ಬಸ್‌ ನಿಲುಗಡೆ ಸಮಸ್ಯೆ-ಪರದಾಟ

ಅಂಗಡಿ-ಮುಂಗ್ಗಟ್ಟುಗಳಿಂದ ರಸ್ತೆ ಅತಿಕ್ರಮಣಸಂಚಾರ ದಟ್ಟಣೆಯಿಂದ ಪ್ರಯಾಣಿಕರಿಗೆ ಕಿರಿಕಿರಿ

Team Udayavani, Dec 8, 2019, 3:47 PM IST

8-December-16

ಮಹಾಲಿಂಗಪುರ: ಪಟ್ಟಣದಲ್ಲಿ ನಿರ್ಮಿಸುತ್ತಿರುವ ನೂತನ ಬಸ್‌ ನಿಲ್ದಾಣದ ಕಾಮಗಾರಿ ಭರದಿಂದ ಸಾಗಿದೆ. ಆದರೆ, ಬಸ್‌ ನಿಲುಗಡೆಗೆ ಜಾಗ ಸಮಸ್ಯೆಯಾಗಿದೆ.

ನಿಲ್ದಾಣದ ಜಾಗ ಕಡಿಮೆ: ಮೂಲತ: ನಿಲ್ದಾಣದ ಜಾಗ ಕಡಿಮೆಯಿದೆ. ಅದರಲ್ಲಿಯೇ ನೂತನ ಕಟ್ಟಡ ನಿರ್ಮಾಣ, ಕಟ್ಟಡ ಸಾಮಗ್ರಿಗಳ ದಾಸ್ತಾನು, ಶೌಚಾಲಯ, ತಾತ್ಕಾಲಿಕ ನಿಯಂತ್ರಕರ ಕೊಠಡಿ, ಹಣ್ಣಿನ ಅಂಗಡಿಗಳು ಇರುವುದರಿಂದಾಗಿ ಬಸ್‌ಗಳು ಒಳಗೆ ಬಂದು, ಮರಳಿಸಿಕೊಳ್ಳಲು ತೊಂದರೆಯಾಗುತ್ತಿದೆ. ಹೆದ್ದಾರಿ ಮೇಲೆ ಬಸ್‌ ನಿಲುಗಡೆ: ನೂತನ ನಿಲ್ದಾಣ ಕಾಮಗಾರಿಯಿಂದಾಗಿ ನಿಲ್ದಾಣದೊಳಗೆ ಬಸ್‌ಗಳು ಹೋಗದೇ ನಿಲ್ದಾಣ ಪಕ್ಕದ ರಬಕವಿ-ಜಾಂಬೋಟಿ ರಾಜ್ಯ ಹೆದ್ದಾರಿ ಮೇಲೆ ಬಸ್‌ ನಿಲುಗಡೆ ಮಾಡುತ್ತಿದ್ದಾರೆ.

ಇದರಿಂದ ಬಸ್‌ಗಳನ್ನು ಮರಳಿಸಿ ತಮ್ಮ ದಾರಿಯತ್ತ ನಿಲ್ಲಿಸಲು ಚಾಲಕರು, ಯಾವ ಬಸ್‌ಗಳು ಎಲ್ಲಿಗೆ ಹೋಗುತ್ತವೆ, ಎಲ್ಲಿ ನಿಲ್ಲುತ್ತವೆ ಎಂಬ ಮಾಹಿತಿಗಾಗಿ ಪ್ರಯಾಣಿಕರು ಪರದಾಡುತ್ತಿದ್ದಾರೆ.

