ಆಧ್ಯಾತ್ಮಿಕ ಸತ್ಯ ಶೋಧನೆಯೇ ಶರಣರ ಗುರಿಯಾಗಿತ್ತು

ಸಾಂಸಾರಿಕ ಜವಾಬ್ದಾರಿ ನಿರ್ವಹಿಸುತ್ತ ಕಾಯಕಕ್ಕೆ ಪ್ರಾಧಾನ್ಯತೆ ನೀಡಿದವರು•ನಾಡು ಕಟ್ಟಲು ಕೊಡುಗೆ ನೀಡಿ

Team Udayavani, May 8, 2019, 12:52 PM IST

8-May-14

ಮಲೇಬೆನ್ನೂರು: ಶ್ರೀ ಆಂಜನೇಯ ಸ್ವಾಮಿ ರಥೋತ್ಸವ ಮತ್ತು ಬಸವ ಜಯಂತಿ ಅಂಗವಾಗಿ ಏರ್ಪಡಿಸಿದ್ದ ಧಾರ್ಮಿಕ ಕಾರ್ಯಕ್ರಮವನ್ನು ಕಬ್ಬಿಣಕಂತಿ ಮಠದ ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮಿಗಳು ಉದ್ಘಾಟಿಸಿದರು.

ಮಲೇಬೆನ್ನೂರು: ಬಸವ ಜಯಂತಿ ಶುಭದಿನವಾದ ಇಂದು ಶರಣರ ಬದುಕನ್ನು ಆಲೋಚನೆ ಮಾಡಬೇಕಿದೆ ಹಾಗೂ ಅವರು ಹೇಗೆ ಬದುಕಿದ್ದರು ಎಂದು ಚಿಂತನೆ ಮಾಡಬೇಕಿದೆ ಎಂದು ಕಬ್ಬಿಣಕಂತಿ ಮಠದ ಶ್ರೀ ಶಿವಲಿಂಗ ಶಿವಾಚಾರ್ಯ ಸ್ವಾಮಿಗಳು ತಿಳಿಸಿದರು.

ಅವರು ಮಂಗಳವಾರ ಪಟ್ಟಣದ ಶ್ರೀ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಶ್ರೀ ಆಂಜನೇಯಸ್ವಾಮಿ ಟ್ರಸ್ಟ್‌ ಹಮ್ಮಿಕೊಂಡಿದ್ದ ಬಸವ ಜಯಂತಿ ಹಾಗೂ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ, ಶರಣರಿಗೂ ಒಂದು ಸಂಸಾರವಿತ್ತು. ಸಾಂಸಾರಿಕ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದರು. ಅವರ ಗುರಿ ಆಧ್ಯಾತ್ಮಿಕ ಸತ್ಯವನ್ನು ಕಂಡುಕೊಳ್ಳುವುದಾಗಿತ್ತು ಎಂದರು.

ಪರಮಾತ್ಮನ ಸಾಕ್ಷಾತ್ಕಾರ ಅವರ ಗುರಿಯಾಗಿತ್ತು. ಹಾಗಿದ್ದರೂ ಎಲ್ಲೂ ಸಾಂಸಾರಿಕ ಜವಾಬ್ದಾರಿ ಮತ್ತು ಕಾಯಕದಿಂದ ಅವರು ವಿಮುಕ್ತರಾಗದೆ ಕಾಯಕಕ್ಕೆ ಅತ್ಯಂತ ಪ್ರಾಧಾನ್ಯತೆ ಕೊಟ್ಟಿದ್ದರು. ಕಷ್ಟದಿಂದ ಬಂದವರಿಗೆ ಅನ್ನವನ್ನು ನೀಡಿ, ಉದ್ಯೋಗದ ಪರಿಕಲ್ಪನೆ ನೀಡಿ ಅವರಿಗೂ ಸನ್ಮಾರ್ಗ ತೋರುತ್ತಿದ್ದರು. ಇಂತಹ ಶರಣರ ಜಯಂತ್ಯುತ್ಸವನ್ನು ಆದರ್ಶಪೂರ್ಣವಾಗಿ ಆಚರಿಸಲೇಬೇಕೆಂದಾದರೆ ನಮ್ಮ ಬದುಕಿನಲ್ಲಿ ನಾವು ಪರಿಶುದ್ಧ ಪ್ರಾಮಾಣಿಕ ಕಾಯಕದಲ್ಲಿ ಬದುಕಬೇಕು ಎಂದರು.

ಜಗತ್ತು ಶ್ರೀಮಂತರನ್ನು ನೆನಪಿನಲ್ಲಿಟ್ಟುಕೊಳ್ಳುವುದಿಲ್ಲ. ಯಾರು ತನ್ನನ್ನು ಇತರರ ಸೇವೆಯಲ್ಲಿ ತೊಡಗಿಸಿಕೊಂಡಿರುತ್ತಾರೋ ಅಂತಹ ವ್ಯಕ್ತಿಯನ್ನು ಸ್ಮರಿಸುತ್ತದೆ. ಆದ್ದರಿಂದಲೇ ಸೇವೆ ಅತ್ಯಂತ ಮಹತ್ತರವಾದುದು ಎಂದರು.

