1.10 ಕೋಟಿ ವೆಚ್ಚದಲ್ಲಿ ಹನಕೆರೆ ಅಭಿವೃದ್ಧಿ
Team Udayavani, Dec 22, 2019, 4:20 PM IST
ಮಂಡ್ಯ: ಸಣ್ಣ ನೀರಾವರಿ ಇಲಾಖೆಯಿಂದ 1.10 ಕೋಟಿ ರೂ. ವೆಚ್ಚದಲ್ಲಿ ಹನಕೆರೆ ಗ್ರಾಮದ ಕೆರೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಶಾಸಕ ಎಂ. ಶ್ರೀನಿವಾಸ್ ತಿಳಿಸಿದರು.
ವಿಧಾನಸಭಾ ಕ್ಷೇತ್ರದ ಹನಕೆರೆ ಗ್ರಾಮದಲ್ಲಿ ನಾಡ ಕಚೇರಿ ಉದ್ಘಾಟನೆ ಹಾಗೂ ಕೆರೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತ ನಾ ಡಿ, ನಾನು ಮೂರು ಬಾರಿ ಶಾಸಕನಾಗಿದ್ದರೂ ಹನಕೆರೆ ಗ್ರಾಮ ಅಭಿವೃದ್ಧಿ ಕಂಡಿರಲಿಲ್ಲ. ಈ ಬಾರಿ ಹನಕೆರೆ ಗ್ರಾಮವನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಲು ಸರ್ಕಾರದ ಬಳಿ ಹೋರಾಟ ಮಾಡಿ ಕೆಲಸ ಮಂಜೂರು ಮಾಡಿಸಿದ್ದೇನೆ. ಸಾರ್ವಜನಿಕರು ಈ ಸೌಲಭ್ಯಗಳನ್ನು ಉಪಯೋಗಿಸಿಕೊಳ್ಳಬೇಕು ಎಂದರು.
ಮನುಷ್ಯನ ಹುಟ್ಟು-ಸಾವಿನ ನಡುವೆ ಏನಾದರೂ ಸಾಧನೆ ಮಾಡಬೇಕು. ಒಳ್ಳೆಯ ಕೆಲಸ ಮಾಡುವಾಗ ಕೆಲವು ಅನನುಕೂಲಗಳಾಗುತ್ತವೆ. ಅದನ್ನು ಪ್ಧಾ ನವಾಗಿರಿಸಿಕೊಳ್ಳದೆ ಊರಿನ ಅಭಿವೃದ್ಧಿಗೆ ಪ್ರಥಮ ಆದ್ಯತೆ ನೀಡಬೇಕು ಎಂದು ಹೇಳಿದರು. ಜಾತಿ , ಆದಾಯ ಪ್ರಮಾಣ ಪತ್ರ ಸಲ್ಲಿಸಲು ಮತ್ತು ಸಾಮಾಜಿಕ ಭದ್ರತಾ ಯೋಜನೆಗಳನ್ನು ತಾಲೂಕು ಮಟ್ಟದಲ್ಲಿ ವಿತರಿಸಲಾಗುತ್ತಿತ್ತು. ನಾಗರಿಕರು ಈ ಸೌಲಭ್ಯಗಳನ್ನು ಇನ್ನು ಮುಂದೆ ಹನಕೆರೆ ಗ್ರಾಮದಲ್ಲೇ ಪಡೆಯಬಹುದು ಎಂದು ತಿಳಿಸಿದರು.
ಜಿಪಂ ಸದಸ್ಯ ಎಚ್.ಎನ್ .ಯೋಗೇಶ್, ತಾಪಂ ಸದಸ್ಯ ಎಚ್.ಡಿ.ಕಿರಣ್ಕುಮಾರ್, ಗ್ರಾಪಂ ಅಧ್ಯಕ್ಷ ಎಚ್. ಟಿ .ಶೇಖರ್, ತಹಶೀಲ್ದಾರ್ ಎಲ್.ನಾಗೇಶ್, ಉಪ ತಹಶೀಲ್ದಾರ್ ಡಿ.ತಮ್ಮಣ್ಣಗೌಡ, ಗ್ರಾಮ ಲೆಕ್ಕಿಗರಾದ ಸೌಂದರ್ಯ, ರೇಣುಕಮ್ಮ, ಸಂದೀಪ್, ಮುಖಂಡರಾದ ಅಶ್ವಥ್ ಶಿವರಾಮ ಪುಟ್ಟ ಸ್ವಾಮಿ, ಸಹಾಯಕ ಎಂಜಿನಿಯರ್ ಎಸ್. ದೊಡ್ಡ ವೀರಯ್ಯ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಗನಿಗೆ ಮದ್ವೆ ಮಾಡಲು ಹೋಗಿ ಅಪ್ಪನೇ ಮದ್ವೆ ಆದಂತಿದೆ: ಸಚಿವ
Mandya; ಕಾವೇರಿ ನದಿಯಲ್ಲಿ ಈಜಲು ಹೋದ ಮೈಸೂರಿನ ನಾಲ್ವರು ನೀರುಪಾಲು
Congress ಅಭ್ಯರ್ಥಿಗೆ ಸುಮಲತಾ ಬೆಂಬಲ ಕೊಟ್ಟರೆ ಸ್ವಾಗತ: ಸಚಿವ ಚಲವರಾಯಸ್ವಾಮಿ
ಪಟಾಕಿಗೆ ಮದ್ದು ತುಂಬುತ್ತಿದ್ದಾಗ ಸ್ಫೋಟ: ಓರ್ವ ಕಾರ್ಮಿಕ ಸಾವು
Melukote: ಶ್ರೀ ಚೆಲುವನಾರಾಯಣಸ್ವಾಮಿಯ ಉತ್ಸವ… ಖಜಾನೆಯಿಂದ ವೈರಮುಡಿ ಕಿರೀಟ ರವಾನೆ
MUST WATCH
ಹೊಸ ಸೇರ್ಪಡೆ
Sandalwood: ಪ್ರಕೃತಿಯ ಸುತ್ತ “ಕೃಷ್ಣಾವತಾರ’
Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