ಟ್ರಾಫಿಕ್‌ ಸಮಸ್ಯೆ: ಹೆದ್ದಾರಿ ಮೇಲೆ ಬಸ್‌ ನಿಲುಗಡೆ ಮಾಡುತ್ತಿರುವುದು, ಕಾರ್ಖಾನೆಗಳು ಆರಂಭಗೊಂಡ ಹಿನ್ನೆಲೆ ಕಬ್ಬು ತುಂಬಿದ ಟ್ರಾಕ್ಟ್ರ್‌ಗಳ ಓಡಾಟ ಹೆಚ್ಚಳವಾಗಿದೆ. ಜತೆಗೆ ರಸ್ತೆಯ ಪೂರ್ವದಲ್ಲಿನ ರಿಕ್ಷಾ  ನಿಲ್ದಾಣ, ಪಶ್ಚಿಮ ಭಾಗದಲ್ಲಿನ ಅನಧಿಕೃತ ಚಹಾ ಹೊಟೇಲ್‌, ಪಾನಶಾಪ್‌ ಸೇರಿದಂತೆ ಅಂಗಡಿ ಮುಂಗ್ಗಟ್ಟುಗಳು ಅರ್ಧ ರಸ್ತೆಯನ್ನೇ ಅತಿಕ್ರಮಣ ಮಾಡಿವೆ.

ಇದರಿಂದಾಗಿ ಗೋಕುಲ್‌ ಹೋಟೆಲ್‌ ದಿಂದ ಚನ್ನಮ್ಮ ವೃತ್ತದವರೆಗೆ ಸಂಚಾರ ದಟ್ಟಣೆ ಸಮಸ್ಯೆ ಹೆಚ್ಚಾಗಿ ವಾಹನ ಸವಾರರು, ಪಾದಚಾರಿಗಳಿಗೆ ಕಿರಿಕಿರಿಯಾಗಿದೆ.

ತೆರವು ಮತ್ತು ಸ್ಥಳಾಂತರ ಸೂಕ್ತ!: ಕಾಮಗಾರಿ ಮುಗಿಯಲು ಕನಿಷ್ಠ ಒಂದು ವರ್ಷ ಬೇಕಾಗುತ್ತದೆ. ಅಲ್ಲಿಯವರೆಗೆ ಈ ಸಮಸ್ಯೆ ತಪ್ಪಿದ್ದಲ್ಲ. ಕಾರಣ ಕಾಮಗಾರಿ ಮುಗಿಯುವರೆಗೆ ನಿಲ್ದಾಣದ ಎದುರಿನ ಎಲ್ಲ ಅಂಗಡಿ ಮುಂಗ್ಗಟ್ಟು ತೆರವುಗೊಳಿಸುವುದು ಮತ್ತು ರಿಕ್ಷಾ ನಿಲ್ದಾಣ ಸ್ಥಳಾಂತರಿಸಿ, ಬಸ್‌ ನಿಲುಗಡೆಗೆ ಅವಕಾಶ ನೀಡಿ, ಟ್ರಾಫಿಕ್‌ ಸಮಸ್ಯೆ ಕಡಿಮೆಗೊಳಿಸಿ ಎಂದು ಸಾರ್ವಜನಿಕರು-ಪ್ರಯಾಣಿಕರು ಪುರಸಭೆ, ಪೊಲೀಸ್‌ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಪುರಸಭೆ ಖಾಲಿ ಜಾಗ ಬಳಸಲು ಒತ್ತಾಯ: ಬಸ್‌ ನಿಲ್ದಾಣ ಕಾಮಗಾರಿ ಆರಂಭವಾಗಿ ಬಸ್‌ ನಿಲುಗಡೆ ಮತ್ತು ಸಂಚಾರ ದಟ್ಟಣೆ ಹೆಚ್ಚಳವಾಗಿದೆ. ಬಸ್‌ ನಿಲ್ದಾಣದ ಪಕ್ಕದಲ್ಲಿನ ಪುರಸಭೆಯ ನಾಲ್ಕು ಎಕರೆ ಖಾಲಿ ಜಾಗ ತ್ಯಾಜ್ಯ ಘಟಕ, ಬಯಲು ಶೌಚಾಲಯ, ಖಾಸಗಿ ವಾಹನಗಳ ನಿಲುಗಡೆಯಾಗಿ ಗಬ್ಬೆದ್ದು ನಾರುತ್ತಿದೆ.

