ಮೇಳಾಪುರ ಗ್ರಾಪಂನಲ್ಲಿ ನೈರ್ಮಲ್ಯ ಕ್ರಾಂತಿ

ಪ್ಲಾಸ್ಟಿಕ್‌ ಮುಕ್ತ ಗ್ರಾಪಂ ಮಾಡುವ ದೃಢ ಸಂಕಲ್ಪ „ ಪ್ಲಾಸ್ಟಿಕ್‌ ವಸ್ತುಗಳ ಸಂಗ್ರಹ, ವೈಜ್ಞಾನಿಕ ವಿಂಗಡಣೆ

Team Udayavani, Aug 15, 2019, 3:53 PM IST

15-Agust-40

ಪ್ಲಾಸ್ಟಿಕ್‌ ವಸ್ತುಗಳನ್ನು ಗೋದಾಮಿನಲ್ಲಿ ಸಂಗ್ರಹಿಸಿಡುತ್ತಿರುವುದು.

ಮಂಡ್ಯ ಮಂಜುನಾಥ್‌
ಮಂಡ್ಯ:
ಗ್ರಾಮೀಣ ಪರಿಸರವನ್ನು ಸ್ವಚ್ಛತೆಯಿಂದ ಇಡುವ ಸಲುವಾಗಿ ನೈರ್ಮಲ್ಯ ಕ್ರಾಂತಿಗೆ ಶ್ರೀರಂಗಪಟ್ಟಣ ತಾಲೂಕಿನ ಮೇಳಾಪುರ ಗ್ರಾಮ ಪಂಚಾಯಿತಿ ಪಣ ತೊಟ್ಟಿದೆ. ಪಂಚಾಯಿತಿ ವ್ಯಾಪ್ತಿಯೊಳಗೆ ನಿತ್ಯವೂ ಬೀಳುತ್ತಿರುವ ಪ್ಲಾಸ್ಟಿಕ್‌ ಕಸವನ್ನು ಸಂಗ್ರಹಿಸಿ, ವಿಂಗಡಣೆ ಮಾಡಿ ದಾಸ್ತಾನು ಮಾಡುವುದರೊಂದಿಗೆ ವೈಜ್ಞಾನಿಕ ವಿಲೇವಾರಿಗೆ ನಿರ್ಧರಿಸಿದೆ. ಪಂಚಾಯಿತಿಯನ್ನು ಪ್ಲಾಸ್ಟಿಕ್‌ ಮುಕ್ತಗೊಳಿಸುವ ದೃಢ ಸಂಕಲ್ಪ ಹೊತ್ತು ಮಾದರಿ ಪಂಚಾಯಿತಿಯಾಗುವತ್ತ ದಿಟ್ಟ ಹೆಜ್ಜೆ ಇಟ್ಟಿದೆ.

ಪರಿಸರ ಸ್ವಚ್ಛತೆಯನ್ನು ಪ್ರಮುಖ ಗುರಿಯಾಗಿಸಿ ಕೊಂಡು ಶ್ರಮಿಸುತ್ತಿರುವ ಅಧಿಕಾರಿಗಳ ಈ ಮಹತ್ಕಾ ರ್ಯಕ್ಕೆ ಗ್ರಾಮಗಳ ಜನರೂ ಕೈಜೋಡಿ ಸಿದ್ದಾರೆ. ನಿತ್ಯವೂ ಬೀಳುವ ಕಸವನ್ನು ಬೇಕಾಬಿಟ್ಟಿ ಎಸೆಯದೆ ಒಂದೆಡೆ ಸಂಗ್ರಹಿಸಿಟ್ಟು ಕಸ ಸಂಗ್ರಹಿಸಲು ಬರುವ ಪೌರ ಕಾರ್ಮಿಕರಿಗೆ ನೀಡುತ್ತಾ ಗ್ರಾಮೀಣ ಪರಿಸರ ಹದಗೆಡದಂತೆ ಕಾಪಾಡಿಕೊಳ್ಳುವತ್ತ ಆಸಕ್ತಿ ವಹಿಸಿದ್ದಾರೆ.

ಎರಡು ಗ್ರಾಮಗಳಲ್ಲಿ ಕಸ ಸಂಗ್ರಹ: ಮೇಳಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಮೇಳಾಪುರ, ಹೆಬ್ಟಾಡಿ ಹುಂಡಿ, ಹೆಬ್ಟಾಡಿ, ಹಂಪಾಪುರ, ಹೊಸೂರು ಗ್ರಾಮ ಗಳು ಒಳಪಡುತ್ತವೆ. ಹಾಲಿ ಮೇಳಾಪುರ ಹಾಗೂ ಹೆಬ್ಟಾಡಿ ಹುಂಡಿಯಲ್ಲಿ ಪ್ಲಾಸ್ಟಿಕ್‌ ಕಸವನ್ನು ಸಂಗ್ರಹ ಮಾಡಲಾಗುತ್ತಿದೆ. ಎರಡೂ ಗ್ರಾಮಗಳ ಪ್ರತಿಯೊಂದು ಬೀದಿಯೂ ಸ್ವಚ್ಛತೆಯಿಂದ ಕಂಗೊಳಿಸುತ್ತಿವೆ. ಪ್ರತಿ ದಿನ ಮನೆ ಬಾಗಿಲಿಗೆ ಬರುವ ಪಂಚಾಯಿತಿ ಪೌರ ಕಾರ್ಮಿಕರು ಕಸವನ್ನು ಸಂಗ್ರಹಿಸಿಕೊಂಡು ಹೋಗುವು ದಲ್ಲದೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

