ಕಲೆ-ಸಾಹಿತ್ಯ ಯಾವತ್ತೂ ನಶಿಸಲ್ಲ: ನಂದಿಗುಡಿ ಶ್ರೀ


Team Udayavani, Jan 2, 2020, 4:07 PM IST

2-January-23

ಮಲೇಬೆನ್ನೂರು: ಗ್ರಾಮೀಣ ಪ್ರದೇಶದಲ್ಲಿ ಹಿಂದೆ ಮಹಿಳೆಯರು ವಿವಿಧ ಕೆಲಸ ಕಾರ್ಯ ಮಾಡುತ್ತಲೇ ಹಾಡು ಕಟ್ಟುತ್ತಿದ್ದರು. ಅವೇ ಜಾನಪದ ಹಾಡುಗಳಾದವು ಎಂದು ನಂದಿಗುಡಿ ಬೃಹನ್ಮಠದ ಶ್ರೀ ಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.

ಸಮೀಪದ ಉಕ್ಕಡಗಾತ್ರಿಯಲ್ಲಿ ಶ್ರೀ ಕರಿಬಸವೇಶ್ವರ ಗಾನ ಕಲಾವೃಂದ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಜಾನಪದ ಕಲಾ ಉತ್ಸವ ಉದ್ಘಾಟಿಸಿ ಆಶೀರ್ವಚನ ನೀಡಿದರು. ಜಾನಪದ ಗೀತೆ ಹಳ್ಳಿಗಾಡಿನ
ಸೊಗಡಾಗಿದ್ದು, ಸಂಗೀತಕ್ಕೆ ನರ ನಾಡಿಗಳು ಉತ್ತೇಜನಗೊಳ್ಳುವುದರಿಂದ ಕೃಷಿ ಕಾರ್ಯದಲ್ಲಿ ಪಾಲ್ಗೊಳ್ಳುವ
ಮಹಿಳೆಯರು ಹೆಚ್ಚಿನ ಕೆಲಸ ಮಾಡುವಂತೆ ಸ್ಫೂರ್ತಿ ಪಡೆಯಲು ಸಾಮೂಹಿಕವಾಗಿ ಹಾಡುತ್ತಿದ್ದರು.

ಗ್ರಾಮೀಣ ಪ್ರದೇಶದ ಜನರಿಂದ ನಿರ್ಮಾಣವಾದ ಸಾಹಿತ್ಯ, ಜನರ ಬಾಯಿಯಿಂದ ಬಾಯಿಗೆ ಹರಡಿ ಜಾನಪದ ಗೀತೆಯಾಗಿ ಜನಪ್ರಿಯವಾಗಿವೆ ಎಂದರು.

ವಿಜ್ಞಾನ-ತಂತ್ರಜ್ಞಾನ ಎಷ್ಟೇ ಮುಂದುವರೆದರೂ ಕಲೆ-ಸಾಹಿತ್ಯ ಯಾವತ್ತೂ ನಶಿಸುವುದಿಲ್ಲ. ಬದುಕಿನ ಅರ್ಥವನ್ನು ಕೊಡುವ ಜಾನಪದ ಸಾಹಿತ್ಯವನ್ನು ಹೆಚ್ಚು ಪ್ರೋತ್ಸಾಹಿಸಬೇಕೆಂದರು.
ರಟ್ಟಿಹಳ್ಳಿ ಕಬ್ಬಿಣ ಕಂತಿಮಠದ ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಮನುಷ್ಯನಲ್ಲಿ ಕಲೆ ಎನ್ನುವುದು ಅಂತರ್ಗತವಾಗಿದೆ. ಒಂದು ರೀತಿ ಎಲ್ಲರೂ ಕಲಾವಿದರೇ ಆಗಿದ್ದಾರೆ. ಸಂಗೀತ ಹಾಡುವುದಷ್ಟೇ ಅಲ್ಲದೆ, ಕೇಳುವುದೂ ಒಂದು ಕಲೆಯಾಗಿದೆ ಎಂದರು. ಕಲಾವಿದ ಜಿ. ಸಿದ್ದನಗೌಡ್ರು ಜಾನಪದ ಕಲಾ ಉತ್ಸವ ಹಮ್ಮಿಕೊಳ್ಳುವುದರ ಮೂಲಕ ಕಲೆ-ಸಾಹಿತ್ಯದ ಬಗ್ಗೆ  ನರಲ್ಲಿ ಆಸಕ್ತಿಮೂಡಿಸುತ್ತಿದ್ದಾರೆ. ಮುಂದಿನ ವರ್ಷ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಲಿ ಎಂದು ಹಾರೈಸಿದರು.

