ಜಿಲ್ಲೆಗೆ ಸೋಂಕು ನಿಯಂತ್ರಣಕ್ಕೆ 10 ಕೋಟಿ ಅನುದಾನ


Team Udayavani, Jun 1, 2021, 12:51 PM IST

ಜಿಲ್ಲೆಗೆ ಸೋಂಕು ನಿಯಂತ್ರಣಕ್ಕೆ 10 ಕೋಟಿ ಅನುದಾನ

ಕೋವಿಡ್ ಎರಡನೇ ಅಲೆ ದೇಶವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ರಾಜ್ಯದಲ್ಲೂ ಸಹ ನಿತ್ಯದ ಸೋಂಕು ಪ್ರಕರಣ 50 ಸಾವಿರ ಗಡಿವರೆಗೆ ದಾಟಿ ಇದೀಗ ಇಳಿಕೆ ಕಾಣುತ್ತಿದೆ. ಅದರಂತೆ ಜಿಲ್ಲೆಯಲ್ಲೂ ಸಹ ದಿನವೊಂದರಲ್ಲಿ 1,959 ಸೋಂಕು ಪ್ರಕರಣ ದಾಖಲಾಗಿದ್ದೇ ಗರಿಷ್ಠವಾಗಿದ್ದು, ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲೂ ಸಹ ಇಳಿಕೆ ಕಂಡು ನಿತ್ಯ 500, 600 ಗಡಿಯಲ್ಲಿ ಸೋಂಕು ಪ್ರಕರಣ ದಾಖಲಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿ ತಮ್ಮ ಕಾರ್ಯವೈಖರಿ ಹಾಗೂ ಕೈಗೊಂಡಿರುವ ಕ್ರಮ, ಸೌಕರ್ಯಗಳ ಕುರಿತು ಕೆ.ಆರ್‌.ಪೇಟೆ ಶಾಸಕರೂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ನಾರಾಯಣ ಗೌಡ ಅವರು ಉದಯವಾಣಿ ಸಂದರ್ಶನದಲ್ಲಿ ಹಂಚಿಕೊಂಡಿದ್ದಾರೆ.

ಮಂಡ್ಯ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ 2ನೇ ಅಲೆ ಹೆಚ್ಚಾಗಿತ್ತು. ಇದನ್ನು ನಿಯಂತ್ರಿಸುವ ಸವಾಲು ಎದುರಾಗಿದೆ. ನಮ್ಮ ಜಿಲ್ಲೆಯಲ್ಲದೆ, ಬೇರೆ ಜಿಲ್ಲೆಯ ಸೋಂಕಿತರು ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿದ್ದಾರೆ.

ಸೋಂಕು ಜಿಲ್ಲೆಯ ಗ್ರಾಮ ಗ್ರಾಮಗಳಿಗೂ ಹರಡುವ ಮೂಲಕ ಭೀತಿ ಉಂಟು ಮಾಡಿತ್ತು. ಇದನ್ನು ನಿಯಂತ್ರಿಸುವ ಜವಾಬ್ದಾರಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರ ಮೇಲೆ ಬಿದ್ದಿತ್ತು. ಜಿಲ್ಲೆಯಲ್ಲಿಯೇ ಮೊಕ್ಕಾಂ ಹೂಡಿದ ಸಚಿವ ನಾರಾ ಯಣಗೌಡ ಅವರು, ಪ್ರತಿದಿನ ಕಾಲಿಗೆ ಚಕ್ರಕಟ್ಟಿ ಕೊಂಡವರಂತೆ ಜಿಲ್ಲೆಯನ್ನು ಪ್ರದಕ್ಷಿಣೆ ಹಾಕುತ್ತಲೇ ಇದ್ದಾರೆ. ಎಲ್ಲ ಶಾಸಕರು, ಅಧಿಕಾರಿಗಳನ್ನು

ವಿಶ್ವಾಸಕ್ಕೆ ತೆಗೆದುಕೊಂಡು ಸೋಂಕು ನಿಯಂತ್ರಣಕ್ಕೆ ಶ್ರಮ ವಹಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಅತಿ ಹೆಚ್ಚುಕ್ವಾರಂಟೈನ್‌ಕೇಂದ್ರಗಳನ್ನು ತೆರೆದು ಹೋಂ ಐಸೋಲೇಷನ್‌ಗೆ ಒತ್ತು ನೀಡದೆಕ್ವಾರಂಟೈನ್‌ ಕೇಂದ್ರಗಳಿಗೆ ಸೋಂಕಿತರನ್ನು ದಾಖಲಿಸುವ ಮೂಲಕ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.