ಮೊದಲೆಲ್ಲಾ ರಸ್ತೆ ಬದಿಗಳಲ್ಲಿ, ಕಂಡ ಕಂಡ ಜಾಗಗಳಲ್ಲೆಲ್ಲಾ ಕಸ ಎಸೆದುಹೋಗುವುದು ಸಾಮಾನ್ಯ ವಾಗಿತ್ತು. ಪ್ಲಾಸ್ಟಿಕ್‌ ವಸ್ತುಗಳು ಎಲ್ಲೆಂದರಲ್ಲಿ ಬಿದ್ದಿರುತ್ತಿ ದ್ದವು. ಗಾಳಿಗೆ ಹಾರಿ ಹೋಗಿ ಚರಂಡಿ ಸೇರುತ್ತಿದ್ದವು. ಇದರ ಪರಿಣಾಮ ಎಲ್ಲೆಡೆ ಅನೈರ್ಮಲ್ಯ ತಾಂಡವ ವಾಡುತ್ತಿತ್ತು. ಕಸದಿಂದ ಹೊರಬರುತ್ತಿದ್ದ ದುರ್ವಾಸನೆ ನರಕಸದೃಶ ವಾತಾವರಣವನ್ನು ಸೃಷ್ಟಿಸಿತ್ತು.

ಮನವೊಲಿಕೆ ಯಶಸ್ವಿ: ಗ್ರಾಮ ಪಂಚಾಯಿತಿಯ ಪರಿಸರವನ್ನು ಅವಲೋಕನ ಮಾಡಿದ ಜಿಪಂ ಸಿಇಒ ಕೆ.ಯಾಲಕ್ಕೀಗೌಡರು ಪಂಚಾಯಿತಿ ವ್ಯಾಪ್ತಿಯೊಳಗೆ ಕಸ ಸಂಗ್ರಹ ಮಾಡುವುದರೊಂದಿಗೆ ಸ್ವಚ್ಛತಾ ಕ್ರಾಂತಿ ಮೂಲಕ ಯಶೋಗಾಥೆ ಬರೆಯುವಂತೆ ಸಲಹೆ ನೀಡಿದರು. ಇದನ್ನು ಸವಾಲಾಗಿಯೇ ಸ್ವೀಕರಿಸಿದ ಗ್ರಾಪಂ ಪಿಡಿಒ ರಮೇಶ್‌, ಮೊದಲಿಗೆ ಗ್ರಾಮ ನೈರ್ಮಲ್ಯ ಕಾಪಾಡುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು. ಕಸವನ್ನು ಮನೆಯಲ್ಲೇ ವಿಂಗಡಿಸುವಂತೆ, ಎಲ್ಲೆಂದರಲ್ಲಿ ಕಸವನ್ನು ಬಿಸಾಡದೆ ನಿರ್ದಿಷ್ಟ ಸ್ಥಳಗಳಲ್ಲಿ ಹಾಕುವಂತೆ ಗ್ರಾಮಸ್ಥರ ಮನವೊಲಿಸುವಲ್ಲಿ ಯಶಸ್ವಿಯಾದರು. ಗ್ರಾಮಸ್ಥರಿಗೆ ಇದು ಹೊಸದಾಗಿ ಕಂಡುಬಂದರೂ ಕೆಲವು ದಿನಗಳ ಬಳಿಕ ಬದಲಾವಣೆಗೆ ಹೊಂದಿಕೊಂಡರು. ಇದರಿಂದ ಕಸ ಸಂಗ್ರಹಣಾ ಕಾರ್ಯ ಸುಲಭವಾಯಿತು ಎನ್ನುವುದು ಪಂಚಾಯಿತಿ ಅಧಿಕಾರಿಗಳು ಹೇಳುವ ಮಾತಾಗಿದೆ.

