ನೆಗೆಟಿವ್ ವರದಿ ಬಂದ 107 ಮಂದಿ ಬಿಡುಗಡೆ
Team Udayavani, May 29, 2020, 5:13 AM IST
ಕೆ.ಆರ್.ಪೇಟೆ: ತಾಲೂಕಿನ ವಿವಿಧೆಡೆ ಕ್ವಾರಂಟೈನ್ ಕೇಂದ್ರಲ್ಲಿದ್ದು ಕೋವಿಡ್-19 ಪರೀಕ್ಷೆಯಲ್ಲಿ ನೆಗೆಟಿವ್ ಬಂದ 107 ಮಂದಿಯನ್ನು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಬಿಡುಗಡೆ ಮಾಡಿ ಬೀಳ್ಕೊಟ್ಟರು.
ತಾಲೂಕಿನ ನಗರೂರು- ಮಾರ್ಗೋನಹಳ್ಳಿ ಮೊರಾರ್ಜಿ ವಸತಿ ಶಾಲೆಯಲ್ಲಿದ್ದ 49 ಮಂದಿ, ಗವೀಮಠ ವಸತಿ ಶಾಲೆಯಲ್ಲಿದ್ದ 37 ಮಂದಿ, ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿದ್ದ 15 ಮಂದಿ ಹಾಗೂ ವಳಗೆರೆಮೆಣಸ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿದ್ದ 6 ಮಂದಿ ಸೇರಿದಂತೆ ಒಟ್ಟು 107 ಮಂದಿ ಕಳೆದ 15 ದಿನಗಳಿಂದ ಹೋಂ ಕ್ವಾರಂಟೈನ್ ಪೂರ್ಣಗೊಳಿಸಿ, ಕೋವಿಡ್ -19 ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದದ್ದರಿಂದ ಅವರ ಸ್ವಗ್ರಾಮಗಳಿಗೆ ತೆರಳಲು ಅನುಮತಿ ಪತ್ರ ನೀಡಿದರು.
ಕೊರೊನಾ ಸೋಂಕನ್ನು ಆತ್ಮವಿಶ್ವಾಸದಿಂದ ಎದುರಿಸಬೇಕು. ವೈಯಕ್ತಿಕ ಸ್ವತ್ಛತೆಗೆ ಒತ್ತು ನೀಡಬೇಕು. ಈಗ ಬಿಡುಗಡೆಯಾಗಿರುವವರು ತಮ್ಮ ಮನೆಗಳಲ್ಲಿಯೇ ಮತ್ತೆ 14 ದಿನ ಹೋಂ ಕ್ವಾರಂಟೈನಲ್ಲಿರಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸ್ಯಾನಿಟೈಸರ್ ಅಥವಾ ಸೋಪಿನಿಂದ ಆಗಾಗ್ಗೆ ಕೈ ಸ್ವತ್ಛಗೊಳಿಸಿಕೊಳ್ಳಬೇಕು. ಪೌಷ್ಟಿಕ ಆಹಾರ ಸೇವಿಸಬೇಕು. ಗ್ರಾಮಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಶಿವಮೂರ್ತಿ, ಜಿಲ್ಲಾ ಬಿಸಿಎಂ ಅ ಧಿಕಾರಿ ಸೋಮಶೇಖರ್, ಡಾ.ಮಧುಸೂದನ್, ಜಿಲ್ಲಾ ನೋಡೆಲ್ ಆರೋಗ್ಯಾ ಧಿಕಾರಿ ಡಾ.ಬೆಟ್ಟಸ್ವಾಮಿ, ತಾಲೂಕು ಸಮಾಜ ಕಲ್ಯಾಣಾ ಕಾರಿ ಡಾ.ಮನುಕುಮಾರ್, ತಾಪಂ ಇಒ ಚಂದ್ರಮೌಳಿ, ರಾಜಸ್ವ ನಿರೀಕ್ಷಕ ರಾಜಮೂರ್ತಿ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಡಾ. ನಾರಾಯಣಮೂರ್ತಿ, ತೋಟಗಾರಿಕಾ ಅಧಿ ಕಾರಿ ಡಾ.ಜಯರಾಂ, ಗವೀಮಠ ವಸತಿ ಶಾಲೆಯ ಕೋವಿಡ್-19 ಕ್ವಾರಂಟೈನ್ ನೋಡಲ್ ಅ ಧಿಕಾರಿ ರಾಜಶೇಖರ್ ಮತ್ತಿತರರಿದ್ದರು.
ಕೈ ಮುಗಿದು ಧನ್ಯವಾದ: ವಿವಿಧ ಶಾಲಾ- ಕಾಲೇಜುಗಳಲ್ಲಿ ಕ್ವಾರಂಟೈ ನಲ್ಲಿ ಕೋವಿಡ್ -19 ಪರೀಕ್ಷಾ ವರದಿ ಏನಾಗುವುದೋ ಎಂಬ ಆತಂಕದಲ್ಲಿದ್ದ 107 ಮಂದಿ ಮುಂಬೈ ಕನ್ನಡಿಗರು ಕೊರೊನಾ ಸೋಂಕಿನ ದವಡೆ ಯಿಂದ ಪಾರಾಗಿ ನಿಟ್ಟುಸಿರು ಬಿಟ್ಟರು. 15 ದಿನಗಳಿಂದ ಮನೆಯ ವರಂತೆ ನೋಡಿಕೊಂಡ ತಾಲೂಕು ಆಡಳಿತ ಹಾಗೂ ಜಿಲ್ಲಾಡಳಿತಕ್ಕೆ ಕೃತಜ್ಞತೆ ಅರ್ಪಿಸಿ ಸ್ವಗ್ರಾಮಗಳತ್ತ ಹೆಜ್ಜೆ ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
ಹಾಲಾದರೂ ನೀಡಿ, ವಿಷವಾದರೂ ನೀಡಿ; ನಾನು ಸ್ವೀಕರಿಸುತ್ತೇನೆ: ಎಚ್ಡಿಕೆ
ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