ಆಸ್ಪತ್ರೆ ಹಾಗೂ ಕ್ವಾರಂಟೈನ್‌ಕೇಂದ್ರಗಳಲ್ಲಿ ಸೋಂಕಿತರಿಗೆ ಯಾವುದೇ ರೀತಿಯ ತೊಂದರೆ ಯಾಗದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸಲಾಗಿದೆ. ಗುಣಮಟ್ಟದಊಟ, ತಿಂಡಿ, ಚಿಕಿತ್ಸೆ, ಹೆಲ್ತ್‌ಕಿಟ್‌ ವಿತರಣೆ, ಬಿಸಿ ನೀರು ವ್ಯವಸ್ಥೆ, ಶೌಚಾಲಯ, ಶುಚಿತ್ವಕ್ಕೆ ಹೆಚ್ಚು ಆದ್ಯತೆ ನೀಡುವ ಮೂಲಕ ಸೋಂಕು ನಿಯಂತ್ರಣಕ್ಕೆ ಶ್ರಮಿಸುತ್ತಿದ್ದಾರೆ. ಮಿಮ್ಸ್‌ನಲ್ಲಿ ಉಂಟಾಗಿದ್ದ ಆಕ್ಸಿಜನ್‌ಕೊರತೆ ನೀಗಿಸಲು ದಾನಿಗಳ ಮೂಲಕ ಸಿಲಿಂಡರ್‌, ಆಕ್ಸಿಜನ್‌ ಪ್ಲಾಂಟ್‌, ಮೊಬೈಲ್‌ ಆಕ್ಸಿಜನ್‌ಕಾನ್ಸಂಟ್ರೇಟರ್‌ಗಳನ್ನು ಪಡೆಯುವ ಮೂಲಕ ಪ್ರಸ್ತುತ ಇರುವ ಆಕ್ಸಿಜನ್‌ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಸಚಿವಕೆ.ಸಿ.ನಾರಾಯಣಗೌಡ ಅವರು ಉದಯವಾಣಿ ಯೊಂದಿಗೆ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ತಮ್ಮಕಾರ್ಯವೈಖರಿ ಬಗ್ಗೆ ಹಂಚಿಕೊಂಡಿದ್ದಾರೆ.

ಜಿಲ್ಲೆಯಲ್ಲಿ ಸೋಂಕು ನಿಯಂತ್ರಿಸಲು ಉಸ್ತುವಾರಿ ಸಚಿವರಾಗಿ ಜವಾಬ್ದಾರಿ ಹೇಗಿದೆ? :

ಕೋವಿಡ್ ಸೋಂಕಿನ ಎರಡನೇ ಅಲೆಯು ಹೆಚ್ಚಾಗುತ್ತಿದ್ದಂತೆ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಜವಾಬ್ದಾರಿ ನಿಭಾಯಿಸುತ್ತಿರುವುದು ಸಮಾಧಾನ ತಂದಿದೆ. ಸೋಂಕು ನಿಯಂತ್ರಿಸಲು ಅಗತ್ಯವಾಗಿ ಬೇಕಾಗಿದ್ದ ಅನುದಾನ10ಕೋಟಿ ರೂ.ಗಳನ್ನು ಸರ್ಕಾರ ಬಿಡುಗಡೆ ಮಾಡಿತು. ಅಲ್ಲದೆ, ಅದಕ್ಕೂ ಮುನ್ನ ತಾಲೂಕಿನ ಎಲ್ಲ ತಾಲೂಕು ಆಡಳಿತಗಳಿಂದ50 ರಿಂದ1 ಲಕ್ಷ ರೂ.ವರೆಗೆ ತೆಗೆದುಕೊಂಡು ಚಿಕಿತ್ಸೆಗೆ ಬೇಕಾದ ಅಗತ್ಯ ಸೌಲಭ್ಯ ಕಲ್ಪಿಸಲಾಗಿದೆ. ಎಲ್ಲ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ಕ್ವಾರಂಟೈನ್‌ಕೇಂದ್ರ ತೆರೆದು ಸೋಂಕಿತರನ್ನು ದಾಖಲಿಸಿ ಚಿಕಿತ್ಸೆ ನೀಡಿ, ಕ್ರಮ ವಹಿಸಲಾಯಿತು.