ಕಸ ಸಂಗ್ರಹ: ಗ್ರಾಮಗಳಲ್ಲಿ ಸಂಗ್ರಹವಾಗುವ ಪ್ಲಾಸ್ಟಿಕ್‌ ಲೋಟಗಳು, ಒಡೆದುಹೋದ ಬಕೆಟ್‌ಗಳು, ಪ್ಲಾಸ್ಟಿಕ್‌ ಬಾಟಲ್ಗಳು, ಪ್ಲಾಸ್ಟಿಕ್‌ ಕವರ್‌ಗಳು, ಚಪ್ಪಲಿಗಳು, ಪ್ಲಾಸ್ಟಿಕ್‌ ವೈರ್‌ಗಳು ಸೇರಿದಂತೆ ವಿವಿಧ ಮಾದರಿಯ ಪ್ಲಾಸ್ಟಿಕ್‌ ವಸ್ತುಗಳನ್ನು ಸಂಗ್ರಹಿಸಿ ಪಂಚಾಯಿತಿ ಪೌರ ಕಾರ್ಮಿಕರು ತರುತ್ತಾರೆ. ಬೆಳಗ್ಗೆ 6.30 ಗಂಟೆಯಿಂದಲೇ ಸ್ವಚ್ಛತಾ ಕಾರ್ಯ ಕೈಗೊಳ್ಳುವ ಪೌರ ಕಾರ್ಮಿಕರು ಬೆಳಗ್ಗೆ 11 ಗಂಟೆಯವರೆಗೆ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಚರಂಡಿಗಳನ್ನು ಶುಚಿಗೊಳಿಸುವರು. ಆನಂತರ ಪ್ಲಾಸ್ಟಿಕ್‌ ವಸ್ತುಗಳನ್ನು ಸಂಗ್ರಹಿಸುವ ಕಾರ್ಯಕ್ಕೆ ಮುಂದಾಗುತ್ತಾರೆ. ಮೇಳಾಪುರ ಹಾಗೂ ಹೆಬ್ಟಾಡಿ ಹುಂಡಿಗಳಲ್ಲಿ ಸಂಗ್ರಹವಾದ ಪ್ಲಾಸ್ಟಿಕ್‌ ವಸ್ತುಗಳನ್ನು ಸಂಗ್ರಹಿಸಿ ತರುವ ಕೆಲಸವನ್ನು ಬದ್ಧತೆಯಿಂದ ನಿರ್ವಹಿಸುತ್ತಿದ್ದಾರೆ.

ರಕ್ಷಣಾ ಸಾಮಗ್ರಿ ವಿತರಣೆ: ಪ್ಲಾಸ್ಟಿಕ್‌ ವಸ್ತುಗಳನ್ನು ಸಂಗ್ರಹಿಸಲು ಬರುವ ಪೌರ ಕಾರ್ಮಿಕರಿಗೆ ಗ್ಲೌಸ್‌, ಶೂ, ಮಾಸ್ಕ್, ಹೆಲ್ಮೆಟ್ ಹಾಗೂ ಸಮವಸ್ತ್ರಗಳನ್ನು ನೀಡಲಾ ಗಿದೆ. ಅವುಗಳನ್ನು ಚಾಚೂ ತಪ್ಪದೆ ಕೆಲಸದಲ್ಲಿ ಬಳಸು ತ್ತಿರುವ ಕಾರ್ಮಿಕರು ಕಸ ಸಂಗ್ರಹಣೆ ಕಾರ್ಯವನ್ನು ನಿರ್ವಹಿಸುತ್ತಾ ಜನರಲ್ಲೂ ಜಾಗೃತಿ ಮೂಡಿಸುತ್ತಾ ಸ್ವಚ್ಛತೆಯ ಸಂದೇಶ ಸಾರುತ್ತಿದ್ದಾರೆ.

ಪ್ರತಿ ಬೀದಿಯ ಜನರೂ ಮನೆಯಿಂದ ಹೊರಬೀಳುವ ಅನುಪಯೋಗಿ ಪ್ಲಾಸ್ಟಿಕ್‌ ವಸ್ತುಗಳನ್ನು ಮನೆಯ ಮುಂಭಾಗದಲ್ಲಿ ಹಾಕುವರು. ಕೈಗಾಡಿ ಯೊಂದಿಗೆ ಬರುವ ಪೌರ ಕಾರ್ಮಿಕರು ಅವುಗಳನ್ನು ಚೀಲದಲ್ಲಿ ತುಂಬಿಕೊಂಡು ಸಾಗುವರು. ಎಲ್ಲಿಯೂ ಕಸ ಬೀಳದಂತೆ ಜಾಗೃತಿ ವಹಿಸುವ ಮೂಲಕ ಶುಚಿತ್ವಕ್ಕೆ ಹೆಚ್ಚಿನ ಮಹತ್ವ ನೀಡಿರುವುದರಿಂದ ಪಂಚಾಯಿತಿ ವ್ಯಾಪ್ತಿಯ ಎರಡು ಗ್ರಾಮಗಳಲ್ಲಿ ಸ್ವಚ್ಛತಾ ಹಾಗೂ ಪ್ಲಾಸ್ಟಿಕ್‌ ಮುಕ್ತ ವಾತಾವರಣ ನಿರ್ಮಾಣವಾಗಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.