ಸರಳವಾದ ಒಂದು ಮದುವೆ ಮಾಡಲು ಕನಿಷ್ಟ ಎರಡರಿಂದ ಮೂರು ಲಕ್ಷ ರೂ. ಖರ್ಚು ಆಗುತ್ತದೆ. ಸಾಮೂಹಿಕ ವಿವಾಹದಲ್ಲಿ ಮದುವೆ ಮಾಡಿದಲ್ಲಿ ಇಂತಹ ಖರ್ಚನ್ನು ತಡೆದು ಆ ಹಣದಿಂದ ಸಣ್ಣ ಮನೆಯನ್ನೇ ಕಟ್ಟಬಹುದು. ತೋಟದಲ್ಲಿ ಬೋರ್‌ ತೆಗೆಸಿ ನೀರಿನ ಬವಣೆ ತಪ್ಪಿಸುವ ಅವಕಾಶವಿದೆ ಎಂದರು.

ಮದುವೆ ಎರಡು ಉದ್ದೇಶಗಳ ಹಿನ್ನೆಲೆಯಲ್ಲಿ ನಡೆಯಬೇಕು. ಒಂದು, ನಿಮಗೆ ಹುಟ್ಟುವ ಸಂತತಿಯಿಂದ ನಿಮ್ಮ ಕುಟುಂಬ ವ್ಯವಸ್ಥೆ ಬೆಳೆಸುವುದು. ಇನ್ನೊಂದು ನಿಮಗೆ ಹುಟ್ಟುವ ಸಂತತಿಗೆ ಧರ್ಮದ ಸಂಸ್ಕಾರವನ್ನು, ಜ್ಞಾನವನ್ನು ಕೊಟ್ಟು ಬೆಳಸುವುದರ ಮೂಲಕ ಅವರನ್ನೇ ಒಂದು ಆಸ್ತಿಯನ್ನಾಗಿ ಮಾಡಬೇಕು ಎಂದರು.

ದೇಶದ ಆಸ್ತಿಯನ್ನು ಹೊಡೆದು ಬಹಳಷ್ಟು ಬೇಗ ಶ್ರೀಮಂತರಾಗಬೇಕೆಂಬ ಮನೋಭಾವ ಬಹಳಷ್ಟು ಜನರಲ್ಲಿ ಇಂದು ಇರುವುದನ್ನು ಕಂಡಿದ್ದೇನೆ. ಪ್ರತಿಯೊಬ್ಬರೂ ನಾಡನ್ನು ಕಟ್ಟಬೇಕು. ಈ ಪುಣ್ಯಭೂಮಿಯನ್ನು ಉಳಿಸಬೇಕು ಎನ್ನುವಂತಹ ಮನೋಭಾವ ಬೆಳೆಸಿಕೊಳ್ಳಬೇಕು. ಸಾಧ್ಯವಾದಷ್ಟು ಮೋಸದ ಜೀವನ ಬಿಟ್ಟು ಸತ್ಯ, ಶುದ್ಧ ಕಾಯಕದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಕೌಟುಂಬಿಕ ವ್ಯವಸ್ಥೆಯನ್ನು ಬೆಳೆಸಿದರೆ ಸಾಕು ಎಂದರು.

ಸಾರ್ವತ್ರಿಕವಾಗಿ ಎಲ್ಲರೂ ಒಳ್ಳೆಯವರಾದರೆ, ಎಲ್ಲರೂ ಪರಿಶುದ್ಧ, ಪ್ರಾಮಾಣಿಕ ಕಾಯಕದಲ್ಲಿ ಬದುಕಿದರೆ, ಈ ದೇಶದ ಬದಲಾವಣೆ ಆಗುತ್ತದೆ. ಅದಕ್ಕೆ ಎಲ್ಲರೂ ಚಿಂತನೆ ಮಾಡಬೇಕಿದೆ ಎಂದರು.

ಸಾಮೂಹಿಕ ವಿವಾಹ ಮಹೋತ್ಸವದಲ್ಲಿ 15 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಟ್ರಸ್ಟನ ಅಧ್ಯಕ್ಷ ಕಣ್ಣಾಳ ಧರ್ಮಣ್ಣ ಅಧ್ಯಕ್ಷತೆ ವಹಿಸಿದ್ದರು. ಎಪಿಎಂಸಿ ಸದಸ್ಯ ಮಂಜುನಾಥ ಪಟೇಲ್ ಮತ್ತು ವರ್ತಕ ಬಿ. ವೀರಯ್ಯ ಮಾತನಾಡಿದರು.

ಮುಖಂಡರಾದ ಪೂಜಾರ್‌ ಗಂಗೇನಳ್ಳೆಪ್ಪ, ಮಾಗನಹಳ್ಳಿ ಹಾಲಪ್ಪ, ದಾನಯ್ಯನವರ ಮಂಜುನಾಥ್‌, ಬಾರಿಕರ ಮಲ್ಲಿಕಾರ್ಜುನ, ಬಿ.ಎಂ. ಜಯದೇವಯ್ಯ, ಕಣ್ಣಾಳ್‌ ಪರಶುರಾಮಪ್ಪ, ಮುದೇಗೌಡ್ರ ಬಸವರಾಜಪ್ಪ, ಪೂಜಾರ್‌ ನಾಗಪ್ಪ, ಕೆ.ಪಿ. ಗಂಗಾಧರ್‌, ಎಂ.ಎನ್‌ ಮಂಜುನಾಥ್‌, ಮೈಲಾರಪ್ಪ, ಬಿ. ಸುರೇಶ್‌, ಇತರರು ಇದ್ದರು.

ಬಿಂದು ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಶಿಕ್ಷಕ ಕರಿಬಸಪ್ಪ ನಿರೂಪಿಸಿದರು. ದಂಡಿ ತಿಪ್ಪೇಸ್ವಾಮಿ ಸ್ವಾಗತಿಸಿ, ವಂದಿಸಿದರು.

ಟಾಪ್ ನ್ಯೂಸ್

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.