ಶೌಚಾಲಯಕ್ಕಾಗಿ ಸಾರ್ವಜನಿಕರು ಪರದಾಟ

ಮೂತ್ರ ವಿಸರ್ಜನೆ ಮಾಡಬಾರದು ಎಂದು ನಾಮಫ‌ಲಕ ಅಳವಡಿಕೆ • ಹದಗೆಟ್ಟಿದೆ ತಾಲೂಕು ಆಡಳಿತ: ದೂರು

Team Udayavani, Aug 8, 2019, 3:22 PM IST

8–Agust-39

ಮಾಗಡಿ ತಾಲೂಕು ಕಚೇರಿ ಬಳಿ ಶೌಚಾಲಯದಲ್ಲಿ ಅಳವಡಿಸಿರುವ ನಾಮಫ‌ಲಕ.

ಮಾಗಡಿ: ತಾಲೂಕು ಕಚೇರಿ ಬಳಿ ಶೌಚಾಲಯವಿದೆ. ಆದರೆ, ಇಲ್ಲಿ ಮೂತ್ರ ವಿಸರ್ಜನೆ ಮಾಡಬಾರದು ಎಂದು ನಾಮಫ‌ಲಕ ಅಳವಡಿಸಲಾಗಿದೆ. ಇದರಿಂದಾಗಿ ಸಾರ್ವಜನಿಕರು ಮೂತ್ರ ವಿಸರ್ಜನೆ ಮಾಡಲು ಶೌಚಾಲಯಕ್ಕಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಜಾಗೃತಿ ಮೂಡಿದರು ಪ್ರಯೋಜನವಿಲ್ಲ: ಸರ್ಕಾರ ಬಯಲು ಮುಕ್ತ ಶೌಚಾಲಯಕ್ಕಾಗಿ ಪ್ರತಿದಿನವೂ ವಿವಿಧ ಇಲಾಖೆ ಅಧಿಕಾರಿಗಳು ಜನಜಾಗೃತಿ ಮೂಡಿಸುತ್ತಿದ್ದಾರೆ. ಆದರೆ, ಪ್ರಯೋಜನವಿಲ್ಲದಂತಾಗಿದೆ. ಮಾಗಡಿ ತಾಲೂಕು ಕಚೇರಿ ಆವರಣದಲ್ಲಿರುವ ಶೌಚಾಲಯದ ಗೋಡೆ ಮೇಲೆ ಆಳವಡಿಸಿರುವ ಮೂತ್ರ ವಿಸರ್ಜನೆ ಮಾಡಬಾರದು ಎಂಬ ನಾಮಫ‌ಲಕ ಏಕೆ ಎಂಬ ಪ್ರಶ್ನೆ ಸಾರ್ವಜನಿಕರನ್ನು ಕಾಡುತ್ತಿದೆ. ಸರ್ಕಾರಿ ಕಚೇರಿಯ ಬಳಿ ಅಧಿಕಾರಿಗಳು ನಾಮಫ‌ಲಕ ಹಾಕಿರುವುದು ಗಮನಿಸಿದ ಸಾರ್ವಜನಿಕರು, ಅಧಿಕಾರಿಗಳ ಬೇಜವಾಬ್ದಾರಿಗೆ ಕನ್ನಡಿ ಬೇಕಿಲ್ಲ. ಈ ಫ‌ಲಕವೇ ಸಾಕು. ಇದರಿಂದಾಗಿ ಅಧಿಕಾರಿಗಳೀಗ ಸಾರ್ವಜನಿಕರ ನಗೆಪಾಟಲ್ಗೆ ಗುರಿಯಾಗಿರುವುದಂತೂ ಸತ್ಯ.

ನಾಮ ಫ‌ಲಕ ನೋಡಿ ವಾಪಸ್‌: ಇಲ್ಲಿನ ಪ್ರಮುಖ ಸ್ಥಳವಾಗಿರುವ ತಾಲೂಕು ಕಚೇರಿಗೆ ನಿತ್ಯ ಸಾವಿರಾರು ಮಂದಿ ಸಾರ್ವಜನಿಕರು ತಮ್ಮ ಕೆಲಸಗಳಿಗೆ ಬರುತ್ತಾರೆ. ಕಚೇರಿಗೆ ಬರುವವರಿಗಾಗಿಯೇ ಮೂತ್ರ ವಿಸರ್ಜನೆಗೆ ಶೌಚಾಲಯವನ್ನು ಸರ್ಕಾರ ನಿರ್ಮಿಸಲಾಗಿದೆ. ಬಹುತೇಕ ಮಂದಿ ಇದೇ ಶೌಚಾಲಯವನ್ನು ಬಳಸುತ್ತಿದ್ದಾರೆ. ಕೆಲವರು ಮೂತ್ರ ವಿಸರ್ಜನೆ ಮಾಡಬಾರದು ಎಂಬ ನಾಮಫ‌ಲಕ ಓದಿ ವಾಪಸ್ಸಾಗುವವರೂ ಇದ್ದಾರೆ.

ವರ್ಷ ಕಳೆದರೂ ನಾಮಫ‌ಲಕ ಬದಲಿಸಿಲ್ಲ: ನಾಮಫ‌ಲಕ ಅಳವಡಿಸಲು ಕಾರಣವಿದೆ. ಇಲ್ಲಿ ಶೌಚಾಲಯ ನಿರ್ಮಿಸುವ ಮುನ್ನ ಬಹುತೇಕ ಮಂದಿ ತಾಲೂಕು ಕಚೇರಿಯ ಗೋಡೆ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿದ್ದರು. ಕಚೇರಿಯ ಅಧಿಕಾರಿಗಳು ಇದೇ ಗೋಡೆಯನ್ನು ತೆರವುಗೊಳಿಸಿ ಮೂತ್ರ ವಿಸರ್ಜನೆಗಾಗಿ ಶೌಚಾಲಯವನ್ನು ನಿರ್ಮಾಣ ಮಾಡಿದ್ದಾರೆ. ಕಟ್ಟಡ ನಿರ್ಮಿಸಿ ವರ್ಷವೇ ಕಳೆದಿದೆ. ವರ್ಷ ಕಳೆದರೂ ಇನ್ನೂ ಸಹ ನಾಮಫ‌ಲಕವನ್ನು ಬದಲಾಯಿಸಿಲ್ಲ. ಈ ನಾಮಫ‌ಲಕ ಬದಲಾಯಿಸಲು ಇನ್ನೂ ಎಷ್ಟು ವರ್ಷಬೇಕು ಎಂಬ ಪ್ರಶ್ನೆ ಸಹಜವಾಗಿ ಸಾರ್ವಜನಿಕರಲ್ಲಿ ಮೂಡಿದೆ. ತಾಲೂಕು ಕಚೇರಿಯ ಲ್ಲಿಯೂ ಸಹ ಸಾರ್ವಜನಿಕರ ಕೆಲಸ ಕಾರ್ಯಗಳು ಇದೇ ಸ್ಥಿತಿಯಲ್ಲಿ ನಡೆಯುತ್ತಿರುವುದು ಎಂಬುದಕ್ಕೆ ಇದೇ ಉದಾಹರಣೆ ಸಾಕಲ್ಲವೆ? ನಿಜಕ್ಕೂ ತಾಲೂಕು ಆಡಳಿತ ತೀರ ಹದಗೆಟ್ಟಿದೆ ಎಂದು ರೈತರು ದೂರಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.