ಕರ್ನಾಟಕ ಬಯಲಾಟ ಅಕಾಡೆಮಿ ಸದಸ್ಯ ಎನ್‌.ಎಸ್‌.ರಾಜು ಮಾತನಾಡಿ, ಬಯಲು ನಾಟಕ- ನೃತ್ಯ ಪ್ರದರ್ಶನಗಳನ್ನು ಪ್ರತಿ ಹಳ್ಳಿಗಳಲ್ಲೂ ಏರ್ಪಡಿಸಿದಾಗ ಮಾತ್ರ ಇದರ ಮಹತ್ವ ಎಲ್ಲರಿಗೂ ತಿಳಿಯುತ್ತದೆ ಎಂದರಲ್ಲದೆ, ಜಾನಪದ ಕಲಾವಿದರು ಮಾಸಾಶನಕ್ಕಾಗಿ ಅರ್ಜಿ ಸಲ್ಲಿಸಬೇಕು ಎಂದು ಸಲಹೆ ನೀಡಿದರು.

ಕರಿಬಸವೆಶ್ವರ ಟ್ರಸ್ಟ್‌ ಕಾರ್ಯದರ್ಶಿ ಎಸ್‌.ಸುರೇಶ್‌ ಮಾತನಾಡಿ, ಜಾನಪದ ಕಲೆ ನಶಿಸಿಹೋಗುತ್ತಿರುವ ಇಂತಹ ಸಂದರ್ಭದಲ್ಲಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಜಾನಪದ ಕಲೆ ಉಳಿಸಿ, ಬೆಳೆಸಬೇಕಿದೆ ಎಂದರು.

ಜಿಲ್ಲೆಯ ಅನೇಕ ಜಾನಪದ ಕಲಾ ತಂಡಗಳ ಕಲಾವಿದರು ಹಾಗೂ
ಸಾಧಕರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮಕ್ಕೂ ಮೊದಲು ಗ್ರಾಮದ ರಾಜಬೀದಿಯಲ್ಲಿ ನಡೆದ ಜಾನಪದ ಕಲಾ ಉತ್ಸವದ ಮೆರವಣಿಗೆಯಲ್ಲಿ ಡೊಳ್ಳು, ಹಲಗೆ, ವೀರಗಾಸೆ, ಕೀಲು ಕುದುರೆ, ಗೊಂಬೆಕುಣಿತ ಮತ್ತಿತರೆ ಸುಮಾರು
25ಕ್ಕೂ ಹೆಚ್ಚು ಜಾನಪದ ಕಲಾತಂಡಗಳು ಭಾಗವಹಿಸಿದ್ದು ಜನಮನ ಸೆಳೆದವು. ಈ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕತ್ತಗಿ ಚನ್ನಪ್ಪ, ತಬಲಾ ವಾದಕ ಬ್ಯಾಡಗಿಯ ದಿಂದಾಲೇಶ್ವರ್‌, ಹೊಸ ಪಾಳ್ಯದ ಎಚ್‌.ಪಿ. ನಾಗೇಂದ್ರಪ್ಪ, ವಾಸನದ ಮಾಲತೇಶ್‌, ಮುಖ್ಯ ಶಿಕ್ಷಕ ಸುರೇಶ್‌ ರೆಡ್ಡಿ, ಚಿಕ್ಕಮಾಗನೂರಿನ ನಾಗರಾಜ್‌, ನಂದಿಹಳ್ಳಿ ಕುಮಾರ್‌, ಸವಳಂಗದ ಗಣೇಶ್‌ ಅವರನ್ನು ಸನ್ಮಾನಿಸಲಾಯಿತು. ಮಾಜಿ ಶಾಸಕ ಬಿ.ಪಿ. ಹರೀಶ್‌, ಗ್ರಾಪಂ ಅಧ್ಯಕ್ಷೆ ಜಯಮ್ಮ, ಜಿಲ್ಲಾ ಬಿಜೆಪಿ ಒಬಿಸಿ ಉಪಾಧ್ಯಕ್ಷ ವಾಸನದ ಎಸ್‌.ಕೆ. ಬಸವರಾಜ್‌, ಗದ್ದಿಗೆ ಟ್ರಸ್ಟ್‌ ಕಮಿಟಿ
ಸದಸ್ಯರಾದ ರಾಮಪ್ಪ ಶಿವಣ್ಣನವರ್‌, ಗದಿಗೆಪ್ಪ ಹೊಸಳ್ಳಿ, ವೀರನಗೌಡ ಪಾಟೀಲ್‌, ಪಿಡಿಓ ಜಿ.ಆರ್‌. ಸುನೀಲ್‌ ಮುಂತಾದವರು ಉಪಸ್ಥಿತರಿದ್ದರು.

ಬಸವೇಶ್ವರ ಗಾನ ಕಲಾವೃಂದದ ಅಧ್ಯಕ್ಷ ಜಿ. ಸಿದ್ಧನಗೌಡ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕ ಮಾಲತೇಶ್‌ ಸ್ವಾಗತಿಸಿದರು. ಚಂದ್ರಗೌಡ ನಿರೂಪಿಸಿದರು. ಯುವ ಕಲಾವಿದ ಜಿ.ಎಸ್‌. ಅಜೇಯಗೌಡ ವಂದಿಸಿದರು.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.