ಶಾಸಕ ಸಿದ್ದು ಸವದಿ, ಕೆಎಸ್‌ಆರ್‌ಟಿಸಿ ಅಧಿಕಾರಿಗಳು, ಗುತ್ತಿಗೆದಾರರು, ಪುರಸಭೆ ಮತ್ತು ಪೊಲೀಸ್‌ ಇಲಾಖೆಯ ಅಧಿಕಾರಿಗಳು ಚರ್ಚೆ ನಡೆಸಿ, ನಿಲ್ದಾಣದ ಕಾಮಗಾರಿ ಮುಗಿಯುವರೆಗೂ ಖಾಲಿ ಇರುವ ಪುರಸಭೆ ಜಾಗದಲ್ಲಿ ತಾತ್ಕಾಲಿಕ ಬಸ್‌ ನಿಲ್ದಾಣವನ್ನಾಗಿ ಬಳಸಬೇಕು. ಇದರಿಂದ ಸಂಚಾರ ದಟ್ಟಣೆ ನಿಯಂತ್ರಣಗೊಳ್ಳಬಹುದು.

ಖಾಲಿ ಇರುವ ಪುರಸಭೆ ಜಾಗ ಬಳಸಿದರೆ ಜಾಗ ಸ್ವತ್ಛವಾಗುತ್ತದೆ. ಪ್ರಯಾಣಿಕರಿಗೆ ಅನುಕೂಲ ಮಾಡಬೇಕೆಂದು ತೇರದಾಳ ಜೆಡಿಎಸ್‌ ಅಧ್ಯಕ್ಷ ನಿಂಗಪ್ಪ ಬಾಳಿಕಾಯಿ, ಪುರಸಭೆ ಮಾಜಿ ಅಧ್ಯಕ್ಷ ಬಸವರಾಜ ರಾಯರ, ಕನ್ನಡಪರ ಸಂಘಟನೆಗಳ ಅಧ್ಯಕ್ಷ ಮೋಹಸಿನ ಅತ್ತಾರ, ಅಸ್ಲಂ ಕೌಜಲಗಿ, ಲಯನ್ಸ್‌ ಕ್ಲಬ್‌ ಅಧ್ಯಕ್ಷ ಸೋಮಶೇಖರ ಸಂಶಿ, ಹೋರಾಟಗಾರರಾದ ಸುರೇಶ ಮಡಿವಾಳರ, ವಿನೋದ ಸಿಂಪಿ, ವೀರೇಶ ನ್ಯಾಮಗೌಡ, ಮಂಜು ಬಕರೆ ಒತ್ತಾಯಿಸಿದ್ದಾರೆ.

ಬಸ್‌ ನಿಲ್ದಾಣದಲ್ಲಿ ಕಾಮಗಾರಿ ಮುಗಿಯುವರೆಗೂ ತಾತ್ಕಾಲಿಕ ಬಸ್‌ ನಿಲುಗಡೆಗಾಗಿ ಪುರಸಭೆಯ ಖಾಲಿ ಜಾಗ ಬಳಸಿಕೊಳ್ಳಲು ಏನು ತೊಂದರೆಯಿಲ್ಲ. ಆದರೆ ಅಲ್ಲಿನ ಗಿಡಗಂಟಿ ತೆರವು ಮತ್ತು ತಾಜ್ಯ ನೀರು ನಿಂತ ಕಾರಣ ಮರಳು ಹಾಕಬೇಕು. ಈ ಕುರಿತು ಪುರಸಭೆ ಆಡಳಿತಾ ಧಿಕಾರಿಗಳು ಮತ್ತು ಶಾಸಕರು, ಕೆಎಸ್‌ಆರ್‌ಟಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ, ಸೂಕ್ತ ನಿರ್ಣಯ ಕೈಗೊಳ್ಳುತ್ತೇವೆ.
ಬಾಬುರಾವ್‌ ಕಮತಗಿ,
ಮುಖ್ಯಾಧಿಕಾರಿಗಳು ಪುರಸಭೆ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.