ಪ್ರಸ್ತುತ ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಬಂದಿದೆಯಾ? ಹೌದು, ಪ್ರಸ್ತುತ ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಬಂದಿದೆ. ಮೊದಲು2 ಸಾವಿರದಷ್ಟು ಪ್ರಕರಣ ದಾಖಲಾಗುತ್ತಿದ್ದವು. ಈಗ 500ಕ್ಕೆ ಇಳಿದಿರುವುದು ಸಮಾಧಾನ ತಂದಿದೆ. ಸೋಂಕು ಹೆಚ್ಚಾಗುತ್ತಿದ್ದಂತೆ ಮೊರಾರ್ಜಿ,ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ಇತರೆ ವಸತಿ ಶಾಲೆಗಳು ಹಾಗೂ ನವೋದಯ ಶಾಲೆಗಳಲ್ಲಿಕ್ವಾರಂಟೈನ್‌

ಕೇಂದ್ರಗಳನ್ನು ತೆರೆದು ಸೋಂಕಿತರುಕಂಡು ಬಂದ ತಕ್ಷಣ ಅವರನ್ನು ಕ್ವಾರಂಟೈನ್‌ ದಾಖಲಿಸಿ ಸೂಕ್ತ ಚಿಕಿತ್ಸೆ ನೀಡಿ, ಗುಣಮಟ್ಟದಊಟ, ತಿಂಡಿ, ಬಿಸಿ ನೀರು ವ್ಯವಸ್ಥೆ ಜೊತೆಗೆ ಶುಚಿತ್ವಕ್ಕೆ ಒತ್ತು ನೀಡಲಾಗುತ್ತಿದೆ. ಎಲ್ಲ ತಾಲೂಕುಗಳಲ್ಲಿಯೂ ಬೆಡ್‌ಗಳ ಸಂಖ್ಯೆ ಹೆಚ್ಚಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದರಿಂದ ಸೋಂಕು ನಿಯಂತ್ರಣಕ್ಕೆ ಬರುತ್ತಿರುವುದು ಸಮಾಧಾನ ತಂದಿದೆ.

ಸ್ಥಳೀಯ ಶಾಸಕರು ಹಾಗೂಅಧಿಕಾರಿಗಳ ಸಹಕಾರ ಹೇಗಿದೆ?

ಸ್ಥಳೀಯ ಶಾಸಕರು ತಮ್ಮಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭಿಪ್ರಾಯ, ಸಲಹೆಗಳನ್ನು ಸ್ವೀಕರಿಸಿ ಅದರಂತೆಕೆಲಸ ನಿರ್ವಹಿಸಲಾಗುತ್ತಿದೆ. ಯಾವ ತಾಲೂಕಿನಲ್ಲಿ ಸೌಲಭ್ಯದಕೊರತೆ ಇದ್ದರೆ ತಕ್ಷಣ ತಿಳಿಸುವಂತೆ ಮನವಿ ಮಾಡಲಾಗಿತ್ತು. ಅದರಂತೆಸಮಸ್ಯೆ ಇರುವ ತಾಲೂಕುಗಳಿಗೆ ಅಗತ್ಯ ಸೌಲಭ್ಯಕಲ್ಪಿಸಲಾಗಿದೆ. ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದರಿಂದ ಸೋಂಕು ಹತೋಟಿಗೆ ಬರುತ್ತಿದೆ.

ಆಕ್ಸಿಜನ್‌ ಕೊರತೆ ನೀಗಿಸಲು ಏನು ಕ್ರಮ?

ಜಿಲ್ಲೆಯಲ್ಲಿ ಮೊದಲು ಆಕ್ಸಿಜನ್‌ಕೊರತೆ ಇತ್ತು.ಕೊರತೆ ನೀಗಿಸಲು ಹಗಲು-ರಾತ್ರಿ ಶ್ರಮಿಸಿದ್ದೇವೆ. ಜಿಲ್ಲಾಸ್ಪತ್ರೆಯಲ್ಲಿದ್ದಕೆಲವು ಸಮಸ್ಯೆಗಳನ್ನು ನಿವಾರಿಸಿ, ಎಲ್ಲ ಸೋಂಕಿತರ ವಾರ್ಡ್‌ಗಳಿಗೆ ಸಿಸಿ ಕ್ಯಾಮೆರಾ ಅಳವಡಿಸುವ ಮೂಲಕ ಸೋಂಕಿತರ ಮೇಲೆ ನಿಗಾ ವಹಿಸಲು ಸಾಧ್ಯವಾಗಿದೆ. ತಾಲೂಕು ಆಸ್ಪತ್ರೆಗಳಲ್ಲೂ ಆಕ್ಸಿಜನ್‌ ಕೊರತೆಕಾಡುತ್ತಿತ್ತು. ಇದಕ್ಕಾಗಿ ಮೈಸೂರಿಗೆ ಹೋಗಿ ಆಕ್ಸಿಜನ್‌ತುಂಬಿಸಿಕೊಂಡು ಬರಲು ಅಧಿಕಾರಿಗಳು ಶ್ರಮ ವಹಿಸಿದ್ದಾರೆ. ಈಗ ಆಕ್ಸಿಜನ್‌ಕೊರತೆ ಇಲ್ಲದಂತೆ ನೋಡಿಕೊಳ್ಳಲಾಗುತ್ತಿದೆ.

 

– ಎಚ್‌.ಶಿವರಾಜು

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್‌ಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.