಗೇಟ್‌, ತಿರುಮಲೆ ಮುಖ್ಯರಸ್ತೆ ಹೀಗೆ ಕಸದ ರಾಶಿ ಮುಂದೆ ಬಿಡಾಡಿ ದನಗಳ ಹಿಂಡು ಹಿಂಡಾಗಿ ನಿಂತು ಕಸದ ರಾಶಿಯಲ್ಲಿ ಆಹಾರ ಹುಡುಕಿ ತಿಂದು ರಸ್ತೆ ಮಧ್ಯೆಯೇ ಮಲಗಿರುತ್ತವೆ. ಕೆಲವು ಅಡ್ಡಾಡುತ್ತಿರುತ್ತವೆ.

ಪುರಸಭೆ ಅಧಿಕಾರಿಗಳು ಬಿಡಾಡಿ ದನಗಳ ವಾರಸುದಾರರನ್ನು ಪತ್ತೆ ಮಾಡಿ ಅವರಿಗೆ ರಸ್ತೆ ಬಿಡದಂತೆ ತಿಳಿವಳಿಕೆ ನೀಡಬೇಕು. ಇಲ್ಲದಿದ್ದರೆ ಕನಿಷ್ಠ ಪಕ್ಷ ಗೋಶಾಲೆಗೆ ಬಿಡುವ ಪ್ರಾಮಾಣಿಕ ಪ್ರಯತ್ನ ವಾದರೂ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.